18.4 C
London
Saturday, May 18, 2024
Homeಕ್ರಿಕೆಟ್ಡಿಸೆಂಬರ್ 15 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಏಕದಿನ...ಸೂಪರ್ ಸಂಡೆಯಲ್ಲಿ ಯಾರಿಗೆ ಗೆಲುವು?

ಡಿಸೆಂಬರ್ 15 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಏಕದಿನ…ಸೂಪರ್ ಸಂಡೆಯಲ್ಲಿ ಯಾರಿಗೆ ಗೆಲುವು?

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ನಾಳೆಯಿಂದ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಏಕದಿನ ಸರಣಿ ಅಡಲಿದ್ದು, ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಎರಡು ತಂಡಗಳು ಕಠಿಣ ಅಭ್ಯಾಸ ನಡೆಸುತ್ತಿವೆ. ಟಿ20 ಸರಣಿ ಭರ್ಜರಿ ಗೆಲುವಿನ ಬೆನ್ನಲ್ಲೇ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಸಿದ್ಧವಾಗಿದ್ದು, ಮೊದಲ ಪಂದ್ಯ ಆಡಲು ಚೆನ್ನೈಗೆ ಬಂದಿಳಿದೆ.ಟಿ20 ಸರಣಿಯನ್ನು ಗೆದ್ದಿರುವ ಭಾರತ ತಂಡ ತನ್ನ ಆತ್ಮವಿಶ್ವಾಸ ಸ್ವಲ್ಪ ಹೆಚ್ಚು ಮಾಡಿಕೊಂಡಿದೆ.

ಟಿ20 ಸರಣಿ ಯಲ್ಲಿ 2 ಪಂದ್ಯ ಸೋತು ಹಿನ್ನಡೆ ಅನುಭವಿಸಿರುವ ಪ್ರವಾಸಿ ತಂಡ ಏಕದಿನ ಸರಣಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ವಿಂಡೀಸ್ ಸರಣಿಯಿಂದ ಭುವಿ ಮತ್ತು ಧವನ್ ಔಟ್:

ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಸ್ನಾಯು ಸೆಳೆತಕ್ಕೊಳಗಾಗಿರುವ ಅನುಭವಿ ಬೌಲರ್ ಭುವಿ ವಿಂಡೀಸ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತಿಳಿಸಿದ್ದು, ಭುವಿ ಬದಲಿಗೆ ಶಾರ್ದೂಲ್ ಠಾಕೂರ್​​ಗೆ ಅವಕಾಶ ನೀಡಲಾಗಿದೆ. ಕಳೆದ ಕೆಲವು ಸಮಯಗಳಿಂದ ಗಾಯದ ಸಮಸ್ಯೆಯನ್ನು ಎದುರಿಸುತ್ತಿರುವ ಭುವನೇಶ್ವರ್ ಕುಮಾರ್, ವಿಂಡೀಸ್ ಸರಣಿಯ ವೇಳೆ ತಂಡವನ್ನು ಸೇರಿಕೊಂಡಿದ್ದರು. ಇದೀಗ ಗಾಯದಿಂದಾಗಿ ಮತ್ತೆ ತಂಡದಿಂದ ಹೊರಗುಳಿವಂತಾಗಿದೆ.
ಹಾಗೆ ಈಗಾಗಲೇ ಗಾಯಾಳು ಆಗಿರುವ ಶಿಖರ್ ಧವನ್ ಸಂಪೂರ್ಣ ಗುಣಮುಖರಾಗದ ಕಾರಣ ಕೂಡ ಅನುಭವಿ ಧವನ್ ಕೂಡ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಬದಲು ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್​ಗೆ ಅವಕಾಶ ನೀಡಲಾಗಿದೆ.ಹಾಗೆ ಬಹು ದಿನಗಳ ಬಳಿಕ ಕೇದರ್ ಜಾಧವ್ ಟೀಂ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ.
ಒಟ್ಟಿನಲ್ಲಿ ಭಾರತದ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಇದೆ. ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಈಗಾಗಲೇ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದು, ಜನವರಿ ವೇಳೆಯಲ್ಲಿ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಾಳೆ ಚೆನ್ನೈ (ಡಿ.15), 2ನೇ ಪಂದ್ಯ ವಿಶಾಖಪಟ್ಟಣ (ಡಿ.18) ಹಾಗೂ ಅಂತಿಮ ಪಂದ್ಯ ಕಟಕ್ (ಡಿ.22) ಕ್ರೀಡಾಂಗಣದಲ್ಲಿ ನಡೆಯಲಿದೆ.
ಹಾಗೆ ಭಾರತ ಮತ್ತು ವೆಸ್ಟ್ ಇಂಡೀಸ್ ಇದುವರೆಗಿನ ಮುಖಾಮುಖಿ ನೋಡುವುದಾದರೆ
ಒಟ್ಟು ಪಂದ್ಯಗಳು 127
ಭಾರತ ಗೆಲುವು 60
ವೆಸ್ಟ್ ಇಂಡೀಸ್ 62
ಟೈ 2
ಪಂದ್ಯ ರದ್ದು 3
ಈ ಅಂಕಿ ಅಂಶಗಳ ಪ್ರಕಾರ ವೆಸ್ಟ್ ಇಂಡೀಸ್ ಸ್ವಲ್ಪ ಮಟ್ಟಿನ ಮುನ್ನಡೆ ಇದ್ದರೂ ಕೂಡ ಪ್ರಸ್ತುತ ಭಾರತ ತಂಡ ಬಲಿಷ್ಠವಾಗಿದ್ದು ವಿಂಡೀಸ್ ನ ಮಣಿಸುವ ವಿಶ್ವಾಸದಲ್ಲಿದೆ.

ಏಕದಿನಕ್ಕೆ ಭಾರತ ತಂಡ ಇಂತಿದೆ.
ಏಕದಿನ ತಂಡ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪನಾಯಕ), ಶ್ರೇಯಸ್‌ ಐಯ್ಯರ್‌, ಕೇದರ್‌ ಜಾಧವ್‌, ಮಯಾಂಕ್ ಅಗರ್ವಾಲ್, ಕೆ.ಎಲ್‌ ರಾಹುಲ್‌, ರಿಷಭ್‌ ಪಂತ್‌, ಮನೀಶ್‌ ಪಾಂಡೆ, ರವೀಂದ್ರ ಜಡೇಜಾ, ಶಿವಂ ದುಬೆ, ಯಜುವೇಂದ್ರ ಚಹಲ್‌, ದೀಪಕ್‌ ಚಹರ್‌, ಕುಲ್ದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಶಾರ್ದೂಲ್ ಠಾಕೂರ್

– ಪ್ರೀತಮ್ ಹೆಬ್ಬಾರ್.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 4 =