ಭರವಸೆಯ ಬೆಳಕುಉಡುಪಿ-ಅಶಕ್ತರ ಬಾಳಿನ ಆಶಾಕಿರಣ-ವಿಶ್ವಕರ್ಮ ಮಹಾಸಭಾ ಟ್ರೋಫಿ-ಪೋಸ್ಟರ್ ಬಿಡುಗಡೆಗೊಳಿಸಿದ ಕೆ.ಪಿ.ನಂಜುಂಡಿ ವಿಶ್ವಕರ್ಮ

ಉಡುಪಿ-ಅಶಕ್ತರ ಬಾಳಿನ ಆಶಾಕಿರಣ-ವಿಶ್ವಕರ್ಮ ಮಹಾಸಭಾ ಟ್ರೋಫಿ-ಪೋಸ್ಟರ್ ಬಿಡುಗಡೆಗೊಳಿಸಿದ ಕೆ.ಪಿ.ನಂಜುಂಡಿ ವಿಶ್ವಕರ್ಮ

-

- Advertisment -spot_img
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ),ಉಡುಪಿ ಜಿಲ್ಲಾ ಘಟಕ ಮತ್ತು ಕೋಟ ಹೋಬಳಿ ಯುವ ಘಟಕದ ಆಶ್ರಯದಲ್ಲಿ 2022 ರ ವರ್ಷಾಂತ್ಯದಲ್ಲಿ ನಡೆಯಲಿರುವ ವಿಶ್ವಕರ್ಮ ಮಹಾಸಭಾ ಟ್ರೋಫಿ-2022 ಪೋಸ್ಟರನ್ನು ವಿಧಾನ ಪರಿಷತ್ ಸದಸ್ಯರು ಮತ್ತು ಅ.ಕ.ವಿ.ಮ ರಾಜ್ಯಾಧ್ಯಕ್ಷರು ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಇವರು ಬಿಡುಗಡೆಗೊಳಿಸಿದರು.
ಜೂನ್ 12 ರವಿವಾರ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ)ಕೋಟ ಹೋಬಳಿ ಯುವಘಟಕದ ಉದ್ಘಾಟನಾ ಕಾರ್ಯಕ್ರಮ,ಟೂರ್ನಮೆಂಟ್ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದ ಕೆ.ಪಿ‌.ನಂಜುಂಡಿಯವರು
“ವಿಶ್ವಕರ್ಮ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ  ಪ್ರೋತ್ಸಾಹ ಮತ್ತು
ಅಶಕ್ತರ ಬಾಳಿನ‌ ಆಶಾಕಿರಣ ವಾಗುವಂತೆ ಸಹಾಯನಿಧಿ ಸಂಗ್ರಹಣೆ-ಸಮಾಜದ ಅಭಿವೃದ್ಧಿಯ ಕುರಿತಾದ ಮುಖ್ಯ ಉದ್ದೇಶದೊಂದಿಗೆ ವಿಶ್ವಕರ್ಮ ಮಹಾಸಭಾ ಕೋಟ ಹೋಬಳಿ ದಿಟ್ಟ ಹೆಜ್ಜೆಯಿಟ್ಟಿದ್ದು ಸಮಾಜಕ್ಕೆ ಮಾದರಿಯಾಗಲಿ ಎಂದು ಈ ಸಂದರ್ಭ ಹೇಳಿದರು.ಮತ್ತು ವೈಯಕ್ತಿಕವಾಗಿ 50 ಸಾವಿರ ನೀಡುವುದಾಗಿ ಘೋಷಿಸಿದರು.”
ಈ ಸಂದರ್ಭ ವಾಸ್ತುಶಿಲ್ಪಿಗಳಾದ ಸುದರ್ಶನ್ ಆಚಾರ್,ಯೋಗೀಶ್ ಇನ್ನಾ
ಮತ್ತು ಸುಧೀರ್ ಆಚಾರ್ ಪೆರ್ಡೂರು ಇವರನ್ನು ಸನ್ಮಾನಿಸಲಾಯಿತು.
ಎಸ್‌.ಎಸ್.ಎಲ್.ಸಿ ಯಲ್ಲಿ‌ 600   ಕ್ಕಿಂತ ಅಧಿಕ ಅಂಕಗಳಿಸಿದ ಸುಶಾನ್,
