16.4 C
London
Monday, May 13, 2024
Homeಕ್ರಿಕೆಟ್4 ವರ್ಷದ ಸೇಡಿನ ಬೆಂಕಿಯಲ್ಲಿ ಜಿದ್ದಾ ಜಿದ್ದಿನ ಪೈಪೋಟಿ-ಕಿವೀಸ್ ಕಿವಿ ಹಿಂಡುವುದೇ ಭಾರತ???

4 ವರ್ಷದ ಸೇಡಿನ ಬೆಂಕಿಯಲ್ಲಿ ಜಿದ್ದಾ ಜಿದ್ದಿನ ಪೈಪೋಟಿ-ಕಿವೀಸ್ ಕಿವಿ ಹಿಂಡುವುದೇ ಭಾರತ???

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಭಾರತ ವಿರುದ್ಧ ನ್ಯೂಜಿಲೆಂಡ್: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ವಿಶ್ವಕಪ್‌ನಲ್ಲಿ ಪ್ರಬಲ ಪ್ರದರ್ಶನ ನೀಡಿದೆ. ಭಾರತ ತಂಡ ವಿಶ್ವಕಪ್‌ನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನು ಗೆದ್ದಿದೆ.
ನಾಲ್ಕು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಎಂಟು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಸತತ ನಾಲ್ಕನೇ ಪಂದ್ಯವನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರಿಸಿದೆ. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ಸುಲಭ ಗೆಲುವು ಸಾಧಿಸಿದ ಭಾರತ ಇದೀಗ ಮತ್ತೊಂದು ಕಠಿಣ ಪೈಪೋಟಿಗೆ ಸಿದ್ಧವಾಗಿದೆ. ಭಾರತದ ಮುಂದಿನ ಪಂದ್ಯ ನ್ಯೂಜಿಲೆಂಡ್ ವಿರುದ್ಧ. ಭಾರತ ತಂಡ ತನ್ನ ಐದನೇ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ಆಡಲಿದೆ.
ನ್ಯೂಜಿಲೆಂಡ್ ತಂಡವನ್ನು ಮುಂದಿನ ಪಂದ್ಯದಲ್ಲಿ ಭಾರತ ಎದುರಿಸಲಿದ್ದು ಧರ್ಮಶಾಲಾದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಭಾರತ ತಂಡ  ಭಾನುವಾರ ನಡೆಯಲಿರುವ ಪೈಪೋಟಿಯ ಪಂದ್ಯಕ್ಕೆ ಸನ್ನದ್ದವಾಗಲಿದೆ. ಇನ್ನು ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆಯಲಿರುವ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಅನಿವಾರ್ಯವಾಗಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಹಾರ್ದಿಕ್ ಮುಂದಿನ ಪಂದ್ಯದಿಂದ ಹೊರಗುಳಿಯುವುದು ಇದೀಗ ಖಚಿತವಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಬದಲಿಗೆ ಟೀಮ್ ಇಂಡಿಯಾದಲ್ಲಿ ಯಾರಿಗೆ ಆಡುವ ಬಳಗದಲ್ಲಿ ಅವಕಾಶ ದೊರೆಯಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
 *4 ವರ್ಷದ ಸೇಡಿನ ಬೆಂಕಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ* :
ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಅವಕಾಶ ಭಾರತಕ್ಕೆ ಸಿಕ್ಕಿದೆ.ವಿಶ್ವಕಪ್ ಅಥವಾ ಯಾವುದೇ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್ ಭಾರತಕ್ಕೆ ಪೈಪೋಟಿ ನೀಡುತ್ತಿದೆ. 4 ವರ್ಷಗಳ ಹಿಂದೆ ನ್ಯೂಜಿಲೆಂಡ್ ವಿರುದ್ಧ 2019 ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಸೋತಿತ್ತು. 2019 ರ ಸೆಮಿಫೈನಲ್ ಪಂದ್ಯದಲ್ಲಿ ಸೋತ ನಂತರ ಕೋಟ್ಯಂತರ ಅಭಿಮಾನಿಗಳು ಎದೆಗುಂದಿದ್ದರು. ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ರನ್ ಔಟ್ ಆಗಿದ್ದು ಇಂದಿಗೂ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತದೆ. ಭಾರತ ತಂಡ ನ್ಯೂಜಿಲೆಂಡ್ ಜೊತೆಗಿನ ಹಳೆಯ ಲೆಕ್ಕಾಚಾರ ಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸುತ್ತದೆ.
