ಕ್ರಿಕೆಟ್ಸ್ಪೋರ್ಟ್ಸ್ ಕನ್ನಡ ಉತ್ತರ ಕನ್ನಡ ಜಿಲ್ಲೆ ಪ್ರತಿನಿಧಿಯಾಗಿ ಇಬ್ರಾಹಿಂ ನಫೀಸ್ ನೇಮಕ

ಸ್ಪೋರ್ಟ್ಸ್ ಕನ್ನಡ ಉತ್ತರ ಕನ್ನಡ ಜಿಲ್ಲೆ ಪ್ರತಿನಿಧಿಯಾಗಿ ಇಬ್ರಾಹಿಂ ನಫೀಸ್ ನೇಮಕ

-

- Advertisment -spot_img

ಸ್ಪೋರ್ಟ್ಸ್ ಕನ್ನಡ ಉತ್ತರ ಕನ್ನಡ ಜಿಲ್ಲೆ ಪ್ರತಿನಿಧಿಯಾಗಿ ಇಬ್ರಾಹಿಂ ನಫೀಸ್ ನೇಮಕ

ಉತ್ತರ ಕನ್ನಡ ಜಿಲ್ಲೆಯ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಇಬ್ರಾಹಿಂ ನಫೀಸ್ ಕ್ವಾಜಿ ಅವರು ಸ್ಪೋರ್ಟ್ಸ್ ಕನ್ನಡದ ಉತ್ತರ ಕನ್ನಡ ಜಿಲ್ಲೆ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ. ಕುಮಟಾ ಮೂಲದ ಇಬ್ರಾಹಿಂ ನಫೀಸ್ ಅವರು ಕ್ರೀಡೆಗಳ ಮೇಲಿನ ಅಪಾರ ಆಸಕ್ತಿ, ನಿಷ್ಠೆ ಮತ್ತು ಸಂಘಟನೆ ಕೌಶಲ್ಯದ ಮೂಲಕ ಜಿಲ್ಲೆಯಲ್ಲೇ ವಿಶಿಷ್ಟ ಸ್ಥಾನವನ್ನು ಪಡೆದಿದ್ದಾರೆ.

ಇವರು ಕೇವಲ ಆಟಗಾರರಾಗಿ ಮಾತ್ರವಲ್ಲದೆ, ಯಶಸ್ವಿ ಆರ್ಗನೈಸರ್ ಮತ್ತು ಆಕ್ಷನಿಯರ್ ಆಗಿಯೂ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಪ್ರಸ್ತುತ ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅವರು, ವಿವಿಧ ಕ್ರೀಡಾ ಚಟುವಟಿಕೆಗಳ ಮೂಲಕ ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದ್ದಾರೆ.

ಇಬ್ರಾಹಿಂ ನಫೀಸ್ ಅವರ ನೇತೃತ್ವದಲ್ಲಿ ಹಲವು ಪ್ರಮುಖ ಟೂರ್ನಮೆಂಟ್‌ಗಳು ಯಶಸ್ವಿಯಾಗಿ ನಡೆದಿವೆ. MICMAC ಟ್ರೋಫಿ (ಸೀಸನ್ 1 ಮತ್ತು 2), BCA ಕಪ್, KMYF ಕಬಡ್ಡಿ ಕಪ್, ಗಾಡ್ವಿನ್ ಸೈಕಲ್ ರೇಸ್, ಇಂಡೋರ್ ಬಾಕ್ಸ್ ಕ್ರಿಕೆಟ್ ಮತ್ತು KSC ಕಪ್ ಮುಂತಾದ ಕಾರ್ಯಕ್ರಮಗಳು ಜಿಲ್ಲೆಯ ಕ್ರೀಡಾ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿವೆ.

ಪ್ರಸ್ತುತ ಅವರು ಹೊನ್ನಾವರದಲ್ಲಿರುವ ಗಾಡ್ವಿನ್ ಸೈಕಲ್ಸ್‌ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ವೃತ್ತಿ ಜೀವನದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ತಮ್ಮ ಉತ್ತಮ ವ್ಯಕ್ತಿತ್ವ, ಕ್ರೀಡೆಗಳ ಮೇಲಿನ ಅಪಾರ ಪ್ರೀತಿ ಮತ್ತು ನಿಷ್ಠೆಯಿಂದ ಇಬ್ರಾಹಿಂ ನಫೀಸ್ ಅವರು ಸ್ಪೋರ್ಟ್ಸ್ ಕನ್ನಡದ ಉತ್ತರ ಕನ್ನಡ ಜಿಲ್ಲೆ ಪ್ರತಿನಿಧಿಯಾಗಿ ನೇಮಕವಾಗಿರುವುದು ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ. ಇವರ ನೇಮಕದಿಂದ ಉತ್ತರ ಕನ್ನಡ ಜಿಲ್ಲೆಯ ಕ್ರೀಡಾ ಚಟುವಟಿಕೆಗಳಿಗೆ ಇನ್ನಷ್ಟು ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಸಿರ್ಸಿ, ಸಿದ್ಧಾಪುರ, ಯಲ್ಲಾಪುರ, ಹಳಿಯಾಳ, ಮುಂಡಗೋಡು ಮತ್ತು ಜೊಯ್ಡಾ ಈ ಭಾಗದ ಕ್ರೀಡಾಕೂಟದ ಆಯೋಜಕರು ತಮ್ಮ ಕ್ರೀಡಾಕೂಟದ ಸುದ್ದಿ ನೇರ ಪ್ರಸಾರ ಅಥವಾ ಜಾಹೀರಾತು ನೀಡಲು ಇಚ್ಛಿಸುವವರು ಇಬ್ರಾಹಿಂ ನಫೀಸ್ ಅವರ 79968 28178 ಈ ನಂಬರ್ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

sixteen − 5 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you