ಇತರೆಕರಾವಳಿ ಕನ್ನಡಿಗ ಕೋಟ ರಾಮಕೃಷ್ಣ ಆಚಾರ್ಯರಿಗೆ ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ...

ಕರಾವಳಿ ಕನ್ನಡಿಗ ಕೋಟ ರಾಮಕೃಷ್ಣ ಆಚಾರ್ಯರಿಗೆ ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

-

- Advertisment -spot_img
ಟೆನ್ನಿಸ್ ಬಾಲ್ ಕ್ರಿಕೆಟ್ ಗೆ ಆಟಗಾರರ ಮಧ್ಯೆ ಒಂದು ಸಂಕೋಲೆಯನ್ನು  ಸೃಷ್ಟಿಸಿದ ಕರ್ನಾಟಕದ ಮೊತ್ತ ಮೊದಲ ಕ್ರೀಡಾ ವೆಬ್ ಸೈಟ್ ಎಂಬ ಕೀರ್ತಿಗೆ ಪಾತ್ರವಾಗಿದೆ
ಈ sportskannada.com . ಕೋಟ ರಾಮಕೃಷ್ಣ ಆಚಾರ್ ರವರು ಸತತ 10 ವರ್ಷಗಳ ಅಧ್ಯಯನ ಮತ್ತು ಅವಿರತ ಶ್ರಮದಿಂದ ಕರ್ನಾಟಕದಲ್ಲಿರುವ 1970 ರಿಂದ 2020 ರ ಕಾಲಘಟ್ಟದ ಹಿರಿಯ ಹಾಗೂ ಕಿರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರನ್ನು ಅವರಿದ್ದಲ್ಲೇ ಹೋಗಿ ಸಂದರ್ಶಿಸಿ ಅವರ ಬಗೆಗಿನ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಹಿರಿಯ ಆಟಗಾರರ ಅನುಭವಗಳನ್ನು ನಮ್ಮ ಭವಿಷ್ಯದ ಪೀಳಿಗೆಗಳಿಗೆ ಹಂಚಿ ಟೆನ್ನಿಸ್ ಬಾಲ್ ಕ್ರಿಕೆಟ್ ಎಂಬ ಹಳೆಯ ಬೇರು ಹೊಸ ಚಿಗುರೊಡೆಯುದಕ್ಕೊಸ್ಕರ ನೀರೆರೆಯುವ ಪ್ರಯತ್ನವನ್ನ ಮಾಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಮತ್ತು ಕಿರಿಯ ಆಟಗಾರರನ್ನು “ರಾಜ್ಯ ಟೆನ್ನಿಸ್ ಕ್ರಿಕೆಟ್” ಎಂಬ ಗ್ರೂಪ್ ಮೂಲಕ ಒಗ್ಗೂಡಿಸುವ ಸಫಲ ಪ್ರಯತ್ನವನ್ನು ಮಾಡಿರುವ ಆರ್.ಕೆ sportskannada.com ವೆಬ್ಸೈಟ್ ಗಾಗಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ವೆಬ್ಸೈಟ್ ಲಾಂಚಿಂಗ್  ಕಾರ್ಯಕ್ರಮದ ಯಶಸ್ಸಿಗೆ  ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಸ್ವಯಂ ಪ್ರೇರಿತರಾಗಿ ಸಹಾಯವನ್ನು ಮಾಡಿರುವರು ಎನ್ನುವುದಕ್ಕೆ ಸಂತಸ ಪಡಬೇಕು ಹಾಗೂ ಯಾವುದೇ ಸಹಾಯಕ್ಕಾಗಿ ಆರ್.ಕೆ ಯವರು ಎಂದಿಗೂ ಕೈ ಚಾಚಿಲ್ಲ ಎಂಬುವುದು ನಾವು ಗಮನಿಸಬೇಕಾದ ಮುಖ್ಯ ವಿಷಯ.
ಕೇವಲ ಮೂರು ವರ್ಷದಲ್ಲೇ ಊಹಿಸಲಸಾಧ್ಯವಾಗುವಷ್ಟು ಸಾಧನೆಗಳನ್ನು ಮಾಡಿದ್ದಾರೆ. ಸುಮಾರು 2000ಕ್ಕಿಂತಲೂ ಹೆಚ್ಚು ಕ್ರೀಡಾಪಟುಗಳನ್ನು ಸಂದರ್ಶನ ನಡೆಸಿ ಅವರ ಬಗೆಗೆನ ಲೇಖನ, ಮಾಹಿತಿಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಗೊಳಿಸಿದ್ದಾರೆ.  ಅಸಂಖ್ಯಾತ ಅಭಿಮಾನಿ ಓದುಗರನ್ನು ಹೊಂದಿದ್ದು ಇದರಲ್ಲಿ ಬರುವ ಕ್ರೀಡಾ ಸುದ್ಧಿಗಳು, ವಿಶೇಷ ವರದಿಗಳು, ಉತ್ತಮ ಅಂಕಣಗಳಿಗೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿನಿತ್ಯ ಈ ವೆಬ್ ಸೈಟ್ನಲ್ಲಿ ಬರುವ ಹೊಸ ವಿಷಯಗಳಿಗಾಗಿ ಕಾದು ಕುಳಿತುಕೊಳ್ಳುವ ಒಂದಷ್ಟು ಜನ ಸಮೂಹವೇ ಇದೆ ಎಂದರೆ ತಪ್ಪಾಗದು.
