ಭರವಸೆಯ ಬೆಳಕುಉಡುಪಿ-ಅಶಕ್ತರ ಬಾಳಿನ ಆಶಾಕಿರಣ-ವಿಶ್ವಕರ್ಮ ಮಹಾಸಭಾ ಟ್ರೋಫಿ-ಪೋಸ್ಟರ್ ಬಿಡುಗಡೆಗೊಳಿಸಿದ ಕೆ.ಪಿ.ನಂಜುಂಡಿ ವಿಶ್ವಕರ್ಮ

ಉಡುಪಿ-ಅಶಕ್ತರ ಬಾಳಿನ ಆಶಾಕಿರಣ-ವಿಶ್ವಕರ್ಮ ಮಹಾಸಭಾ ಟ್ರೋಫಿ-ಪೋಸ್ಟರ್ ಬಿಡುಗಡೆಗೊಳಿಸಿದ ಕೆ.ಪಿ.ನಂಜುಂಡಿ ವಿಶ್ವಕರ್ಮ

-

- Advertisment -spot_img
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ),ಉಡುಪಿ ಜಿಲ್ಲಾ ಘಟಕ ಮತ್ತು ಕೋಟ ಹೋಬಳಿ ಯುವ ಘಟಕದ ಆಶ್ರಯದಲ್ಲಿ 2022 ರ ವರ್ಷಾಂತ್ಯದಲ್ಲಿ ನಡೆಯಲಿರುವ ವಿಶ್ವಕರ್ಮ ಮಹಾಸಭಾ ಟ್ರೋಫಿ-2022 ಪೋಸ್ಟರನ್ನು ವಿಧಾನ ಪರಿಷತ್ ಸದಸ್ಯರು ಮತ್ತು ಅ.ಕ.ವಿ.ಮ ರಾಜ್ಯಾಧ್ಯಕ್ಷರು ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಇವರು ಬಿಡುಗಡೆಗೊಳಿಸಿದರು.
ಜೂನ್ 12 ರವಿವಾರ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ)ಕೋಟ ಹೋಬಳಿ ಯುವಘಟಕದ ಉದ್ಘಾಟನಾ ಕಾರ್ಯಕ್ರಮ,ಟೂರ್ನಮೆಂಟ್ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದ ಕೆ.ಪಿ‌.ನಂಜುಂಡಿಯವರು
“ವಿಶ್ವಕರ್ಮ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ  ಪ್ರೋತ್ಸಾಹ ಮತ್ತು
ಅಶಕ್ತರ ಬಾಳಿನ‌ ಆಶಾಕಿರಣ ವಾಗುವಂತೆ ಸಹಾಯನಿಧಿ ಸಂಗ್ರಹಣೆ-ಸಮಾಜದ ಅಭಿವೃದ್ಧಿಯ ಕುರಿತಾದ ಮುಖ್ಯ ಉದ್ದೇಶದೊಂದಿಗೆ ವಿಶ್ವಕರ್ಮ ಮಹಾಸಭಾ ಕೋಟ ಹೋಬಳಿ ದಿಟ್ಟ ಹೆಜ್ಜೆಯಿಟ್ಟಿದ್ದು ಸಮಾಜಕ್ಕೆ ಮಾದರಿಯಾಗಲಿ ಎಂದು ಈ ಸಂದರ್ಭ ಹೇಳಿದರು.ಮತ್ತು ವೈಯಕ್ತಿಕವಾಗಿ 50 ಸಾವಿರ ನೀಡುವುದಾಗಿ ಘೋಷಿಸಿದರು.”
ಈ ಸಂದರ್ಭ ವಾಸ್ತುಶಿಲ್ಪಿಗಳಾದ ಸುದರ್ಶನ್ ಆಚಾರ್,ಯೋಗೀಶ್ ಇನ್ನಾ
ಮತ್ತು ಸುಧೀರ್ ಆಚಾರ್ ಪೆರ್ಡೂರು ಇವರನ್ನು ಸನ್ಮಾನಿಸಲಾಯಿತು.
ಎಸ್‌.ಎಸ್.ಎಲ್.ಸಿ ಯಲ್ಲಿ‌ 600   ಕ್ಕಿಂತ ಅಧಿಕ ಅಂಕಗಳಿಸಿದ ಸುಶಾನ್,
