ಕ್ರಿಕೆಟ್ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ದಾಖಲಾಯ್ತು ತ್ರಿಶತಕ..!!!

ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ದಾಖಲಾಯ್ತು ತ್ರಿಶತಕ..!!!

-

- Advertisment -spot_img
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವುದು ಬ್ಯಾಟ್ಸ್‌ಮನ್‌ ಪಾಲಿಗೆ ಅದು ಅದ್ಭುತ ಸಾಧನೆಯಾಗಿದೆ ಅದರಲ್ಲಿಯೂ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾದರೆ ಆತನ ಪಾಲಿಗದು ಮಹಾನ್ ಸಾಧನೆಯೆ ಹೌದು.
ನೂರಾರು ವರ್ಷಗಳ ಇತಿಹಾಸವಿರುವ ಏಕದಿನ ಕ್ರಿಕೆಟ್‌ ನಲ್ಲಿ ಬೆರಳೆಣಿಕೆಯ ಆಟಗಾರಷ್ಟೇ ಈವರೆಗೆ ದ್ವಿಶತಕ ಸಿಡಿಸಲು ಸಾಧ್ಯವಾಗಿದೆ . ಕ್ರಿಕೆಟ್ ದೇವರೆಂದು ಕರೆಯಲ್ಪಡುವ ವಿಶ್ವದ ಅಗ್ರಮಾನ್ಯ ಆಟಗಾರ ಭಾರತದ ಹೆಮ್ಮೆಯ ಕ್ರಿಕೆಟ್ ಪಟು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌, ಭಾರತದ ಪರವಾಗಿ ಆರಂಭ
ಆಟಗಾರನಾಗಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುತ್ತಿದ್ದ ವೀರೇಂದ್ರ ಸೆಹ್ವಾಗ್‌ ಹಾಗೂ ಮತ್ತೊಬ್ಬ ಭಾರತದ ಹೆಮ್ಮೆಯ ಕ್ರಿಕೆಟಿಗ ರೋಹಿತ್‌ ಶರ್ಮಾ, ನ್ಯೂಜಿಲೆಂಡ್‌ ತಂಡದ ಮಾರ್ಟಿನ್‌ ಗಪ್ಟಿಲ್‌,ವೆಸ್ಟ್ ಇಂಡಿಸ್ ತಂಡದ ಕ್ರಿಸ್‌ ಗೇಲ್‌ , ಪಾಕಿಸ್ತಾನ ತಂಡದ ಫಾಕರ್ ಜಮಾನ್ ಅಂತಹ ಸಾಧಕರು ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇದುವರೆಗೂ ದ್ವಿಶತಕ ಹೊಡೆಯಲು ಸಾಧ್ಯವಾಗಿದೆ. ಅದರೆ ಏಕದಿನ ಕ್ರಿಕೆಟ್‌ ನಲ್ಲಿ ಈ ವರೆಗೆ ತ್ರಿಶತಕ ದಾಖಲಾಗಿಲ್ಲ. ರೋಹಿತ್‌ ಶರ್ಮಾ ಶ್ರೀಲಂಕಾ ವಿರುದ್ಧ ಕಲೆಹಾಕಿದ  264 ರನ್‌ ಈ ವರೆಗಿನ ಅತ್ಯಧಿಕ ವೈಯುಕ್ತಿಕ ರನ್ ದಾಖಲೆಯಾಗಿದೆ.ಇದೀಗ ಆಸ್ಟ್ರೇಲಿಯಾದ ಯುವ ಆಟಗಾರನೊಬ್ಬ ಏಕದಿನ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸುವ ಮೂಲಕ ಇಡೀ ಕ್ರಿಕೆಟ್‌ ಜಗತ್ತು ಬೆರಗಾಗುವಂತೆ ಮಾಡಿದ್ದಾನೆ.
ಆಸ್ಟ್ರೇಲಿಯಾದ ಅಂಧರ ಕ್ರಿಕೆಟ್‌ನ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀಫನ್ ನೀರೋ ಬ್ರಿಸ್ಬೇನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 140 ಎಸೆತಗಳಲ್ಲಿ 309 ರನ್ ಗಳಿಸಿ ವಿಶ್ವದಾಖಲೆ ಬರೆದಿದ್ದಾನೆ ಈ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ ನೀರೋ 49 ಬೌಂಡರಿ ಹಾಗೂ ಒಂದು ಸಿಕ್ಸರ್‌ ಗಳೊಂದಿಗೆ ದಾಖಲೆ ಮಾಡಿದ್ದಾರೆ.
ನೀರೋ ಅವರ ಅಬ್ಬರದ ಸ್ಫೋಟಕ ಬ್ಯಾಟಿಂಗ್ ನಿಂದ  ಆಸ್ಟ್ರೇಲಿಯಾ ತಂಡವು ನಿಗದಿತ 40 ಓವರ್‌ ಗಳಲ್ಲಿ 541 ರನ್‌ ಕಲೆಹಾಕಿತು. ಇದು ಅಂಧರ ಕ್ರಿಕೆಟ್‌ ನಲ್ಲಿ ನೂತನ ದಾಖಲೆಯಾಗಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 269 ರನ್‌ ಗಳಿಂದ ಗೆದ್ದು ಬೀಗಿದೆ. ನೀರೋ ತ್ರಿಶತಕ ಸಿಡಿಸುವ ಮೂಲಕ 1998 ರ ಅಂಧರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮಸೂದ್ ಜಾನ್ ನಿರ್ಮಿಸಿದ 262 ರನ್ ಔಟಾಗದೆ ಹೊಡೆದಿದ್ದು ಇದು ವರೆಗಿನ ಅತ್ಯದಿಕ ಮೊತ್ತದ ಜೊತೆಗೆ ವಿಶ್ವದಾಖಲೆಯಾಗಿತ್ತು ಈ ದಾಖಲೆಯನ್ನು ಪುಡಿಗಟ್ಟುವುದರ ಜೊತೆಗೆ ತ್ರಿ ಶತಕವನ್ನು ಸ್ಟೀಫನ್ ನೀರೋ ಬಾರಿಸುವುದರ ಜೊತೆಗೆ ವಿಶ್ವದಾಖಲೆಯನ್ನು ಮಾಡಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

5 × 3 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you