Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕುಂದಾಪುರ ಗಾಂಧಿ ಮೈದಾನದಲ್ಲಿ ಇಂದು ಇಂಡಿಪೆಂಡೆನ್ಸ್ ಡೇ ಟ್ರೋಫಿ-2022

ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಇಂದು ಆಗಸ್ಟ್ 21 ರವಿವಾರದಂದು ಇಂಡಿಪೆಂಡೆನ್ಸ್ ಡೇ ಕಪ್-2022 ಆಯೋಜಿಸಲಾಗಿದೆ.
ಒಟ್ಟು 6 ತಂಡಗಳು ‌ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,ವಿಶೇಷವಾಗಿ ತಂಡಗಳಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಸ್ವಾತಂತ್ರ್ಯ ವೀರರ ಹೆಸರಿಡಲಾಗಿದೆ.
ತಂಡಗಳ ವಿವರ
1)ನೇತಾಜಿ ವಾರಿಯರ್ಸ್
2)ಸುಖದೇವ್ ವಾರಿಯರ್ಸ್
3)ಭೋಸ್ ಆರ್ಮಿ
4)ರಾಯಣ್ಣ ವಾರಿಯರ್ಸ್
5)ರಾಣಿ ಚೆನ್ನಮ್ಮ ವಾರಿಯರ್ಸ್
6)ಭಗತ್ ಸಿಂಗ್ ವಾರಿಯರ್ಸ್
ಪಂದ್ಯಾವಳಿಯ ವಿಜೇತ ತಂಡಗಳು ಆಕರ್ಷಕ ಟ್ರೋಫಿ ಸಹಿತ ನಗದು ಬಹುಮಾನಗಳನ್ನು ಪಡೆಯಲಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

11 + 7 =