Categories
ಬ್ಯಾಡ್ಮಿಂಟನ್

ಭಾರತದ ಅನುಭವಿ ಬ್ಯಾಡ್ಮಿಂಟನ್‌ ಪಟುಗಳಾದ ಸೈನಾ, ಶ್ರೀಕಾಂತ್‌ ಮೇಲೆ ನಿರೀಕ್ಷೆ, ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ

ಬ್ಯಾಂಕಾಕ್‌ : ಭಾರತದ ಅನುಭವಿ ಬ್ಯಾಡ್ಮಿಂಟನ್‌ ಪಟುಗಳಾದ ಸೈನಾ ನೆಹ್ವಾಲ್‌ ಮತ್ತು ಕಿದಂಬಿ ಶ್ರೀಕಾಂತ್‌ ಅವರಿಗೆ ಇನ್ನು ಆರು ತಿಂಗಳಲ್ಲಿ ಆರಂಭವಾಗುವ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ. ಈ ಅವಕಾಶ ಜೀವಂತವಾಗಿಟ್ಟುಕೊಳ್ಳಬೇಕಾದರೆ, ಬುಧವಾರ ಆರಂಭವಾಗುವ ಥಾಯ್ಲೆಂಡ್‌ ಮಾಸ್ಟರ್ಸ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಉತ್ತಮ ಸಾಧನೆ ತೋರಬೇಕಾಗಿದೆ.

ಕಳೆದ ವರ್ಷ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ಕಾರಣ ಸೈನಾ ಮತ್ತು ಶ್ರೀಕಾಂತ್‌ ಅವರು ‘ವಿಶ್ವ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಡಬ್ಲ್ಯುಎಫ್‌) ಟೋಕಿಯೊ ರ‍್ಯಾಂಕಿಂಗ್‌’ನಲ್ಲಿ ಕ್ರಮವಾಗಿ 22 ಮತ್ತು 23ನೇ ಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಏಪ್ರಿಲ್‌ 26 ಅಂತಿಮ ದಿನವಾಗಿದೆ. ಥಾಯ್ಲೆಂಡ್ ಟೂರ್ನಿ ಸೇರಿದಂತೆ ಏಪ್ರಿಲ್‌ಗೆ ಮೊದಲು ಒಟ್ಟು ಎಂಟು ಟೂರ್ನಿಗಳು ಆಡಲು ಉಳಿದಿವೆ. ಈ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ಭಾರತದ ಈ ಇಬ್ಬರು ಸ್ಪರ್ಧಿಗಳಿಗೆ ಟೋಕಿಯೊಗೆ ಟಿಕೆಟ್‌ ಖಚಿತಪಡಿಸಿಕೊಳ್ಳಬಹುದು.

ಸೈನಾ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್‌ನ ಡೆನ್ಮಾರ್ಕ್‌ನ ಲಿನೆ ಹೊಜ್‌ಮಾರ್ಕ್ ವಿರುದ್ಧ ಆಡಲಿದ್ದಾರೆ. ಶ್ರೀಕಾಂತ್‌ ಪುರುಷರ ಸಿಂಗಲ್ಸ್‌ನಲ್ಲಿ ಶೆಸರ್‌ ಹಿರೆನ್‌ ರುಸ್ಟಾವಿಟೊ ಅವರನ್ನು ಮತ್ತೆ ಎದುರಿಸಲಿದ್ದಾರೆ.

 

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one + nine =