ಅಂಕಿತಾ,ದೀಪ್ತಿ,ಅಶ್ವಿನಿ,ದಿಶಾ, ಪ್ರಮೋದ್ ಮತ್ತು ಸುಜಯ್ ಇವರಿಗೆ ಸನ್ಮಾನದ ಜೊತೆಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಯುವ ಸಾಧಕರಾದ ಇತ್ತೀಚೆಗಷ್ಟೇ ಸಿನಿಮಾ ನಟನೆಗಾಗಿ ರಾಜ್ಯ ಪ್ರಶಸ್ತಿ ಪಡೆದ  ಶ್ಲಾಘ ಸಾಲಿಗ್ರಾಮ(ಸಿನಿಮಾ ನಟನೆ),ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾದ ಕವನಾ ಕಾರ್ಕಳ(ಯೋಗ),
ಸಚಿನ್ ಕುಂಭಾಶಿ (ಯಕ್ಷಗಾನ),ವೈಷ್ಣವಿ ಕಡಿಯಾಳಿ(ಕ್ರಿಕೆಟ್),ನವನೀತ್
(ಕರಾಟೆ) ಮತ್ತು ಸಮೀಕ್ಷಿತ್(ಯಕ್ಷಗಾನ) ಇವರನ್ನು ಗೌರವಿಸಲಾಯಿತು.
ವಿಶ್ವಕರ್ಮ ಸಮಾಜದ ಕ್ರಿಕೆಟ್ ಪಂದ್ಯಾಟ ಸಂಘಟಿಸಿ ಸಮಾಜದ ನೆರವು ನೀಡಿದ ಶಿವರಾಮ ಆಚಾರ್ ಕಿನ್ನಿಗೋಳಿ,ಭಾಸ್ಕರ್ ಆಚಾರ್ ಉಡುಪಿ,ರಾಜ್ಯ ಮಟ್ಟದಲ್ಲಿ ಸಮಾಜದ ತಂಡವನ್ನು ಮುನ್ನಡೆಸಿ ಯಶಸ್ಸು ಸಾಧಿಸಿದ ವಿಜೇಂದ್ರ ಆಚಾರ್(ವೃಷ್ಟಿ ಸಾಲಿಗ್ರಾಮ),ಶ್ರೀಶ ಆಚಾರ್(ಹನ್ಸಿನಿ ಉಡುಪಿ),ಪ್ರಶಾಂತ್ ಆಚಾರ್(ಭಾರ್ಗವ ಸಾಲಿಗ್ರಾಮ),ಸುಧೀರ್ ಪೆರ್ಡೂರು(ಬಾಲಾಜಿ ಬುಲ್ಸ್ ಪೆರ್ಡೂರು),ಶ್ರೀಕಾಂತ್ ಆಚಾರ್(ವಿ.ವಿ.ಸಿ ಕುಂದಾಪುರ)ಸದಾಶಿವ ಆಚಾರ್ (ವಿ.ಕೆ.ಅವರಾಲು) ಮತ್ತು ಪ್ರಕಾಶ್ ಆಚಾರ್(ಖುಷಿ ಬೆನಗಲ್) ನಾಯಕರನ್ನು ಸನ್ಮಾನಿಸಲಾಯಿತು.
ಬಹು ನಿರೀಕ್ಷೆಯನ್ನು ಮೂಡಿಸಿದ ವಿಶ್ವಕರ್ಮ ಮಹಾಸಭಾ ಟ್ರೋಫಿ-2022 ಈ ವರ್ಷಾಂತ್ಯದಲ್ಲಿ ನಡೆಯಲಿದ್ದು,ವಿನೂತನ ಪ್ರಯೋಗದೊಂದಿಗೆ ವಿಶ್ವಕರ್ಮ ಸಮಾಜದ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೂ ಸಮನಾವಕಾಶ ಲಭಿಸಲಿದ್ದು,
ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಇತಿಹಾಸ ಸೃಷ್ಟಿಸಲಿದೆ ಎಂದು ಉಡುಪಿ ಜಿಲ್ಲೆ ಯುವ ಘಟಕಾಧ್ಯಕ್ಷರು ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕ ಕೋಟ ರಾಮಕೃಷ್ಣ ಆಚಾರ್ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty − 20 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you