ಇತ್ತೀಚೆಗೆ ರಾಯಚೂರು ಜಿಲ್ಲೆಯಲ್ಲಿ ಕಲಾ ಸಂಕುಲ ಸಂಸ್ಥೆ (ರಿ) ರಾಯಚೂರು ಇವರ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಆರ್ ಕೆ.ಯವರ ಮೇಲಿನ ಅಭಿಮಾನ ಇನ್ನಷ್ಟು ಇಮ್ಮಡಿಯಾಗಿದೆ. ಇದೇ ಬರುವ 28-11-2020ರಂದು ರಾಯಚೂರುನಲ್ಲಿ ನಡೆಯಲಿರುವ ಈ ಕಲ್ಯಾಣ ಕರ್ನಾಟಕ ಉತ್ಸವ್ದಲ್ಲಿ ವಿವಿಧ ಸಾಹಿತಿಗಳು,ಸಂಸದರು, ಶಾಸಕರು ಉಪಸ್ಥಿತರಿರುವ ವೇಧಿಕೆಯಲ್ಲಿ ಕ್ರೀಡ ಕ್ಷೇತ್ರಕ್ಕೆ ವಿಶಿಷ್ಟ ಸಾಧನೆಗೈದ ಸಾಮಾನ್ಯ ಯುವಕನೊಬ್ಬನು ಸನ್ಮಾನಿಸಲ್ಪಡುತ್ತಿರುವುದು ನಿಜಕ್ಕೂ ಸಂತಸದ ವಿಷಯ. ಇಷ್ಟೊಂದು ಸಾಧಿಸಿದರೂ, ಕಳೆದ 2 ವರ್ಷಗಳಲ್ಲಿ ಪ್ರಶಸ್ತಿಗಳ ಸಾಲೇ ಹರಿದು ಬಂದರೂ ಕ್ರೀಡಾಲೋಕದ ಮೇಲಿರುವ ಆರ್.ಕೆ ಯ ಕನಸು ಬೆಟ್ಟದಷ್ಟಿದೆ. ಇದು ಕೇವಲ ಆರಂಭ,ತಲುಪಬೇಕಾದ ಹಾದಿ ಬಲುದೂರವಿದೆ.
ಯಾವುದೇ ಸರಕಾರದ ಅಕಾಡೆಮಿಗಳ ನೆರವುಗಳಿಲ್ಲದೆ ತನ್ನ ಸ್ವಂತ ಪ್ರಯತ್ನದಲ್ಲಿ ಕ್ರೀಡಾರಂಗಕ್ಕೋಸ್ಕರ, ಕ್ರೀಡಾಪಟುಗಳಿಗೋಸ್ಕರ, ಹಿರಿಯ ನಿವೃತ್ತ ಆಟಗಾರರಿಗೊಸ್ಕರ, ಮುಂದಿನ ಯುವ ಪೀಳಿಗೆಗೊಸ್ಕರ ದುಡಿಯುತ್ತಿರುವ ನಮ್ಮ ಆರ್.ಕೆ ಗೆ ನಮ್ಮೆಲ್ಲರ ಪ್ರೊತ್ಸಾಹದ ಅಗತ್ಯವಿದೆ. ಆಶೀರ್ವಾದದ ಅಗತ್ಯವಿದೆ. ಆರ್ ಕೆ. ಯವರ ಕನಸಿನಂತೆ ನಮ್ಮ ರಾಜ್ಯದಲ್ಲೊಂದು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪನೆಗೊಳ್ಳಲಿ.  ಸಮಾಜದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಬದುಕಿ ಅಸಾಮಾನ್ಯ ರೀತಿಯ ಸಾಧನೆಯನ್ನು ಮಾಡಿದ ನಮ್ಮ ಆರ್ ಕೆ ಯವರಿಗೆ ಸರಕಾರದ ವಿವಿಧ ಪ್ರಶಸ್ತಿಗಳು ದೊರಕಲಿ. ಅವರ ಕಾರ್ಯಕ್ಕೆ ಸರಕಾರದ ಬೆಂಬಲ ಸಿಗಲಿ. ಅದರಿಂದ ಅವರ ಈ ಒಂದು ವಿಭಿನ್ನ ಪ್ರಯತ್ನ ಇನ್ನಷ್ಟು ಉತ್ತುಂಘ ಶಿಖರವನ್ನೇರಲಿ. ಆರ್.ಕೆ ಯಂತವರ ಪ್ರಯತ್ನದಿಂದ ನಮ್ಮ ಊರಿನ ಮಕ್ಕಳು ಮುಂದೆ ರಾಷ್ಟ್ರ – ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ. ಆರ್.ಕೆ ಯ ಕನಸು ನನಸಾಗಲಿ ಎಂದು ನಾವೆಲ್ಲ ಹಾರೈಸೋಣ.
ದಿನೇಶ ಆಚಾರ್ಯ ಸಾಲಿಗ್ರಾಮ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × four =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you