14.6 C
London
Friday, May 17, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉದ್ಘಾಟನೆ

ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉದ್ಘಾಟನೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಉಡುಪಿ ಜಿಲ್ಲೆಯ ಹಿರಿಯ-ಕಿರಿಯ ಆಟಗಾರರ ಸಮ್ಮುಖದಲ್ಲಿ ಮಂಗಳವಾರ ಸಂಜೆ T.C.A (ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್)
ಉದ್ಘಾಟನಾ ಸಮಾರಂಭ ಉಡುಪಿಯ ಮಿಶನ್ ಕಂಪೌಂಡ್ ನ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜರುಗಿತು.ಹಿರಿಯ ರಣಜಿ ಆಟಗಾರರಾದ ದಯಾನಂದ ಬಂಗೇರ ಇವರು ದೀಪ ಬೆಳಗಿಸುವುದರ ಮೂಲಕ ಇತರ ಎಲ್ಲಾ ಅತಿಥಿ ಗಣ್ಯರೊಂದಿಗೆ ಉದ್ಘಾಟನೆ ಮಾಡಲಾಯಿತು.
ಉದ್ಘಾಟನೆ ಬಳಿಕ ಮಾತನಾಡಿದ T.C.A ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿ
“ಉಡುಪಿ ಜಿಲ್ಲೆಯಲ್ಲಿ ನಡೆಯುವ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟಗಳಲ್ಲಿ ಶಿಸ್ತು,ವೃತ್ತಿಪರತೆ,ಆಟಗಾರರಿಗೆ ಅಗತ್ಯವಿರುವ ಸೌಲಭ್ಯ,ಗ್ರಾಮೀಣ ಪ್ರದೇಶದ ತಂಡಗಳಿಗೆ ಪ್ರಾಯೋಜಕತ್ವ,ಕಿಟ್ ಒದಗಿಸುವುದು,ಮೂಲಭೂತ ಸೌಕರ್ಯ ಕಲ್ಪಿಸುವುದು,ಜಿಲ್ಲೆಯ ತಂಡಗಳನ್ನು ಒಂದೇ ವೇದಿಕೆಯಡಿ ತಂದು ಟೂರ್ನಿಗಳನ್ನು ನಡೆಸಲು ನೆರವಾಗುವುದು,ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ ಪಳಗಿದ ಯುವ ಪ್ರತಿಭೆಗಳಿಗೆ ಲೆದರ್ ಬಾಲ್ ಕ್ರಿಕೆಟ್ನಲ್ಲೂ ಅವಕಾಶ ಸಿಗುವ ಬಗ್ಗೆ ವಿವಿಧ ಕ್ಲಬ್ ಗಳ ಜೊತೆ ಸಂಪರ್ಕ ಕಲ್ಪಿಸುವುದು ಹೀಗೆ ಹತ್ತು ಹಲವಾರು ಸದುದ್ದೇಶಗಳನ್ನಿಟ್ಟುಕೊಂಡು ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೆ ಪುನರ್ಜೀವ ಕಲ್ಪಿಸಲಾಗಿದೆ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ಸಮಾಜದಲ್ಲಿ ನಮಗೆ ಗುರುತು ನೀಡಿದೆ,ಬದುಕಲು ಕಲಿಸಿದೆ,ಯಶಸ್ಸಿನ ಹಾದಿ ಸುಗಮವಾಗಿಸಿದೆ‌.ಆದ್ದರಿಂದ ಟೆನ್ನಿಸ್ಬಾಲ್ ಕ್ರಿಕೆಟ್ ಉಳಿಸಿ-ಬೆಳೆಸುವುದು ಪ್ರತಿಯೊಬ್ಬ ಆಟಗಾರರ ಜವಾಬ್ದಾರಿಯಾಗಿದೆ” ಎಂದರು.ಕಾರ್ಯಕ್ರಮದಲ್ಲಿ ಆಸೀನರಾದ ಸಂಸ್ಥೆಯ ಪದಾಧಿಕಾರಿಗಳು ಶುಭಹಾರೈಸಿದರು.
ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ ಸದಸ್ಯರ ಕೆಲವು ಗೊಂದಲಗಳನ್ನು ಅಧ್ಯಕ್ಷರೊಂದಿಗೆ ಸಂವಾದ ಮಾಡುವುದರ ಮೂಲಕ ಬಗೆಹರಿಸಿಕೊಂಡು ಎಲ್ಲರೂ ಉತ್ತಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ,ದಯಾನಂದ ಬಂಗೇರ,ಶ್ರೀಧರ ಶೆಟ್ಟಿ,ಉದಯ್ ಕುಮಾರ್ ಕಟಪಾಡಿ,ಡಾ.ವಿನೋದ್ ನಾಯಕ್,ಪ್ರಭಾಕರ್ ಶೆಟ್ಟಿ,ಯಾದವ್ ನಾಯಕ್, ಜಾನ್ ಪ್ರೇಮ್ ಕುಮಾರ್,ನಾರಾಯಣ ಶೆಟ್ಟಿ,ಪ್ರವೀಣ್ ಕುಮಾರ್,ಪ್ರವೀಣ್ ಪಿತ್ರೋಡಿ,ಚೇತನ್ ಕುಮಾರ್ ಇನ್ನಿತರ ಹಿರಿಯ ಆಟಗಾರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರವೀಣ್ ಕುಮಾರ್ ಬೈಲೂರು ಸಂಯೋಜಿಸಿದರು ಹಾಗೂ
ಶಿವನಾರಾಯಣ ಐತಾಳ್ ಕೋಟ ಕಾರ್ಯಕ್ರಮ ನಿರೂಪಣೆ ಮಾಡಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

8 + 4 =