ಕ್ರಿಕೆಟ್ಇಜಾನ್ ಸ್ಪೋರ್ಟ್ಸ್ ಉಡುಪಿ ಮಡಿಲಿಗೆ ಮುದರಂಗಡಿ ಫ್ರೆಂಡ್ಸ್ ಟ್ರೋಫಿ

ಇಜಾನ್ ಸ್ಪೋರ್ಟ್ಸ್ ಉಡುಪಿ ಮಡಿಲಿಗೆ ಮುದರಂಗಡಿ ಫ್ರೆಂಡ್ಸ್ ಟ್ರೋಫಿ

-

- Advertisment -spot_img
ಕಾಪು-ಮುದರಂಗಡಿ ಕ್ರಿಕೆಟ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲಾದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಮುದರಂಗಡಿ ಫ್ರೆಂಡ್ಸ್ ಟ್ರೋಫಿ ಯನ್ನು ಇಜಾನ್ ಸ್ಪೋರ್ಟ್ಸ್ ಉಡುಪಿ ಜಯಿಸಿದೆ.
ಮುದರಂಗಡಿ ಪಂಚಾಯತ್ ಮೈದಾನದಲ್ಲಿ ಲೀಗ್ ಕಂ ನಾಕೌಟ್ ಮಾದರಿಯಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ,
ಮಾರ್ಚ್ 2 ರಂದು ಮಲ್ಪೆ,ದೊಡ್ಡಣಗುಡ್ಡೆ,ಬೀಡಿನಗುಡ್ಡೆ,ಮಣಿಪಾಲ,ಉದ್ಯಾವರ,ಕಟಪಾಡಿ,ಕಾಪು,ಶಿರ್ವ,ಬೆಳ್ಮಣ್,ನಂದಳಿಕೆ,ಕೋಡೂರು,ಮೂಡುಬೆಳ್ಳೆ,ಮುದರಂಗಡಿ,ನಿಟ್ಟೆ,ಇನ್ನಂಜೆ,ಉಚ್ಚಿಲ,ಎರ್ಮಾಳ್,ಪಡುಬಿದ್ರಿ,ಹೆಜಮಾಡಿ,ಬೆಳಪು,ಮುಲ್ಕಿ,ಅಲೆವೂರು,ಹಿರಿಯಡಕ,ಬೈಲೂರು,ಪಲಿಮಾರು,ಪಾಂಗಾಳ ವಲಯದ ಒಟ್ಟು 12 ತಂಡಗಳು
ಹಾಗೂ ಮಾರ್ಚ್ 3 ರಂದು ರಾಜ್ಯಮಟ್ಟದ ಪ್ರಸಿದ್ಧ ತಂಡಗಳಾದ ರಿಯಲ್ ಫೈಟರ್ಸ್ ಮಲ್ಪೆ,ಇಜಾನ್ ಸ್ಪೋರ್ಟ್ಸ್ ಉಡುಪಿ,ಜಾನ್ಸನ್ ಕುಂದಾಪುರ,ಆಯುಷ್ ಇಲೆವೆನ್,ಪ್ರಿನ್ಸ್ ಇಲೆವೆನ್ ಪಿಲಾರ,ಮುದರಂಗಡಿ ರಾಕರ್ಸ್ ಈ 6 ತಂಡಗಳು ಭಾಗವಹಿಸಿದ್ದವು.
ಫೈನಲ್ ನಲ್ಲಿ ಇಜಾನ್ ಸ್ಪೋರ್ಟ್ಸ್ ಉಡುಪಿ- ಚೈತನ್ಯ M.F.C ಅಲೆವೂರು ತಂಡವನ್ನು ಸೋಲಿಸಿ ಪ್ರಥಮ ಬಹುಮಾನ ರೂಪದಲ್ಲಿ 50,000 ರೂ ನಗದು,ದ್ವಿತೀಯ ಸ್ಥಾನಿ ಚೈತನ್ಯ
 30,000 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಪಂದ್ಯಾಟದ ಬೆಸ್ಟ್ ಬ್ಯಾಟರ್ ಗೌರೀಶ್ ಆಚಾರ್ಯ, ಬೆಸ್ಟ್ ಬೌಲರ್ ರಾಹಿಲ್ ಹಾಗೂ ಧೀರಜ್ ಅಲೆವೂರು ಸರಣಿಶ್ರೇಷ್ಟ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಪಡುಬಿದ್ರಿ ಫ್ರೆಂಡ್ಸ್ ನ ಹಿರಿಯ ಆಟಗಾರರಾದ ಆನಂದ್ ಡಿಸೋಜಾ,ಶರತ್ ಶೆಟ್ಟಿ ಪಡುಬಿದ್ರಿ,ಸುಭಾಸ್ ಕಾಮತ್ ಜೊತಗೆ ರಾಜ್ಯದ ಪ್ರಸಿದ್ಧ ಆಟಗಾರರಾದ ರಾಜಾ ಸಾಲಿಗ್ರಾಮ,ಸಂಪತ್ ಬೈಲಕೆರೆ,ಪ್ರಸಾದ್ ಪಡುಬಿದ್ರಿ, ಎ.ಕೆ ಮನೋಹರ್ ಹಾಗೂ ಹಲವಾರು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿರುವ ಜಾನ್ಸನ್ ರವೀಂದ್ರ ಹೆಗ್ಡೆ,ಎ.ಕೆ ಯಶು ಇವರನ್ನು ಸನ್ಮಾನಿಸಲಾಯಿತು
ಸಮಾರೋಪ ಸಮಾರಂಭದಲ್ಲಿ
ಶರತ್ ಶೆಟ್ಟಿ ಮುದರಂಗಡಿ, ಯಶವಂತ್ ಶೆಟ್ಟಿ ಎಲ್ಲೂರು,ಆನಂದ್ ಡಿಸೋಜಾ,ರೆವರೆಂಡ್ ಫಾದರ್ ಫೆಡ್ರಿಕ್ ಡಿಸೋಜಾ,ಸುಧೀರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು
Iceberg Logistics Private Limited ಮತ್ತು Iceberg Shipping LLC ಹಾಗೂ ಕನ್ನಡದ ಮೊದಲ ಹೈಪರ್ ಲಿಂಕ್ Rom Com ಚಲನಚಿತ್ರ ಚೌಚೌಬಾತ್ ತಂಡ ಪಂದ್ಯಾವಳಿಗೆ ಸಂಪೂರ್ಣ ಸಹಕಾರ ನೀಡಿದರು.
Sparkle ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಂಡಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen − 8 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you