Categories
ಅಥ್ಲೆಟಿಕ್ಸ್ ಇತರೆ

ಉಡುಪಿಯಲ್ಲಿ ಇಂದು ಸಂಧ್ಯೋದಯ ಸಂಸ್ಥೆ ಪಿತ್ರೋಡಿ ವತಿಯಿಂದ “ಕಲಾ ಸ್ಫೂರ್ತಿ-2020”

5 ವಿಶ್ವದಾಖಲೆಗಳನ್ನು ಸ್ಥಾಪಿಸಿದ ಯೋಗರತ್ನ,ಗೋಲ್ಡನ್ ಗರ್ಲ್ ಖ್ಯಾತಿಯ ಕುಮಾರಿ ತನುಶ್ರೀ ಪಿತ್ರೋಡಿ ಇವರಿಗೆ ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುತ್ತದೆ.ಇದರ ಸಂಭ್ರಮಾಚರಣೆಯ ಅಂಗವಾಗಿ ತನುಶ್ರೀ ಪೋಷಕರ ಸಂಧ್ಯೋದಯ ಪಿತ್ರೋಡಿ ಸಂಸ್ಥೆ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ.
ಪಂಜಿಮಾರು ಶಿರ್ವದ ಅಪರೂಪದ ವಿಶೇಷ ಚೇತನರು ಒಂದೇ ಮನೆಯ ಸೋದರ,ಸೋದರಿಯರಾದ ಗಣೇಶ್ ಮತ್ತು ಸುಮಂಗಳಾ ಇವರ ವಿಶೇಷ ಕಲಾಕೃತಿಗಳ ಪ್ರದರ್ಶನ
6-12-2020 ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಈ ಸಂದರ್ಭ ವಿವಿಧ ಕ್ಷೇತ್ರಗಳ ವಿಶೇಷ ಸಾಧಕರಿಗೆ ಸನ್ಮಾನ‌ ಕಾರ್ಯಕ್ರಮ ನಡೆಯಲಿದ್ದು,
ತನುಶ್ರೀ&ರಿತುಶ್ರೀ ಇವರಿಂದ “ಕೃಷ್ಣ ಕೇಳಿ” ಎಂಬ ಯಕ್ಷಗಾನ ನೃತ್ಯ ರೂಪಕ ನಡೆಯಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

nine − 7 =