ಕ್ರಿಕೆಟ್ಭಾರತದ ಸಿಂಹ ಘರ್ಜನೆ; ಇನ್ಕ್ರೆಡಿಬಲ್ ಪರ್ಫಾರ್ಮೆನ್ಸ್

ಭಾರತದ ಸಿಂಹ ಘರ್ಜನೆ; ಇನ್ಕ್ರೆಡಿಬಲ್ ಪರ್ಫಾರ್ಮೆನ್ಸ್

-

- Advertisment -spot_img
ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನ ಮಹತ್ವದ ಎನ್‌ಕೌಂಟರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಶುಭಾರಂಭ ಮಾಡಿತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.
ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಸ್ಫೋಟಕ ರೀತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಈ ಅವಧಿಯಲ್ಲಿ, ರೋಹಿತ್ ಶರ್ಮಾ ಮೈದಾನದ ಸುತ್ತಲೂ ಬೌಂಡರಿ ಮತ್ತು ಸಿಕ್ಸರ್ ಬಾರಿಸುವ ಕೆಲಸ ಮಾಡಿದರು. Well Played..ಕ್ಯಾಪ್ಟನ್!  Good start!
 *ಸ್ಫೋಟಕ ಆಟವಾಡಿದ ರೋಹಿತ್:* ರೋಹಿತ್ ಶರ್ಮಾ 29 ಎಸೆತಗಳಲ್ಲಿ 47 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಟಿಮ್ ಸೌದಿ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಅವರು ತಮ್ಮ ವಿಕೆಟ್ ಕಳೆದುಕೊಂಡರು. ಡೈವಿಂಗ್ ಮಾಡಿದ ಕೇನ್ ವಿಲಿಯಮ್ಸನ್ ರೋಹಿತ್ ಅವರ ಅದ್ಭುತ ಕ್ಯಾಚ್ ಪಡೆದರು. ಈ ಕ್ಯಾಚ್ ತುಂಬಾ ಕಷ್ಟಕರವಾಗಿತ್ತು ಆದರೆ ವಿಲಿಯಮ್ಸನ್ ಅತ್ಯುತ್ತಮ ಫೀಲ್ಡಿಂಗ್ ಪ್ರದರ್ಶಿಸಿ ಕ್ಯಾಚ್ ಹಿಡಿದರು. ರೋಹಿತ್ ಶರ್ಮಾ ರೂಪದಲ್ಲಿ ಭಾರತಕ್ಕೆ ದೊಡ್ಡ ಆಘಾತವಾಯಿತು. ರೋಹಿತ್ ಶರ್ಮಾ ಔಟಾದ ನಂತರ, ವಾಂಖೆಡೆಯಲ್ಲಿ ಪಿನ್ ಡ್ರಾಪ್ ಮೌನ ಕಂಡುಬಂದಿತು.
 *ಸಚಿನ್ ಸಮ್ಮುಖದಲ್ಲೇ ದಾಖಲೆ ಮುರಿದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ!  ಶತಕಗಳ ಅರ್ಧಶತಕ! :* ರೋಹಿತ್ ಶರ್ಮಾ ನಂತರ ಮೈದಾನಕ್ಕೆ ಬ್ಯಾಟಿಂಗ್ ಗೆ ಬಂದ ವಿರಾಟ್ ಕೊಹ್ಲಿ ಕೂಡ ಉತ್ತಮ ಹೊಡೆತಗಳನ್ನು ಬಾರಿಸಿದರು. ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ ಶುಭಮನ್ ಗಿಲ್ ಅವರೊಂದಿಗೆ ಉತ್ತಮ ಜೊತೆಯಾಟವಾಡಿದರು. ಈ ಅವಧಿಯಲ್ಲಿ ವಿರಾಟ್ ಕೊಹ್ಲಿ ಕೂಡ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಮಾಡುವಲ್ಲಿ ಯಶಸ್ವಿಯಾದರು. ವಾಸ್ತವವಾಗಿ, ವಿರಾಟ್ ಕೊಹ್ಲಿ ಈ ವಿಶ್ವಕಪ್‌ನಲ್ಲಿ 640 ಕ್ಕೂ ಹೆಚ್ಚು ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 594 ರನ್ ಗಳಿಸಿದ್ದರು. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ. ಮುಂಬೈನಲ್ಲಿ ವಿರಾಟ್ ಅವರ ಅದ್ಭುತ ಪ್ರದರ್ಶನಕ್ಕೆ ಇಡೀ ವಾಂಖೆಡೆ ಸ್ಟೇಡಿಯಂ ಮತ್ತು  ಟೆಲಿವಿಷನ್‌ಗಳಿಗೆ ಅಂಟಿಕೊಂಡಿದ್ದ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು. ಕೊಯ್ಲಿ ಆಟಕ್ಕೆ ಅಭಿಮಾನಿಗಳು ಫಿದಾ ಆದರು. ಭಾರತದ ಚೇಸ್ ಮಾಸ್ಟರ್ ಸಚಿನ್ ಅವರ ಮತ್ತೊಂದು ದಾಖಲೆಯನ್ನು ಬೆನ್ನಟ್ಟಿದಾಗ ಇಡೀ ವಾಂಖೆಡೆ ಸ್ಟೇಡಿಯಂ ಹುಚ್ಚೆದ್ದು ಕುಣಿದಾಡಿತು. ಕ್ರಿಕೆಟ್ ದೇವರ ದಾಖಲೆ ಧ್ವಂಸಗೊಳಿಸಿದ ದೊರೆ ಕಿಂಗ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಭಾರತೀಯ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮೂರು ದಾಖಲೆಗಳನ್ನು ಅಳಿಸಿಹಾಕಿ ಮೂಲೆಗುಂಪು ಮಾಡಿದ್ದಾರೆ.ವಿರಾಟ್ ಕೊಹ್ಲಿ 50 ಏಕದಿನ ಶತಕ ಸಿಡಿಸಿದ ಸಾರ್ವಕಾಲಿಕ ಮೊದಲ ಬ್ಯಾಟರ್ ಆದರು.
