12.8 C
London
Monday, May 20, 2024
Homeಕ್ರಿಕೆಟ್ಶಿರ್ವ-ಹೆಚ್.ಜೆ.ಸಿ. ಕ್ರಿಕೆಟ್ ಅಕಾಡೆಮಿ ತೃತೀಯ ಆವೃತ್ತಿ ಉದ್ಘಾಟನೆ

ಶಿರ್ವ-ಹೆಚ್.ಜೆ.ಸಿ. ಕ್ರಿಕೆಟ್ ಅಕಾಡೆಮಿ ತೃತೀಯ ಆವೃತ್ತಿ ಉದ್ಘಾಟನೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಶಿರ್ವ,ನ.29: ಇಂದು ಸ್ಥಳೀಯ ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘ ಪ್ರಾಯೋಜಿತ ತೃತೀಯ ಆವೃತ್ತಿಯ ಸೀಸನ್ ಬಾಲ್ ಕ್ರಿಕೆಟ್ ತರಬೇತಿ
ಇಂದು ಸ್ಥಳೀಯ ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘ ಪ್ರಾಯೋಜಿತ ತೃತೀಯ ಆವೃತ್ತಿಯ ಸೀಸನ್ ಬಾಲ್ ಕ್ರಿಕೆಟ್ ತರಬೇತಿ ಕಾರ್ಯಕ್ರಮವನ್ನು ಉಡುಪಿ, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಟರಾದ  ಶ್ರೀಚೇತನ್ IPS ಅವರು ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಿದ್ದರೆ ಶಿಸ್ತು ಮತ್ತು ಕಠಿಣ ಪರಿಶ್ರಮ ಅಗತ್ಯ ಎಂಬ ಕಿವಿಮಾತನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಇಲ್ಲಿನ ತರಬೇತು ದಾರರಾಗಿರುವ ಶ್ರೀ ಸದಾನಂದ್ ಶಿರ್ವ ಅವರು ಕರ್ನಾಟಕ ಬ್ಯಾಂಕ್ ತಿಪಟೂರಿನಲ್ಲಿ ಕೆಲಸಮಾಡುತ್ತಿದ್ದ ಸಂದರ್ಭದಲ್ಲಿ ನಾನಿನ್ನೂ 6ನೆಯ ತರಗತಿಯ ವಿಧ್ಯಾರ್ಥಿ  ಆ ದಿನಗಳಲ್ಲಿ  ಅವರು  ನಮಗೆ  ಕ್ರಿಕೆಟ್  ಆಡಲು ತರಬೇತಿ ನೀಡಿದ್ದರು ಅವರಂತಹ ತರಬೇತುದಾರರು ನಿಮಗೆ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು.
ಸಮಾರಂಭದ ಆಧ್ಯಕ್ಷತೆಯನ್ನು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ  ಶ್ರೀ ಬಾಲಕೃಷ್ಣ ಪರ್ಕಳ ಮತ್ತು ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಸಚ್ಚಿದಾನಂದ ಹೆಗ್ಡೆ ಅವರು ಭಾಗವಹಿಸಿದ್ದರು.ತರಬೇತುದಾರರಾದ ಶ್ರೀ ಸದಾನಂದ ಶಿರ್ವ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಶ್ರೀ ಪ್ರಶಾಂತ್ ಶೆಟ್ಟಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಶ್ರೀ ರಮಾನಂದ.ಎಸ್, ಮಣಿಪಾಲ ಕ್ರಿಕೆಟ್ ಅಕಾಡಮಿಯ  ತರಬೇತುದಾರ ರಾದ  ಶ್ರೀ ರೆನ್,ನಿವೃತ ಅಧ್ಯಾಪಕರಾದ ಶ್ರೀ ಪ್ರಭಾಕರ್,ಶ್ರೀ ಅನಂತ ಮೂಡಿತ್ತಾಯ, ಹಿರಿಯ ಕ್ರಿಕೆಟರ್ ಗಳಾದ ಶ್ರೀ ಸಫ್ದಾರ್, ಸಯ್ಯದ್, ರಾಜೇಶ್ ಮಚಾದೋ, ಮತ್ತು ಹಳೆವಿದ್ಯಾರ್ಥಿ   ಸದಸ್ಯರಾದ ಶ್ರೀ ಡೇವಿಡ್, ರೂಪೇಶ್ ಆಚಾರ್ಯ,ನವೀನ್ ಶೆಟ್ಟಿ,ರಾಜೇಶ್ ಶೆಟ್ಟಿ, ಶ್ರೀ ಶೇಖರ್,ನವೀನ್
ಮೋಹನ್ ಇವರು ಉಪಸ್ತಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty + 15 =