ಕ್ರಿಕೆಟ್ಗಾವಸ್ಕರ್ ಬಾರ್ಡರ್ ಟೆಸ್ಟ್ ಸರಣಿ ಭಾರತದ ಕೈವಶ-ಆಸೀಸ್ ಮುಖ ಭಂಗ

ಗಾವಸ್ಕರ್ ಬಾರ್ಡರ್ ಟೆಸ್ಟ್ ಸರಣಿ ಭಾರತದ ಕೈವಶ-ಆಸೀಸ್ ಮುಖ ಭಂಗ

-

- Advertisment -spot_img
ಆಸ್ಟ್ರೇಲಿಯಾದಲ್ಲಿ ಸರಣಿ ಆಡುವುದೆಂದರೆ ಕೇವಲ ಮೈದಾನದಲ್ಲಿ ತಂಡದೊಡನೆ ಮಾತ್ರ ಆಡುವುದಲ್ಲ. ಅಲ್ಲಿನ ಮಾಜಿ ಆಟಗಾರರು, ಮಾಧ್ಯಮಗಳು ಮುಂತಾದವರ ಮೈಂಡ್ಗೇಮ್‌ಗಳಿಗೂ ಉತ್ತರ ನೀಡಬೇಕು. ಜೊತೆಗೆ ಪಂದ್ಯದ ಸಮಯದಲ್ಲಿ ಆಸ್ಟ್ರೇಲಿಯನ್ ಆಟಗಾರರು ಹಾಗೂ ಪ್ರೇಕ್ಷಕರ ಹರಿತವಾದ ಮಾತುಗಳಿಗೂ ಕಿವಿ ಕೊಡಬೇಕು.
ಈ ಬಾರಿಯ ಟಿ20 ಹಾಗೂ ಓಡಿಐ ಸರಣಿ ಏನೇ ಇರಲಿ, ಟೆಸ್ಟ್ ಸರಣಿಯಂತೂ ಭಾರತ ಕ್ರಿಕೆಟ್ ತಂಡಕ್ಕೆ ಸ್ಮರಣೀಯ ಅನ್ನಿಸದೇ ಇರದು. ಆಡಿದ ಪ್ರಥಮ ಇನ್ನಿಂಗ್ಸ್‌ನಲ್ಲಿ ಕೇವಲ ಮೂವತ್ತಾರು ರನ್‌ಗಳಿಗೆ ಆಲೌಟ್ ಆಗಿ ಮುಜುಗರ ಅನುಭವಿಸಬೇಕಾಯಿತು. ಅದೇ ಕಾರಣದಿಂದ ಸೋಲುಂಟಾಯಿತು. ಆದರೆ ಎರಡನೇ ಟೆಸ್ಟ್ ಪಂದ್ಯದಿಂದ ಒಬ್ಬರಲ್ಲ ಒಬ್ಬರ ದಿಟ್ಟ ಹೋರಾಟದಿಂದ ಭಾರತ ಜಯಗಳಿಸುವಂತಾಯಿತು. ಒಟ್ಟಾರೆಯಾಗಿ ಸರಣಿಯನ್ನು 2-1 ರಿಂದ ಭಾರತ ಗೆದ್ದಿತು.
ಇದು ಸಾಮಾನ್ಯ ಸಂಗತಿ, ಆದರೆ ಆಸ್ಟ್ರೇಲಿಯಾಕ್ಕೆ ಹೊರಡುವ ಮೊದಲು ಸಾಕಷ್ಟು ಆಟಗಾರರು ಗಾಯಾಳಾದ್ದರಿಂದ ಇದ್ದುದರಲ್ಲೇ ಉತ್ತಮ ತಂಡವನ್ನು ಕಳುಹಿಸಿಕೊಡಲಾಗಿತ್ತು. ಆದರೆ ಆಲ್ಲಿ ಆಗಿದ್ದೇ ಬೇರೆ, ಸರಣಿಯ ನಾಲ್ಕೂ ಪಂದ್ಯವನ್ನು ಇಬ್ಬರು ಆಡಿದ್ದು ಬಿಟ್ಟರೆ, ಮತ್ತೆಲ್ಲರೂ ಪಂದ್ಯದಿಂದ ಪಂದ್ಯಕ್ಕೆ ಬದಲಾಯಿಸಲ್ಪಟ್ಟವರೇ. ಕೆಲವರು ಕಳಪೆ ಪ್ರದರ್ಶನದಿಂದ ಹಾಗೂ ಹಲವರು ಗಾಯಾಳುವಾದ್ದರಿಂದ. ತಂಡದ ಖಾಯಂ ನಾಯಕ ಕೊಹ್ಲಿ ವೈಯಕ್ತಿಕ ಕಾರಣದಿಂದ ಭಾರತಕ್ಕೆ ವಾಪಾಸ್ ಬಂದ ನಂತರ ರಹಾನೆ ನಾಯಕನಾದರು.
ಆದರೆ ತಂಡದ ಪ್ರಮುಖ ಆಟಗಾರರು ಗಾಯಾಳಾದ್ದರಿಂದ ಕೊನೆಯ ಟೆಸ್ಟ್ ಪಂದ್ಯದ ಹೊತ್ತಿಗೆ ಭಾರತ ತನ್ನ ತಂಡದಲ್ಲಿ ಒಟ್ಟಾರೆಯಾಗಿ ಕೇವಲ 11 ವಿಕೆಟ್ ಪಡೆದಿರುವ ಬೌಲಿಂಗ್ ಪಡೆಯನ್ನು ಹೊಂದುವಂತಾಯಿತು. ಆದರೂ ಆಸ್ಟ್ರೇಲಿಯಾ ತಂಡವನ್ನು ಅದರ ಕೋಟೆಯಾದ ಬ್ರಿಸ್ಬೇನ್‌ನಲ್ಲಿ ಎರಡು ಬಾರಿ ಆಲೌಟ್ ಮಾಡಲು ಈ ಪಡೆ ಯಶಸ್ವಿಯಾಯಿತು. ಇಡೀ ಸರಣಿಯಲ್ಲಿ ಐವರು ಭಾರತೀಯರು ಟೆಸ್ಟ್ ಗೆ ಪಾದಾರ್ಪಣೆ ಮಾಡಿದರು.
ಕ್ರಿಕೆಟ್ ಅಂದರೆ ಐಪಿಎಲ್ ಮಾತ್ರ ಎಂಬ ಭಾವನೆ ಮೂಡಿರುವ ಈ ಸಮಯದಲ್ಲಿ ಈ ಸರಣಿಯ ಕೊನೆಯ ಮೂರು ಪಂದ್ಯಗಳು ಕ್ರಿಕೆಟ್ ಅಂದರೆ ಏನು ಎಂದು ತಿಳಿಸಿದವು.
                     ವಿಘ್ನೇಶ್ವರ ಮಂಜ ಮಾರಣಕಟ್ಟೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × three =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you