ಕ್ರಿಕೆಟ್ಕಲ್ಲಮುಂಡ್ಕೂರು ವಾರಿಯರ್ಸ್ ತಂಡಕ್ಕೆ ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2020 ಪ್ರಶಸ್ತಿ

ಕಲ್ಲಮುಂಡ್ಕೂರು ವಾರಿಯರ್ಸ್ ತಂಡಕ್ಕೆ ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2020 ಪ್ರಶಸ್ತಿ

-

- Advertisment -spot_img

 

ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಸ್ಥಳೀಯ ತಂಡಗಳ ಬಲವರ್ಧನೆ ಯ ಸದುದ್ದೇಶದಿಂದ
ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ತಂಡ ದಿನಾಂಕ 7,8.15 ರಂದು ಕಟೀಲು ಸಿತ್ಲ ಮೈದಾನದಲ್ಲಿ ಆಯೋಜಿಸಿದ್ದ ಕಿನ್ನಿಗೋಳಿ ಪ್ರೀಮಿಯರ್ ಲೀಗ್ (KPL) ಪಂದ್ಯಾವಳಿಯ ಪ್ರಶಸ್ತಿಯನ್ನು ಕಲ್ಲಮುಂಡ್ಕೂರು ತಂಡ ಜಯಿಸಿದೆ.

ಪಂದ್ಯಾಕೂಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ದಿನಾಂಕ 15/03/2020 ಮಧ್ಯಾಹ್ನ ಸಿತ್ಲ ಮೈಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುಗಪುರುಷ ಸಂಪಾದಕರಾದ ಶ್ರೀಭುವನಾಭಿರಾಮ ಉಡುಪ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶ್ರೀ ಶರತ್ ಶೆಟ್ಟಿ, ಅಧ್ಯಕ್ಷರು ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್, ಶ್ರೀ ಗೌತಮ್ ಶೆಟ್ಟಿ, ಅಧ್ಯಕ್ಷರು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್, ಶ್ರೀ ಗಿರೀಶ್ ಶೆಟ್ಟಿ ಶ್ರೀ ಡೆವೆಲಪರ್ ಕಟೀಲು, ಕಟೀಲು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಪೂಜಾರಿ, ಉಪಾಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಶೆಟ್ಟಿ ಕಟೀಲು, ಎ.ಪಿ.ಎಮ್.ಸಿ.ಸದಸ್ಯರಾದ ಶ್ರೀ ಪ್ರಮೋದ್ ಕುಮಾರ್ ಕಿನ್ನಿಗೋಳಿ ಹಾಗೂ ಕೆ ಎಫ್ ಸಿ ಸಂಘಟನೆಯ ಸಧಸ್ಯರು ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪ್ರತಿಷ್ಟಿತ ಪಡುಬಿದ್ರಿ ತಂಡದ ಆದರ್ಶ ಕಪ್ತಾನರು ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ವಲಯಾಧ್ಯಕ್ಷರಾದ ಶ್ರೀ ಶರತ್ ಶೆಟ್ಟಿ ಪಡುಬಿದ್ರಿ ಹಾಗೂ ಕ್ರೀಡಾಲೋಕದಲ್ಲಿ ತೂಫಾನಿ ಮೈಲಿಗಲ್ಲನ್ನು ಸ್ಥಾಪಿಸಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿಯ ಸಂಸ್ಥಾಪಕಾಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಕುಂದಾಪುರ ಹಾಗೂ ಪಡುಬಿದ್ರಿ ಫ್ರೆಂಡ್ಸ್ ನ ಪರವಾಗಿ ಸಾಕಷ್ಟು ಪಂದ್ಯಗಳನ್ನಾಡಿ ಯು.ಎ.ಇ ಪರವಾಗಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯವಾಡಿದ, ಕೆ‌.ಪಿ.ಎಲ್,ಎಮ್.ಪಿ.ಎಲ್ ನಲ್ಲಿ ಅತ್ಯುತ್ತಮ ನಿರ್ವಹಣೆ ನೀಡಿ ಇದೀಗ ಲೆದರ್ ಬಾಲ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಿಸ್ತಿನ ಕ್ರಿಕೆಟಿಗರಾದ ನಿತಿನ್ ಮೂಲ್ಕಿ ಯವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ವಿಜೇತರ ವಿವರ.

ಪ್ರಥಮ ಪ್ರಶಸ್ತಿ : ಕಲ್ಲಮುಂಡ್ಕುರು ವಾರಿಯರ್ಸ್ ( ಸುಕುಮಾರ್ ಅಮೀನ್ ಮಾಲಕತ್ವದ ತಂಡ )
ದ್ವಿತೀಯ ಪ್ರಶಸ್ತಿ : ಐಕಳ ಇಂಡಿಯನ್ಸ್ ( ಪ್ರದೀಪ್ ಅವರ ಮಾಲಕತ್ವದ ತಂಡ )
ಫೇರ್ ಪ್ಲೇ ಪ್ರಶಸ್ತಿ : ಕಿಂಗ್ಸ್ ಇಲೆವೆನ್, ಕಿನ್ನಿಗೋಳಿ ( ದಿವಾಕರ್ ಚೌಟ ಮಾಲಕತ್ವದ ತಂಡ )
ಸರಣಿ ಶ್ರೇಷ್ಠ : ಸುದರ್ಶನ್ ( ಕಟೀಲ್ ಕಮೊಂಡೋಸ್ )
ಪಂದ್ಯ ಶ್ರೇಷ್ಠ :ಜೊಯೆಲ್ (ಕಲ್ಲಮುಂಡ್ಕುರು ವಾರಿಯರ್ಸ್ )
ಬೆಸ್ಟ್ ಬ್ಯಾಟ್ಸಮನ್ : ಸಂದೀಪ್ ಕೃಷ್ಣ (ಕಲ್ಲಮುಂಡ್ಕುರು ವಾರಿಯರ್ಸ್ )
ಬೆಸ್ಟ್ ಬೌಲರ್ : ಪ್ರಕಾಶ್ (ಐಕಳ ಇಂಡಿಯನ್ಸ್ ).

ಶರತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × two =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you