ಕ್ರಿಕೆಟ್ತೀರ್ಥಹಳ್ಳಿಯಲ್ಲಿ ಉಡುಪಿ ಹುಡುಗರ ಮೇಲುಗೈ-ಇಜಾನ್ ಸ್ಪೋರ್ಟ್ಸ್ ಮಡಿಲಿಗೆ ಡಿ.ಕೆ.ಶಿವಕುಮಾರ್ ಕಪ್

ತೀರ್ಥಹಳ್ಳಿಯಲ್ಲಿ ಉಡುಪಿ ಹುಡುಗರ ಮೇಲುಗೈ-ಇಜಾನ್ ಸ್ಪೋರ್ಟ್ಸ್ ಮಡಿಲಿಗೆ ಡಿ.ಕೆ.ಶಿವಕುಮಾರ್ ಕಪ್

-

- Advertisment -spot_img
ಶಿವಮೊಗ್ಗ-ತೀರ್ಥಹಳ್ಳಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್,ದೇಶಕ್ಕಾಗಿ ನಾವು ತೀರ್ಥಹಳ್ಳಿ,ಸ್ನೇಹಜೀವಿ ಗೆಳೆಯರ ಬಳಗ ಇವರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ “ಡಿ.ಕೆ.ಶಿವಕುಮಾರ್ ಕಪ್-ಸೀಸನ್ 2” ಪ್ರಶಸ್ತಿಯನ್ನು ಇಜಾನ್ ಸ್ಪೋರ್ಟ್ಸ್ ಉಡುಪಿ ಗೆದ್ದುಕೊಂಡಿತು.
ಇಜಾನ್ ಸ್ಪೋರ್ಟ್ಸ್ ಸಂಘಟಿತ ಹೋರಾಟ-ಡಿ‌.ಕೆ‌.ಶಿ ಕಪ್ ಚಾಂಪಿಯನ್ಸ್ ಕಿರೀಟ
ಉದ್ಯಾನ ನಗರಿಯ ಯುವ ಉದಯೋನ್ಮುಖ ಆಟಗಾರ ಪ್ರಶಾಂತ್ ಪಿಳ್ಳೆ ಹೊರತು ಪಡಿಸಿ,ಸಂಪತ್ ಬೈಲಾಕೆರೆ ನಾಯಕತ್ವದಲ್ಲಿ,ಸಾಗರ್ ವಿಶ್ವ ಮಾರ್ಗದರ್ಶನದಲ್ಲಿ,10 ಮಂದಿ ಉಡುಪಿಯ ಯುವ ಆಟಗಾರರನ್ನೇ ನೆಚ್ಚಿಕೊಂಡ ಇಜಾನ್ ಸ್ಪೋರ್ಟ್ಸ್ ಲೀಗ್ ಹಂತದಿಂದಲೇ ಈ ಹಿಂದಿನ ಟೂರ್ನಮೆಂಟ್ ಗಳ ಸೋಲಿನ ಲೆಕ್ಕ ಒಂದೊಂದೇ ಚುಕ್ತಾ ಮಾಡುತ್ತಾ ಬಂದಿತ್ತು.
ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಪ್ರಕೃತಿ ನ್ಯಾಶ್ ವಿರುದ್ಧ ಅಕ್ಷಯ್ ಶೆಟ್ಟಿ ಮತ್ತು ಡೆರಿನ್,ಕ್ವಾರ್ಟರ್ ಫೈನಲ್ ನಲ್ಲಿ ಜನಪ್ರಿಯ ಮೈಟಿ ದಾವಣಗೆರೆ ವಿರುದ್ಧ ಪವನ್  ಪಿಳ್ಳೆ,ಸೆಮಿಫೈನಲ್ ನಲ್ಲಿ ರಿಯಲ್ ಫೈಟರ್ಸ್ ವಿರುದ್ಧ ಪವನ್,ಪಿಳ್ಳೆ ಮತ್ತು ರಾಹಿಲ್ ಅತ್ಯುತ್ತಮ ಪ್ರದರ್ಶನ ನೀಡಿ,ಕೂದಲೆಳೆ ಅಂತರದಲ್ಲಿ ಸಾಲು ಸಾಲು ಘಟಾನುಘಟಿ ತಂಡಗಳನ್ನು ಮಣಿಸಿ ಫೈನಲ್ ನೆಗೆದೇರಿತ್ತು.
ಫೈನಲ್ ಡೆರಿನ್ ಸ್ಪೋಟಕ ಆಟ
