ಕ್ರಿಕೆಟ್ಐಸಿಸಿ ಚಾಂಪಿಯನ್ಸ್ ಟ್ರೋಫಿ: ರಿಷಭ್ ಪಂತ್‌ಗಿಂತ ರಾಹುಲ್ ಯಾಕೆ ಬೆಟರ್?

ಐಸಿಸಿ ಚಾಂಪಿಯನ್ಸ್ ಟ್ರೋಫಿ: ರಿಷಭ್ ಪಂತ್‌ಗಿಂತ ರಾಹುಲ್ ಯಾಕೆ ಬೆಟರ್?

-

- Advertisment -spot_img

ಐಸಿಸಿ ಚಾಂಪಿಯನ್ಸ್ ಟ್ರೋಫಿ: ರಿಷಭ್ ಪಂತ್‌ಗಿಂತ ರಾಹುಲ್ ಯಾಕೆ ಬೆಟರ್?

ಮಿನಿ ವಿಶ್ವಕಪ್ ಖ್ಯಾತಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಿನ್ನು ಒಂದು ತಿಂಗಳಷ್ಟೇ ಬಾಕಿ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಫೆಬ್ರವರಿ 19ರಂದು ಆರಂಭವಾಗಲಿದ್ದು, ಪಂದ್ಯಗಳು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ.

ಮಿನಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆ ಜನವರಿ 12ರಂದು ನಡೆಯಲಿದ್ದು, ರೋಹಿತ್ ಶರ್ಮಾ ನಾಯಕನಾಗಿ ಮುಂದುವರಿಯುವುದು ಬಹುತೇಕ ಖಚಿತ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ಫಸ್ಟ್ ಚಾಯ್ಸ್ ವಿಕೆಟ್ ಕೀಪರ್ ಆಗಿ ಕೆ.ಎಲ್ ರಾಹುಲ್ ಆಯ್ಕೆಯಾಗುವ ಸಾಧ್ಯತೆಯಿದೆ. ಟೆಸ್ಟ್ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಸ್ಪರ್ಧೆಯಲ್ಲಿದ್ದಾರೆ. ಆದರೆ ಅಂಕಿ ಅಂಶಗಳ ಪ್ರಕಾರ ರಿಷಭ್ ಪಂತ್’ಗಿಂತ ರಾಹುಲ್ ಅವರೇ ಉತ್ತಮ ಆಯ್ಕೆ.

ಏಕದಿನ ಕ್ರಿಕೆಟ್’ನಲ್ಲಿ ರಾಹುಲ್ Vs ರಿಷಭ್ ಪಂತ್

ಕೆ.ಎಲ್ ರಾಹುಲ್
ಪಂದ್ಯ: 77
ರನ್: 2851
ಸರಾಸರಿ: 49.15
ಸ್ಟ್ರೈಕ್’ರೇಟ್: 87.56
ಶತಕ: 07
ಅರ್ಧಶತಕ: 18
ಬೌಂಡರಿ: 226
ಸಿಕ್ಸರ್: 61

ರಿಷಭ್ ಪಂತ್
ಪಂದ್ಯ: 31
ರನ್: 871
ಸರಾಸರಿ: 33.50
ಸ್ಟ್ರೈಕ್’ರೇಟ್: 106.21
ಶತಕ: 01
ಅರ್ಧಶತಕ: 05
ಬೌಂಡರಿ: 91
ಸಿಕ್ಸರ್: 26

ಗಾಯದಿಂದ ಚೇತರಿಸಿಕೊಂಡ ನಂತರ ರಿಷಭ್ ಪಂತ್ ಕೇವಲ ಒಂದು ಏಕದಿನ ಪಂದ್ಯವಾಡಿದ್ದಾರೆ. ಮತ್ತೊಂದೆಡೆ ಇತ್ತೀಚಿನ ದಿನಗಳಲ್ಲಿ ಟೀಮ್ ಇಂಡಿಯಾ ಏಕದಿನ ತಂಡದ ಖಾಯಂ ವಿಕೆಟ್ ಕೀಪರ್ ಆಗಿರುವ ಕೆ.ಎಲ್ ರಾಹುಲ್ ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಭಾರತ ಫೈನಲ್ ಪ್ರವೇಶಿಸಲು ಕಾರಣರಾಗಿದ್ದರು. ಆ ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ 10 ಪಂದ್ಯಗಳಿಂದ 452 ರನ್ ಕಲೆ ಹಾಕಿದ್ದರು. ಐದನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ಏಕದಿನ ತಂಡದ ಆಧಾರಸ್ಥಂಭವಾಗಿರುವ ರಾಹುಲ್, ಮಿನಿ ವಿಶ್ವಕಪ್”ನಲ್ಲಿ ತಂಡದ ಮೊದಲ ಪ್ರಾಶಸ್ತ್ಯದ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆಯಾಗಲಿದ್ದಾರೆ.

LEAVE A REPLY

Please enter your comment!
Please enter your name here

5 − two =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you