 *ರೋಹಿತ್ ಬ್ಯಾಟ್ ಸಂಚಲನ ಮೂಡಿಸಲಿದೆ* :
ಈ ಬಾರಿಯ ವಿಶ್ವಕಪ್ ನಲ್ಲಿ ನಾಯಕ ರೋಹಿತ್ ಶರ್ಮಾ ತಮ್ಮ ಹಳೆಯ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. 2019 ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಐದು ಶತಕಗಳನ್ನು ಗಳಿಸಿದ್ದರು. ಈ ವರ್ಷವೂ ಅವರು ಸ್ಫೋಟಕ ಫಾರ್ಮ್‌ನಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ರೋಹಿತ್ ಶರ್ಮಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇದಲ್ಲದೆ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ತಂಡಕ್ಕೆ ಉತ್ತಮ ಆರಂಭವನ್ನು ನೀಡುವಲ್ಲಿ ರೋಹಿತ್ ಯಶಸ್ಸನ್ನು ಸಾಧಿಸಿದ್ದರು. ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧವೂ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ಬಯಸುತ್ತಾರೆ.
 *ಕಿಂಗ್ ಕೊಹ್ಲಿ ಗಮನದಲ್ಲಿರುತ್ತಾರೆ* :
ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಅತ್ಯಂತ ಪ್ರಮುಖ ಆಟಗಾರ. ಕಿಂಗ್ ಕೊಹ್ಲಿ ಈ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ವಿರುದ್ಧ ಅದ್ಭುತವಾಗಿ ಆರಂಭಿಸಿದರು. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕಾಂಗಿಯಾಗಿ ತಿರುಗೇಟು ನೀಡಿದ್ದರು. ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲೂ ನ್ಯೂಜಿಲೆಂಡ್ ವಿರುದ್ಧ ತಮ್ಮ ಫಾರ್ಮ್ ಅನ್ನು ಉಳಿಸಿಕೊಳ್ಳಲು ಬಯಸುತ್ತಾರೆ.
ಭಾರತ ತಂಡದ ಬ್ಯಾಟ್ಸ್ ಮನ್ ಗಳು ಸದ್ಯ ಪ್ರಚಂಡ ಫಾರ್ಮ್ ನಲ್ಲಿದ್ದಾರೆ. ನ್ಯೂಜಿಲೆಂಡ್‌ನ ಬೌಲರ್‌ಗಳ ಪ್ರದರ್ಶನವೂ ಇಲ್ಲಿಯವರೆಗೆ ಪ್ರಬಲವಾಗಿದೆ. ಹೀಗಿರುವಾಗ ಈ ಎರಡು ತಂಡಗಳ ಆಟಗಾರರ ನಡುವಿನ ಹಣಾಹಣಿ ಕುತೂಹಲ ಮೂಡಿಸುವ ಸಾಧ್ಯತೆ ಇದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಮತ್ತು ನ್ಯೂಜಿಲೆಂಡ್ ಎರಡೂ ಸೆಮಿಫೈನಲ್‌ಗೆ ತಮ್ಮ ಹಕ್ಕು ಬಲಪಡಿಸುವ ಅವಕಾಶವನ್ನು ಹೊಂದಿವೆ.
ಅಂತೂ ಇಂತೂ ಕಿವೀಸ್ ವಿರುದ್ಧ ಸೆಣೆಸಾಡಲು ಧರ್ಮಶಾಲಾಗೆ ಬಂದಿಳಿದಿದೆ ರೋಹಿತ್ ಪಡೆ.
ಭಾರತದ ಗೆಲುವಿನ ಯಾತ್ರೆ ಮುಂದುವರೆಯಲಿ.
 🖊 ಸುರೇಶ್ ಭಟ್ ಮೂಲ್ಕಿ
       ಟೀಮ್ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 − thirteen =