ಬಲಿಷ್ಟ ಫ್ರೆಂಡ್ಸ್ ಬೆಂಗಳೂರು ತಂಡದೆದುರಿನ ಫೈನಲ್ ಪಂದ್ಯದಲ್ಲಿ ಇಜಾನ್ ಸ್ಪೋರ್ಟ್ಸ್ ಉಡುಪಿಯ ಡ್ಯಾಶಿಂಗ್ ಓಪನರ್ ಡೆರಿನ್ ಫ್ರೆಂಡ್ಸ್ ಬೆಂಗಳೂರಿನ ಪ್ರಸಾದ್ ನೇರಳಕಟ್ಟೆ ಎಸೆದ ಅಂತಿಮ ಓವರ್ ನಲ್ಲಿ ಎರಡು ಬೌಂಡರಿ ಹಾಗೂ ಎರಡು ಭರ್ಜರಿ‌ ಸಿಕ್ಸರ್ ಸಹಿತ 21 ರನ್ ಸಿಡಿಸಿ ಭಾಗಶಃ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಒತ್ತಡಕ್ಕೆ ಸಿಲುಕಿಸಿತ್ತು‌.ಇಜಾನ್ ಸ್ಪೋರ್ಟ್ಸ್ ನ‌ ವೇಗಿ ರಾಹಿಲ್ ಫ್ರೆಂಡ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್ ಗಳ ವಿಕೆಟ್ ಉರುಳಿಸಿ ಇಜಾನ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಚಾಂಪಿಯನ್ಸ್ ಇಜಾನ್ ಸ್ಪೋರ್ಟ್ಸ್ ಉಡುಪಿ ಪ್ರಥಮ ಬಹುಮಾನ 3 ಲಕ್ಷ ರೂ ನಗದು ಹಾಗೂ ದ್ವಿತೀಯ ಸ್ಥಾನಿ ಫ್ರೆಂಡ್ಸ್ ಬೆಂಗಳೂರು 1.5 ಲಕ್ಷ ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದರು.
ಪಂದ್ಯಾಟದ ಬೆಸ್ಟ್ ಬೌಲರ್ ರಾಹಿಲ್ ಇಜಾನ್ ,ಬೆಸ್ಟ್ ಬ್ಯಾಟರ್ ಸಾಗರ್ ಭಂಡಾರಿ ಫ್ರೆಂಡ್ಸ್,ಬೆಸ್ಟ್ ಫೀಲ್ಡರ್ ಅಕ್ಷಯ್ ಶೆಟ್ಟಿ ಇಜಾನ್,ಬೆಸ್ಟ್ ಕೀಪರ್ ಶಂಕರ್ ಜೈ ಕರ್ನಾಟಕ ಹಾಗೂ ಫೈನಲ್ ಪಂದ್ಯಶ್ರೇಷ್ಟ-ಸರಣಿ ಶ್ರೇಷ್ಠ ಪ್ರಶಸ್ತಿ ಡೆರಿನ್ ಪಡೆದುಕೊಂಡರು.
*ಇಜಾನ್ ಸ್ಪೋರ್ಟ್ಸ್ ಗೆಲುವಿಗೆ ಹರ್ಷ ವ್ಯಕ್ತಪಡಿಸಿ,ಸ್ಪೋರ್ಟ್ಸ್ ಕನ್ನಡದೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ* *ಮಾತನಾಡಿದ ತಂಡದ ಮಾಲೀಕರಾದ ಮೊಹಮ್ಮದ್  ಸರ್ಫರಾಜ್ ರೆಹಮತ್*
*“ನಮ್ಮ ತಂಡದ ಯುವ ಆಟಗಾರರ ಸಂಯೋಜನೆ,ಸಂಘಟಿತ ಹೋರಾಟದ ಫಲವಾಗಿ ಜಯ ಲಭಿಸಿದ್ದು,ಮುಂದಿನ ದಿನಗಳಲ್ಲಿ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲಿದ್ದು,ಭವಿಷ್ಯದಲ್ಲಿ ಯುವಕರಿಗೆ ಉದ್ಯೋಗ ಮತ್ತು ಇಜಾನ್ ಸ್ಪೋರ್ಟ್ಸ್ ಸಂಸ್ಥೆಯ ಮೂಲಕ ಬಹಳಷ್ಟು ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದೇವೆ” ಎಂದರು.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 5 =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you