 *ಸಾರ್ವಕಾಲಿಕ ಶ್ರೇಷ್ಠ!* 🐐 
 *ಈ ಪೀಳಿಗೆಯ ಶ್ರೇಷ್ಠ ಆಟಗಾರ!* 
 *ಆಡು ಮುಟ್ಟದ ಸೊಪ್ಪಿಲ್ಲ, ಕ್ರಿಕೆಟ್ ನ 🐐 ವಿರಾಟ್ ಕೊಹ್ಲಿ ಅಂದ್ರೂ ತಪ್ಪಿಲ್ಲ* .
ವಿಶ್ವ ಕಪ್‌ನಲ್ಲಿ ವಿರಾಟ್ ಕೊಹ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ ನಾನ್ ಓಪನರ್ ಅಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಟೂರ್ನಿಯಲ್ಲಿ ಇಷ್ಟು ರನ್ ಗಳಿಸಿದ್ದು ಇದೇ ಮೊದಲು. ಈ ಹಿಂದೆ, ವಿಶ್ವಕಪ್‌ನಲ್ಲಿ 600 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಗಳಿಸಿದಾಗ, ಆರಂಭಿಕ ಬ್ಯಾಟ್ಸ್‌ಮನ್‌ಗಳು ಅದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಪರ ಸಚಿನ್ ತೆಂಡೂಲ್ಕರ್ ರನ್ ಗಳಿಸಿದಾಗಲೆಲ್ಲ ತಂಡದ ಪರ ಆರಂಭಿಕ ಬ್ಯಾಟ್ಸ್ ಮನ್ ಆಗಿ ಆಡುತ್ತಿದ್ದರು. ಆದರೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಉಳಿದುಕೊಂಡರು.ಇದರೊಂದಿಗೆ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದರು. ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
 ಶ್ರೇಯಸ್ ಅಯ್ಯರ್ ಅವರು ಸದ್ದಿಲ್ಲದೆ ಏಕದಿನ ವಿಶ್ವಕಪ್‌ನಲ್ಲಿ ಸತತ ಎರಡು ಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಎನಿಸಿಕೊಂಡರು.
ಮುಂಬೈನಲ್ಲಿ ಧೂo ಧಮಾಕ ಬ್ಯಾಟಿಂಗ್ ಮಾಡಿದ ಭಾರತ ಏಕದಿನ ವಿಶ್ವಕಪ್‌  ಇತಿಹಾಸ ನಾಕೌಟ್ ಪಂದ್ಯದಲ್ಲಿ ಗರಿಷ್ಠ ರನ್ ಗಳಿಸಿತು. ವಾಂಖೆಡೆಯಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಭವದಿಂದಾಗಿ ಕಿವೀಸ್‌ಗೆ ಗೆಲ್ಲಲು 398 ರನ್ ಗಳ  ಬೃಹತ್ ಗುರಿ ನೀಡಿತು. ಉತ್ತರವಾಗಿ  ನ್ಯೂಜಿಲ್ಯಾಂಡ್ ಅಪಾರ ಒತ್ತಡದಲ್ಲಿ ತತ್ತರಿಸಿತು. ಮೊಹಮ್ಮದ್ ಶಮಿ ಅಮೋಘವಾದ ಬೌಲಿಂಗ್‌ನಲ್ಲಿ  ಏಳು ವಿಕೆಟ್‌ಗಳನ್ನು ಪಡೆದರು.
2019ರ ಸೆಮಿಫೈನಲ್ ಸೋಲಿಗೆ ಟೀಮ್ ಇಂಡಿಯಾ ಪ್ರತಿಕಾರ ನೀಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ ರೋಹಿತ್ ಬಳಗ! ಭಾರತವು ಕಮಾಂಡಿಂಗ್ ಸ್ಥಾನದಲ್ಲಿದೆ ಮತ್ತು ಅಹಮದಾಬಾದ್‌ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಬ್ಲಾಕ್ ಬಸ್ಟರ್  ಫೈನಲ್‌ನಲ್ಲಿ ತಮ್ಮ ದಿನಾಂಕವನ್ನು ನಿಗದಿಪಡಿಸಿದೆ.
✍🏼ಸುರೇಶ್ ಭಟ್, ಮೂಲ್ಕಿ
ಕ್ರೀಡಾ ಲೇಖಕ
ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × three =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you