SportsKannada | ಸ್ಪೋರ್ಟ್ಸ್ ಕನ್ನಡ

ದಾವಣಗೆರೆ ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡ(ಜೆ‌.ಪಿ)ಇವರಿಗೆ ಸನ್ಮಾನ

ಬೆಂಗಳೂರು-ಫ್ರೆಂಡ್ಸ್ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ,ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಖ್ಯಾತಿಯ ಶಾಮನೂರು ಡೈಮಂಡ್ ಶಿವಗಂಗಾ ಕಪ್ ಪಂದ್ಯಾಟವನ್ನು ಸತತ 15 ಬಾರಿ ಯಶಸ್ವಿಯಾಗಿ ಆಯೋಜಿಸಿದ ದಾವಣಗೆರೆಯ ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ‌.ಪಿ) ಇವರನ್ನು ಗೌರವಿಸಲಾಯಿತು.
ಈ ಸಂದರ್ಭ ಟೂರ್ನಮೆಂಟ್ ನ ಪ್ರಮುಖ ರೂವಾರಿ,ಫ್ರೆಂಡ್ಸ್ ಬೆಂಗಳೂರು ತಂಡದ ಮಾಲೀಕರಾದ ರೇಣು ಗೌಡ,ಕೆ.ಪಿ.ಸತೀಶ್ ಚಕ್ರವರ್ತಿ ಕುಂದಾಪುರ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು…
Exit mobile version