Categories
#covid19

ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡರಿಂದ ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್

 ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಿಸಲು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ದಾವಣಗೆರೆಯಲ್ಲಿ ಸಾವಿರಾರು ಕ್ರೀಡಾಪಟುಗಳಿದ್ದು,  ಅರ್ಹ ಬಡ ಕ್ರೀಡಾಪಟುಗಳಿಗೆ ಜಯಪ್ರಕಾಶ ಗೌಡ ಆಹಾರ ಕಿಟ್‍ಗಳನ್ನು ನೀಡುವ ಮೂಲಕ ಸ್ಪಂದಿಸುತ್ತಿರುವುದು  ಶ್ಲಾಘನೀಯವೆಂದರು.
 
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಉಪಾಧ್ಯಕ್ಷರುಗಳಾದ ಶಿವಗಂಗಾ ಶ್ರೀನಿವಾಸ್, ಮಹಾದೇವ್ ಸಿ.ಹಂಪನೂರು, ಪ್ರಧಾನ ಕಾರ್ಯದರ್ಶಿ ಕುರುಡಿ ಗಿರೀಶ್, ಖಜಾಂಚಿ ಜಯಪ್ರಕಾಶ್ ಗೌಡ, ಎಂ.ಆರ್.ಮಾಲತೇಶ್, ಪತ್ರಕರ್ತರಾದ ಬಿ.ಎನ್.ಮಲ್ಲೇಶ್, ಎಂ.ಬಿ.ನವೀನ್ ಉಪಸ್ಥಿತರಿದ್ದರು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ ಎಲ್. ಹರೀಶ್ ಬಸಾಪುರ ತಿಳಿಸಿದರು

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

four × two =