16.5 C
London
Sunday, May 19, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಜೈಹಿಂದ್ ಟ್ರೋಫಿ-2021 ಹೊನಲು ಬೆಳಕಿನ‌ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಜೈಹಿಂದ್ ಟ್ರೋಫಿ-2021 ಹೊನಲು ಬೆಳಕಿನ‌ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ,45 ಗಜಗಳ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ “ಜೈಹಿಂದ್ ಟ್ರೋಫಿ-2021” ಆಯೋಜಿಸಲಾಗಿದೆ.
ಡಿಸೆಂಬರ್ 4 ಮತ್ತು 5 ರಂದು ಮಣೂರು ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ ತಂಡಗಳನ್ನು ಮೂರು ವಿಭಾಗಗಳನ್ನಾಗಿ ಮಾಡಿದ್ದು,1)ಆಯಾಯಾ ಏರಿಯಾಕ್ಕೆ ಸಂಬಂಧಿಸಿದ ಆಟಗಾರರ ತಂಡ,2)ವಿಶೇಷ ಆಹ್ವಾನಿತ ಸರಕಾರಿ ಮತ್ತು ಖಾಸಗಿ ನೌಕರರ ತಂಡ,3)ಹರಾಜು ಪ್ರಕ್ರಿಯೆಗೆ ಒಳಪಟ್ಟ ಆಟಗಾರರ ಫ್ರಾಂಚೈಸಿ ತಂಡ ಈ ರೀತಿಯಾಗಿ ಪಂದ್ಯಗಳು ಕುತೂಹಲಕಾರಿಯಾಗಿ ಸಾಗಲಿದೆ.
ಪಂದ್ಯಾಟಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟ ಹಾಗೂ ಪೊಲೀಸ್ ಕ್ರಿಕೆಟ್ ಪಂದ್ಯಗಳಲ್ಲಿ ಮಿಂಚಿದ ಜೈಹಿಂದ್ ಪಡುಕರೆಯ ವೇಗಿ ಪ್ರಶಾಂತ್ ಪಡುಕರೆ ಇವರ ಹೊಸ ಯೋಚನೆಯಲ್ಲಿ, ಟೆನ್ನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಯ 6 ಪೊಲೀಸ್ ತಂಡಗಳು ಮೈದಾನಕ್ಕಿಳಿಯಲಿದ್ದು ಕ್ರೀಡಾಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿದೆ ಹಾಗೂ ಎಲ್.ಇ‌.ಡಿ ಸ್ಕ್ರೀನ್ ಕೂಡ ಅಳವಡಿಸಲಾಗುತ್ತಿದೆ.
ಜೈಹಿಂದ್ ಟ್ರೋಫಿಯ ಪ್ರಥಮ ಬಹುಮಾನ ವಿಜೇತ ತಂಡ 30,003 ರೂ,ದ್ವಿತೀಯ ಸ್ಥಾನಿ 20,002 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ.ಹರಾಜು ಪ್ರಕ್ರಿಯೆಗೆ ಒಳಪಡಲು ಇಚ್ಚಿಸುವ ಆಟಗಾರರು  ನವೆಂಬರ್ 16 ರ ಒಳಗೆ ನೊಂದಾಯಿಸಿಕೊಳ್ಳಬಹುದು.
SRB ಸ್ಪೋರ್ಟ್ಸ್ ಪಂದ್ಯಾಟದ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಹೆಚ್ಚಿನ ವಿವರಗಳಿಗೆ ಅರುಣ್.ಎನ್.ಬಂಗೇರ ಜೈಹಿಂದ್ ಕ್ರಿಕೆಟರ್ಸ್ ಅಧ್ಯಕ್ಷರು,
ಪ್ರಶಾಂತ್ ಪಡುಕರೆ-9964086655 ಮತ್ತು ರಾಜ ಪಡುಕರೆ- 8546864240 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen − two =