ಕ್ರಿಕೆಟ್ಕಲ್ಲಮುಂಡ್ಕೂರು ವಾರಿಯರ್ಸ್ ತಂಡಕ್ಕೆ ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2020 ಪ್ರಶಸ್ತಿ

ಕಲ್ಲಮುಂಡ್ಕೂರು ವಾರಿಯರ್ಸ್ ತಂಡಕ್ಕೆ ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2020 ಪ್ರಶಸ್ತಿ

-

- Advertisment -spot_img

 

ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಸ್ಥಳೀಯ ತಂಡಗಳ ಬಲವರ್ಧನೆ ಯ ಸದುದ್ದೇಶದಿಂದ
ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ತಂಡ ದಿನಾಂಕ 7,8.15 ರಂದು ಕಟೀಲು ಸಿತ್ಲ ಮೈದಾನದಲ್ಲಿ ಆಯೋಜಿಸಿದ್ದ ಕಿನ್ನಿಗೋಳಿ ಪ್ರೀಮಿಯರ್ ಲೀಗ್ (KPL) ಪಂದ್ಯಾವಳಿಯ ಪ್ರಶಸ್ತಿಯನ್ನು ಕಲ್ಲಮುಂಡ್ಕೂರು ತಂಡ ಜಯಿಸಿದೆ.

ಪಂದ್ಯಾಕೂಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ದಿನಾಂಕ 15/03/2020 ಮಧ್ಯಾಹ್ನ ಸಿತ್ಲ ಮೈಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುಗಪುರುಷ ಸಂಪಾದಕರಾದ ಶ್ರೀಭುವನಾಭಿರಾಮ ಉಡುಪ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶ್ರೀ ಶರತ್ ಶೆಟ್ಟಿ, ಅಧ್ಯಕ್ಷರು ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್, ಶ್ರೀ ಗೌತಮ್ ಶೆಟ್ಟಿ, ಅಧ್ಯಕ್ಷರು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್, ಶ್ರೀ ಗಿರೀಶ್ ಶೆಟ್ಟಿ ಶ್ರೀ ಡೆವೆಲಪರ್ ಕಟೀಲು, ಕಟೀಲು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಪೂಜಾರಿ, ಉಪಾಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಶೆಟ್ಟಿ ಕಟೀಲು, ಎ.ಪಿ.ಎಮ್.ಸಿ.ಸದಸ್ಯರಾದ ಶ್ರೀ ಪ್ರಮೋದ್ ಕುಮಾರ್ ಕಿನ್ನಿಗೋಳಿ ಹಾಗೂ ಕೆ ಎಫ್ ಸಿ ಸಂಘಟನೆಯ ಸಧಸ್ಯರು ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪ್ರತಿಷ್ಟಿತ ಪಡುಬಿದ್ರಿ ತಂಡದ ಆದರ್ಶ ಕಪ್ತಾನರು ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ವಲಯಾಧ್ಯಕ್ಷರಾದ ಶ್ರೀ ಶರತ್ ಶೆಟ್ಟಿ ಪಡುಬಿದ್ರಿ ಹಾಗೂ ಕ್ರೀಡಾಲೋಕದಲ್ಲಿ ತೂಫಾನಿ ಮೈಲಿಗಲ್ಲನ್ನು ಸ್ಥಾಪಿಸಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿಯ ಸಂಸ್ಥಾಪಕಾಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಕುಂದಾಪುರ ಹಾಗೂ ಪಡುಬಿದ್ರಿ ಫ್ರೆಂಡ್ಸ್ ನ ಪರವಾಗಿ ಸಾಕಷ್ಟು ಪಂದ್ಯಗಳನ್ನಾಡಿ ಯು.ಎ.ಇ ಪರವಾಗಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯವಾಡಿದ, ಕೆ‌.ಪಿ.ಎಲ್,ಎಮ್.ಪಿ.ಎಲ್ ನಲ್ಲಿ ಅತ್ಯುತ್ತಮ ನಿರ್ವಹಣೆ ನೀಡಿ ಇದೀಗ ಲೆದರ್ ಬಾಲ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಿಸ್ತಿನ ಕ್ರಿಕೆಟಿಗರಾದ ನಿತಿನ್ ಮೂಲ್ಕಿ ಯವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ವಿಜೇತರ ವಿವರ.

ಪ್ರಥಮ ಪ್ರಶಸ್ತಿ : ಕಲ್ಲಮುಂಡ್ಕುರು ವಾರಿಯರ್ಸ್ ( ಸುಕುಮಾರ್ ಅಮೀನ್ ಮಾಲಕತ್ವದ ತಂಡ )
ದ್ವಿತೀಯ ಪ್ರಶಸ್ತಿ : ಐಕಳ ಇಂಡಿಯನ್ಸ್ ( ಪ್ರದೀಪ್ ಅವರ ಮಾಲಕತ್ವದ ತಂಡ )
ಫೇರ್ ಪ್ಲೇ ಪ್ರಶಸ್ತಿ : ಕಿಂಗ್ಸ್ ಇಲೆವೆನ್, ಕಿನ್ನಿಗೋಳಿ ( ದಿವಾಕರ್ ಚೌಟ ಮಾಲಕತ್ವದ ತಂಡ )
ಸರಣಿ ಶ್ರೇಷ್ಠ : ಸುದರ್ಶನ್ ( ಕಟೀಲ್ ಕಮೊಂಡೋಸ್ )
ಪಂದ್ಯ ಶ್ರೇಷ್ಠ :ಜೊಯೆಲ್ (ಕಲ್ಲಮುಂಡ್ಕುರು ವಾರಿಯರ್ಸ್ )
ಬೆಸ್ಟ್ ಬ್ಯಾಟ್ಸಮನ್ : ಸಂದೀಪ್ ಕೃಷ್ಣ (ಕಲ್ಲಮುಂಡ್ಕುರು ವಾರಿಯರ್ಸ್ )
ಬೆಸ್ಟ್ ಬೌಲರ್ : ಪ್ರಕಾಶ್ (ಐಕಳ ಇಂಡಿಯನ್ಸ್ ).

ಶರತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

14 − four =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you