ಅಂಕಿತಾ,ದೀಪ್ತಿ,ಅಶ್ವಿನಿ,ದಿಶಾ, ಪ್ರಮೋದ್ ಮತ್ತು ಸುಜಯ್ ಇವರಿಗೆ ಸನ್ಮಾನದ ಜೊತೆಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಯುವ ಸಾಧಕರಾದ ಇತ್ತೀಚೆಗಷ್ಟೇ ಸಿನಿಮಾ ನಟನೆಗಾಗಿ ರಾಜ್ಯ ಪ್ರಶಸ್ತಿ ಪಡೆದ  ಶ್ಲಾಘ ಸಾಲಿಗ್ರಾಮ(ಸಿನಿಮಾ ನಟನೆ),ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾದ ಕವನಾ ಕಾರ್ಕಳ(ಯೋಗ),
ಸಚಿನ್ ಕುಂಭಾಶಿ (ಯಕ್ಷಗಾನ),ವೈಷ್ಣವಿ ಕಡಿಯಾಳಿ(ಕ್ರಿಕೆಟ್),ನವನೀತ್
(ಕರಾಟೆ) ಮತ್ತು ಸಮೀಕ್ಷಿತ್(ಯಕ್ಷಗಾನ) ಇವರನ್ನು ಗೌರವಿಸಲಾಯಿತು.
ವಿಶ್ವಕರ್ಮ ಸಮಾಜದ ಕ್ರಿಕೆಟ್ ಪಂದ್ಯಾಟ ಸಂಘಟಿಸಿ ಸಮಾಜದ ನೆರವು ನೀಡಿದ ಶಿವರಾಮ ಆಚಾರ್ ಕಿನ್ನಿಗೋಳಿ,ಭಾಸ್ಕರ್ ಆಚಾರ್ ಉಡುಪಿ,ರಾಜ್ಯ ಮಟ್ಟದಲ್ಲಿ ಸಮಾಜದ ತಂಡವನ್ನು ಮುನ್ನಡೆಸಿ ಯಶಸ್ಸು ಸಾಧಿಸಿದ ವಿಜೇಂದ್ರ ಆಚಾರ್(ವೃಷ್ಟಿ ಸಾಲಿಗ್ರಾಮ),ಶ್ರೀಶ ಆಚಾರ್(ಹನ್ಸಿನಿ ಉಡುಪಿ),ಪ್ರಶಾಂತ್ ಆಚಾರ್(ಭಾರ್ಗವ ಸಾಲಿಗ್ರಾಮ),ಸುಧೀರ್ ಪೆರ್ಡೂರು(ಬಾಲಾಜಿ ಬುಲ್ಸ್ ಪೆರ್ಡೂರು),ಶ್ರೀಕಾಂತ್ ಆಚಾರ್(ವಿ.ವಿ.ಸಿ ಕುಂದಾಪುರ)ಸದಾಶಿವ ಆಚಾರ್ (ವಿ.ಕೆ.ಅವರಾಲು) ಮತ್ತು ಪ್ರಕಾಶ್ ಆಚಾರ್(ಖುಷಿ ಬೆನಗಲ್) ನಾಯಕರನ್ನು ಸನ್ಮಾನಿಸಲಾಯಿತು.
ಬಹು ನಿರೀಕ್ಷೆಯನ್ನು ಮೂಡಿಸಿದ ವಿಶ್ವಕರ್ಮ ಮಹಾಸಭಾ ಟ್ರೋಫಿ-2022 ಈ ವರ್ಷಾಂತ್ಯದಲ್ಲಿ ನಡೆಯಲಿದ್ದು,ವಿನೂತನ ಪ್ರಯೋಗದೊಂದಿಗೆ ವಿಶ್ವಕರ್ಮ ಸಮಾಜದ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೂ ಸಮನಾವಕಾಶ ಲಭಿಸಲಿದ್ದು,
ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಇತಿಹಾಸ ಸೃಷ್ಟಿಸಲಿದೆ ಎಂದು ಉಡುಪಿ ಜಿಲ್ಲೆ ಯುವ ಘಟಕಾಧ್ಯಕ್ಷರು ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕ ಕೋಟ ರಾಮಕೃಷ್ಣ ಆಚಾರ್ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seven + thirteen =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you