ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉದ್ಘಾಟನೆ

ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉದ್ಘಾಟನೆ

-

- Advertisment -spot_img
ಉಡುಪಿ ಜಿಲ್ಲೆಯ ಹಿರಿಯ-ಕಿರಿಯ ಆಟಗಾರರ ಸಮ್ಮುಖದಲ್ಲಿ ಮಂಗಳವಾರ ಸಂಜೆ T.C.A (ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್)
ಉದ್ಘಾಟನಾ ಸಮಾರಂಭ ಉಡುಪಿಯ ಮಿಶನ್ ಕಂಪೌಂಡ್ ನ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜರುಗಿತು.ಹಿರಿಯ ರಣಜಿ ಆಟಗಾರರಾದ ದಯಾನಂದ ಬಂಗೇರ ಇವರು ದೀಪ ಬೆಳಗಿಸುವುದರ ಮೂಲಕ ಇತರ ಎಲ್ಲಾ ಅತಿಥಿ ಗಣ್ಯರೊಂದಿಗೆ ಉದ್ಘಾಟನೆ ಮಾಡಲಾಯಿತು.
ಉದ್ಘಾಟನೆ ಬಳಿಕ ಮಾತನಾಡಿದ T.C.A ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿ
“ಉಡುಪಿ ಜಿಲ್ಲೆಯಲ್ಲಿ ನಡೆಯುವ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟಗಳಲ್ಲಿ ಶಿಸ್ತು,ವೃತ್ತಿಪರತೆ,ಆಟಗಾರರಿಗೆ ಅಗತ್ಯವಿರುವ ಸೌಲಭ್ಯ,ಗ್ರಾಮೀಣ ಪ್ರದೇಶದ ತಂಡಗಳಿಗೆ ಪ್ರಾಯೋಜಕತ್ವ,ಕಿಟ್ ಒದಗಿಸುವುದು,ಮೂಲಭೂತ ಸೌಕರ್ಯ ಕಲ್ಪಿಸುವುದು,ಜಿಲ್ಲೆಯ ತಂಡಗಳನ್ನು ಒಂದೇ ವೇದಿಕೆಯಡಿ ತಂದು ಟೂರ್ನಿಗಳನ್ನು ನಡೆಸಲು ನೆರವಾಗುವುದು,ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ ಪಳಗಿದ ಯುವ ಪ್ರತಿಭೆಗಳಿಗೆ ಲೆದರ್ ಬಾಲ್ ಕ್ರಿಕೆಟ್ನಲ್ಲೂ ಅವಕಾಶ ಸಿಗುವ ಬಗ್ಗೆ ವಿವಿಧ ಕ್ಲಬ್ ಗಳ ಜೊತೆ ಸಂಪರ್ಕ ಕಲ್ಪಿಸುವುದು ಹೀಗೆ ಹತ್ತು ಹಲವಾರು ಸದುದ್ದೇಶಗಳನ್ನಿಟ್ಟುಕೊಂಡು ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೆ ಪುನರ್ಜೀವ ಕಲ್ಪಿಸಲಾಗಿದೆ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ಸಮಾಜದಲ್ಲಿ ನಮಗೆ ಗುರುತು ನೀಡಿದೆ,ಬದುಕಲು ಕಲಿಸಿದೆ,ಯಶಸ್ಸಿನ ಹಾದಿ ಸುಗಮವಾಗಿಸಿದೆ‌.ಆದ್ದರಿಂದ ಟೆನ್ನಿಸ್ಬಾಲ್ ಕ್ರಿಕೆಟ್ ಉಳಿಸಿ-ಬೆಳೆಸುವುದು ಪ್ರತಿಯೊಬ್ಬ ಆಟಗಾರರ ಜವಾಬ್ದಾರಿಯಾಗಿದೆ” ಎಂದರು.ಕಾರ್ಯಕ್ರಮದಲ್ಲಿ ಆಸೀನರಾದ ಸಂಸ್ಥೆಯ ಪದಾಧಿಕಾರಿಗಳು ಶುಭಹಾರೈಸಿದರು.
ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ ಸದಸ್ಯರ ಕೆಲವು ಗೊಂದಲಗಳನ್ನು ಅಧ್ಯಕ್ಷರೊಂದಿಗೆ ಸಂವಾದ ಮಾಡುವುದರ ಮೂಲಕ ಬಗೆಹರಿಸಿಕೊಂಡು ಎಲ್ಲರೂ ಉತ್ತಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ,ದಯಾನಂದ ಬಂಗೇರ,ಶ್ರೀಧರ ಶೆಟ್ಟಿ,ಉದಯ್ ಕುಮಾರ್ ಕಟಪಾಡಿ,ಡಾ.ವಿನೋದ್ ನಾಯಕ್,ಪ್ರಭಾಕರ್ ಶೆಟ್ಟಿ,ಯಾದವ್ ನಾಯಕ್, ಜಾನ್ ಪ್ರೇಮ್ ಕುಮಾರ್,ನಾರಾಯಣ ಶೆಟ್ಟಿ,ಪ್ರವೀಣ್ ಕುಮಾರ್,ಪ್ರವೀಣ್ ಪಿತ್ರೋಡಿ,ಚೇತನ್ ಕುಮಾರ್ ಇನ್ನಿತರ ಹಿರಿಯ ಆಟಗಾರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರವೀಣ್ ಕುಮಾರ್ ಬೈಲೂರು ಸಂಯೋಜಿಸಿದರು ಹಾಗೂ
ಶಿವನಾರಾಯಣ ಐತಾಳ್ ಕೋಟ ಕಾರ್ಯಕ್ರಮ ನಿರೂಪಣೆ ಮಾಡಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 − five =

Latest news

“ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ನಿಟ್ಟೆಯ ವಿದ್ಯಾ ಸಂಸ್ಥೆಯ ಹರಿಕಾರ ವಿನಯ್ ಹೆಗ್ಡೆ”-ಹರಿಪ್ರಸಾದ್ ರೈ

"ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ನಿಟ್ಟೆಯ ವಿದ್ಯಾ ಸಂಸ್ಥೆಯ ಹರಿಕಾರ ವಿನಯ್ ಹೆಗ್ಡೆ"-ಹರಿಪ್ರಸಾದ್ ರೈ ಕಾರ್ಕಳ- ಇಲ್ಲಿನ ನಿಟ್ಟೆ ವಿಶ್ವ ವಿದ್ಯಾಲಯದ ಅಧೀನದಲ್ಲಿರುವ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಅಂತರ್...

ವಿಕ್ರಮ್ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀ ಸಮ್ಮರ್ ಕ್ರಿಕೆಟ್ ತರಬೇತಿ ಶಿಬಿರ

ವಿಕ್ರಮ್ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀ ಸಮ್ಮರ್ ಕ್ರಿಕೆಟ್ ತರಬೇತಿ ಶಿಬಿರ ಬೈಂದೂರು: ವಿಕ್ರಮ್ ಕ್ರಿಕೆಟ್ ಕ್ಲಬ್, ಬೈಂದೂರು ವತಿಯಿಂದ ಯುವಕರಲ್ಲಿ ಕ್ರಿಕೆಟ್ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ...

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...
- Advertisement -spot_imgspot_img

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

Must read

- Advertisement -spot_imgspot_img

You might also likeRELATED
Recommended to you