ಕ್ರಿಕೆಟ್35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!

35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!

-

- Advertisment -spot_img

35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!

ಅಬ್ಬಾ.. ಅದೇನು ಧೈರ್ಯ.. ಅದೇನು ವೈಭವ..? ಅದೇನು ಆಟ.. ಈತ ಬರೀ ಪೋರನಲ್ಲ.. ಪ್ರಚಂಡ ಪೋರ..

ಐಪಿಎಲ್ ಹುಟ್ಟಿದಾಗ ವೈಭವ್ ಸೂರ್ಯವಂಶಿ ಹುಟ್ಟಿಯೇ ಇರಲಿಲ್ಲ.. ಐಪಿಎಲ್ ಶುರುವಾಗಿ 3 ವರ್ಷಗಳ ನಂತರ ಹುಟ್ಟಿದವನು ಇವತ್ತು ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ.

14ನೇ ವಯಸ್ಸಿನಲ್ಲಿ ರಶೀದ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾರಂತಹ ವರ್ಲ್ಡ್ ಕ್ಲಾಸ್ ಬೌಲರ್’ಗಳ ಮುಂದೆ ಎದೆಯುಬ್ಬಿಸಿ ನಿಂತು ಶತಕ ಬಾರಿಸುವುದೆಂದರೆ..? ಅದೂ 35 ಎಸೆತಗಳಲ್ಲಿ..! ನಂಬಲಸಾಧ್ಯ..

ಇಶಾಂತ್ ಶರ್ಮಾನ ಒಂದೇ ಓವರ್’ನಲ್ಲಿ 3 ಸಿಕ್ಸರ್ಸ್, 28 ರನ್. 18 ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ರಿಕಿ ಪಾಂಟಿಂಗ್’ನನ್ನು ಇಶಾಂತ್ ಶರ್ಮಾ ಬೆಚ್ಚಿ ಬೀಳಿಸಿದ್ದ. ಆಗ ಈ ಸೂರ್ಯವಂಶಿ ಹುಟ್ಟಿರಲಿಲ್ಲ. ಈಗ ಅದೇ ಇಶಾಂತ್’ಗೆ ಈ ಹುಡುಗ ಆ ಪರಿ ಚಚ್ಚುತ್ತಾನೆ ಎಂದರೆ ಇವನು fearless. This kid is so special.

ಗುಜರಾತ್ ವಿರುದ್ಧ ವೈಭವ್ ಸೂರ್ಯವಂಶಿ ಪವರ್ ಪ್ಲೇನಲ್ಲೇ ಬಾರಿಸಿದ್ದು ಆರು ಸಿಕ್ಸರ್’ಗಳು. ನೆನಪಿರಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಡೀ ಟೂರ್ನಿಯಲ್ಲಿ ಪವರ್ ಪ್ಲೇನಲ್ಲಿ ಬಾರಿಸಿದ ಸಿಕ್ಸರ್’ಗಳ ಸಂಖ್ಯೆ ಐದು..!

ಬೆನ್ನ ಹಿಂದೆ 12 ಎಂದು ಬರೆಸಿಕೊಂಡಿದ್ದಾನೆ. ಅದು ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಬಳಸುತ್ತಿದ್ದ ಜರ್ಸಿ ನಂಬರ್.

ವೈಭವ್ ಸೂರ್ಯವಂಶಿ ಬಿಹಾರದ ಸಮಷ್ಠಿಪುರದವನು. ಮಗನ ಕ್ರಿಕೆಟ್ ಭವಿಷ್ಯಕ್ಕಾಗಿ ಜೀವನಕ್ಕೆ ಆಧಾರವಾಗಿದ್ದ ತುಂಡು ಜಮೀನನ್ನು ಮಾರಿದ್ದರು ತಂದೆ ಸಂಜೀವ್ ಸೂರ್ಯವಂಶಿ. ಇವತ್ತು ಆ ತಂದೆ ಮಗನ ಆಟವನ್ನು ನೋಡಿ ಹೆಮ್ಮೆ ಪಡುತ್ತಿರಬಹುದು..!

‘’ಹೀಗೊಬ್ಬ ಹುಡುಗನಿದ್ದಾನೆ, ನೋಡು’’ ಎಂದು ಸೂರ್ಯವಂಶಿ ಬಗ್ಗೆ ರಾಜಸ್ಥಾನ ರಾಯಲ್ಸ್ ತಂಡದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹೇಳಿದವರು ವಿವಿಎಸ್ ಲಕ್ಷ್ಮಣ್. ಅಂಡರ್-19 one-day Challenger tournamentನಲ್ಲಿ ಆಡುತ್ತಿದ್ದಾಗ ದಿಗ್ಗಜ ಲಕ್ಷ್ಮಣ್ ಅವರ ಗಮನವನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆದಿದ್ದ ಈ ವೈಭವ್ ಸೂರ್ಯವಂಶಿ. ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ 58 ಎಸೆತಗಳಲ್ಲಿ ಅಂಡರ್-19 ಶತಕ ಬಾರಿಸಿದಾಗ ವೈಭವ್ ವಯಸ್ಸು ಜಸ್ಟ್ 13. ಈಗ 14ನೇ ವಯಸ್ಸಿಗೆ ಐಪಿಎಲ್ ಶತಕ. ಟಿ20 ಕ್ರಿಕೆಟ್’ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯನೆಂಬ ವಿಶ್ವದಾಖಲೆ.

Remember the name ವೈಭವ್ ಸೂರ್ಯವಂಶಿ.

LEAVE A REPLY

Please enter your comment!
Please enter your name here

9 + four =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you