ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಜುಲೈ 7 ಅನ್ನೋ ದಿನ ವರದಾನಯಾಯಿತೇ ಸ್ಪೋರ್ಟ್ಸ್ ಕನ್ನಡಕ್ಕೆ!!!

ಜುಲೈ 7 ಅನ್ನೋ ದಿನ ವರದಾನಯಾಯಿತೇ ಸ್ಪೋರ್ಟ್ಸ್ ಕನ್ನಡಕ್ಕೆ!!!

-

- Advertisment -spot_img
ಕೋಟ ರಾಮಕೃಷ್ಣ ಆಚಾರ್ಯ ಎನ್ನುವ ವ್ಯಕ್ತಿ ಕೇವಲ ಕ್ರೀಡಾ ಪ್ರೇಮಿಯಲ್ಲ. ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ವೈಭವೀಕರಣದಲ್ಲಿ ಕೋಟ ರಾಮಕೃಷ್ಣ ಆಚಾರ್ಯ  ಒಂದು ದೊಡ್ಡ ವಿಶ್ವವಿದ್ಯಾಲಯ.
ಯಾರು ಏನೇ ಹೇಳಲಿ ಕ್ರಿಕೆಟ್‌ ಹಾಗೂ ಕ್ರೀಡಾ ಲೋಕ ನೋಡಿದ ಅಪ್ರತಿಮ ಬರಹಗಾರ ಕೆ. ಆರ್.ಕೆ.  ಇವರ ಸ್ಪೋರ್ಟ್ಸ್ ಕನ್ನಡದ ಲೇಖನಗಳನ್ನು ಓದುವುದೆಂದರೆ ಅದೇನೋ ಮನಸ್ಸಿಗೆ ಖುಷಿ.
ಜೂಲೈ 7 ಅನ್ನೋದು ಬಹುಶಃ ಕೋಟ ರಾಮಕೃಷ್ಣ ಆಚಾರ್ಯರಿಗೆ  ಹೇಳಿ ಮಾಡಿಸಿದ ದಿನ. ವಿಶ್ವ ಕ್ರಿಕೆಟ್‌ ಕಂಡ ಮಹಾನ್‌ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹುಟ್ಟಿದ ದಿನವದು. ಅದೇನೋ ಕಾಕತಾಳೀಯ.  ಜುಲೈ 7, 2019 ರ ವಿಶೇಷ ದಿನದಂದು ಕೆ. ಆರ್.ಕೆ. ಸಾರಥ್ಯದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಲೋಕಾರ್ಪಣೆಗೊಂಡಿತು. ಕ್ರೀಡೆಯ ಮೇಲೆ ತನಗೆ ಇರುವ ಪ್ರೀತಿಯನ್ನು ಸ್ಪೋರ್ಟ್ಸ್ ಕನ್ನಡ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಯಶಸ್ವಿಯಾದರು. ಸ್ಪೋರ್ಟ್ಸ್ ಕನ್ನಡದ ಪ್ರಾಮುಖ್ಯತೆಯು ಮತ್ತಷ್ಟು ಬೆಳೆಯುತ್ತಲೇ ಇತ್ತು.
ಇದು ಎಷ್ಟರಮಟ್ಟಿಗೆ ಬೆಳೆಯಿತೆಂದರೆ, ಕೆಲವರಿಗಂತೂ ಇವರ ಪೋಸ್ಟ್ ಗಳನ್ನೂ ನೋಡದೆ ಇದ್ದರೆ ಅದೇನೋ ಮನಸ್ಸಿಗೆ ಅಸಮಾಧಾನ.  ಇದಾದ ಬಳಿಕ  ಈಗ ಮತ್ತೊಮ್ಮೆ  ಜುಲೈ 7, 2023 ರ ಶ್ರೇಷ್ಠ ದಿನದಂದು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಚಾನೆಲ್ ಪ್ರಾರಂಭವಾಗಲಿದೆ. ಮತ್ತೆ ಅದೇ ಜೂಲೈ 7 ಎಂಬ ಈ  ಶುಭ ದಿನಾಂಕವು ಸ್ಪೋರ್ಟ್ಸ್ ಕನ್ನಡದ ಪಯಣದಲ್ಲಿ ಉಡುಗೊರೆಯಾಗಿ ಪ್ರಮುಖ ಪಾತ್ರವನ್ನು ವಹಿಸಲಿದೆ.
ಕ್ರೀಡೆಯ ಮೇಲೆ  ಡಿಜಿಟಲ್ ಮಾಧ್ಯಮದ ಪ್ರಭಾವ ಹೆಚ್ಚುತ್ತಿರುವ ಕಾರಣ ಹೊಸತೊಂದು ಅಭಿಯಾನವನ್ನು ಸ್ಪೋರ್ಟ್ಸ್ ಕನ್ನಡ ಆರಂಭಿಸುತ್ತಿದೆ. ಸ್ಪೋರ್ಟ್ಸ್ ಕನ್ನಡ ಮತ್ತು ಸ್ಟಾರ್ ವರ್ಟೆಕ್ಸ್  ಕಂಪನಿ ಪರಸ್ಪರ ಕೈಜೋಡಿಸಿವೆ. ಬಹುತೇಕ  ಕ್ರೀಡೆಯನ್ನು ದೊಡ್ಡದಾಗಿಸುವ ಗುರಿಯನ್ನು ಇವರುಗಳು ಹೊಂದಿದ್ದಾರೆ. ಕ್ರೀಡಾ ಮಹತ್ವಾಕಾಂಕ್ಷೆ ಉತ್ತೇಜಿಸಲು  ಸ್ಪೋರ್ಟ್ಸ್ ಕನ್ನಡ  ಪರಿಪೂರ್ಣ ವೇದಿಕೆಯಾಗಲು ಹೊರಟಿದೆ.
ಇನ್ನೇನು ಶುಕ್ತವಾರ ಜುಲೈ  7, 2023 ರ ಶುಭ ಮುಹೂರ್ತದಲ್ಲಿ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಚಾನೆಲ್  ಬಿಡುಗಡೆಯಾಗಲಿದೆ. ಜುಲೈ 7 ಎಂಬ ದಿನ ಸ್ಪೋರ್ಟ್ಸ್ ಕನ್ನಡಕ್ಕೆ ಮತ್ತೆ ಅದೃಷ್ಟದ ದಿನವಾಗಲಿ ಹಾಗೂ ಈ  ಚಾನೆಲ್‌ ಗೆಲ್ಲಲಿ.
ಪ್ರಶಂಸೆ ಹಾಗು ಅಭಿನಂದನೆಗಳೊಂದಿಗೆ,
ಸುರೇಶ್ ಭಟ್ ಮೂಲ್ಕಿ
ಸ್ಪೋರ್ಟ್ಸ್ ಕನ್ನಡದ ಅಭಿಮಾನಿ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 1 =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you