9.9 C
London
Saturday, April 20, 2024
Homeಕ್ರಿಕೆಟ್ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿ-ಚಾಲೆಂಜ್ ಕ್ರಿಕೆಟರ್ಸ್ ಸಾಮಾಜಿಕ ಕಳಕಳಿ ಶ್ಲಾಘನೀಯ"-ಕೆ.ಆರ್.ನಾಯಕ್

ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿ-ಚಾಲೆಂಜ್ ಕ್ರಿಕೆಟರ್ಸ್ ಸಾಮಾಜಿಕ ಕಳಕಳಿ ಶ್ಲಾಘನೀಯ”-ಕೆ.ಆರ್.ನಾಯಕ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ಚಾಲೆಂಜ್ ಕ್ರಿಕೆಟರ್ಸ್ ಕುಂದಾಪುರ ಇವರ ಆಶ್ರಯದಲ್ಲಿ ಆಯೋಜಿಸಲಾದ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022
ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನೆರವೇರಿತು.
ದೀಪ ಬೆಳಗಿಸಿ ಮಾತನಾಡಿದ ಕುಂದಾಪುರದ ಸೂಪರ್ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಮಾಲೀಕ ಕೆ.ಆರ್.ನಾಯಕ್ ಮಾತನಾಡಿ ” ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ‌.ಚಾಲೆಂಜ್ ಕ್ರಿಕೆಟ್ ಕ್ಲಬ್ ನ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಭಾಸ್ಕರ್ ಮಾತನಾಡಿ “ಚಾಲೆಂಜ್ ಕ್ರಿಕೆಟ್ ಕ್ಲಬ್ ಕಳೆದ 33 ವರ್ಷಗಳಿಂದ ಕ್ರೀಡೆಯೊಂದಿಗೆ ಸಮಾಜ ಸೇವೆಯ ಮೂಲಕ ಇತರ ತಂಡಗಳಿಗೆ ಮಾದರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ” ಯುವ ಜನಾಂಗ ಮಾದಕ ವ್ಯಸನಗಳ ದಾಸರಾಗದೆ ಸಮಾಜದ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಕರೆ ನೀಡಿದರು..
 
ಈ ಸಂದರ್ಭ ಕ್ರೀಡೆ ಮತ್ತು ಕಲಾಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಚಿತಾ ಹತ್ವಾರ್,ಕುಮಾರಿ ರಮಿತಾ ಹತ್ವಾರ್,
ಕುಮಾರಿ ಚಾರಿತ್ರ್ಯಾ,ಮಾಸ್ಟರ್ ತೇಜಸ್ ಖಾರ್ವಿ,
ಮಾಸ್ಟರ್ ಅನಿಕೇತ್,ಕುಮಾರಿ ಪ್ರಾಚಿ,ಕುಮಾರಿ ಆಧ್ಯ,
ಕುಮಾರಿ ನಿಶ್ಮಿತಾ,ಮಾಸ್ಟರ್ ಈಶಾನ್.ಎ.ಉಪ್ಪೂರ್,
ಮೊಹಮ್ಮದ್ ಅರ್ಮಾನ್,ಕುಮಾರಿ ಧನ್ವಿ ಮರವಂತೆ,
ಕುಮಾರಿ ಅಂಕಿತಾ,ಕುಮಾರಿ ದಿಯಾ ನಾಯರ್,
ಕುಮಾರಿ ಸಮೃದ್ಧಿ ಎಸ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ
ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯ್.ಎಸ್.ಪೂಜಾರಿ,ಮಂ.ಸೇ.ಸ.ಸಂ.ಲಿ ಮಂದಾರ್ತಿ ನಿರ್ದೇಶಕ ಗುರುಪ್ರಸಾದ್ ಶಿರೂರು,ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ,ಶಿರ್ವ ಲಯನ್ಸ್ ಕ್ಲಬ್ ನ ಮಾಜಿ ಗವರ್ನರ್ ಎನ್.ಎಮ್.ಹೆಗ್ಡೆ,ಉದ್ಯಮಿಗಳಾದ ಮಡಾಮಕ್ಕಿ ಶಶಿಧರ ಶೆಟ್ಟಿ,ದಿನೇಶ್ ಹೆಗ್ಡೆ ಮೊಳಹಳ್ಳಿ,ಶ್ರೀಧರ ಆಚಾರ್ ವಡೇರಹೋಬಳಿ,ಮಹೇಶ್ ಪೂಜಾರಿ,ಸಜಿತ್ ಹೆಗ್ಡೆ,ಕುಂದಾಪುರ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ ಶೆಟ್ಟಿ,ವಕೀಲರಾದ ರಮೇಶ್ ಹತ್ವಾರ್,ತಲ್ಲೂರು ಮೆಸ್ಕಾಂ ವಿಜಯ ಪೂಜಾರಿ,ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ,ಶ್ರೀಮತಿ ಪ್ರಿಯಾ ವಸಂತ ಕರ್ಕೇರ ಬೀಜಾಡಿ,ಕುಂದಾಪುರ ಬಿ.ಜೆ.ಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸೌರಭಿ.ವಿ.ಪೈ ಮತ್ತು ಕುಂದಾಪುರ ಪುರಸಭೆ ಸದಸ್ಯರಾದ ರೋಹಿಣಿ ಉದಯ್ ಕುಮಾರ್ ಉಪಸ್ಥಿತರಿದ್ದರು.
ಕೆ.ಪಿ.ಸತೀಶ್ ಸ್ವಾಗತಿಸಿದರೆ,ಶಿವನಾರಾಯಣ್ ಐತಾಳ್ ಕೋಟ ನಿರೂಪಣೆಗೈದರೆ,ಅಭಿಲಾಷ್ ವಂದಿಸಿದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × 2 =