8.6 C
London
Saturday, May 4, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕಾರ್ಕಳ-ಸ್ವರಾಜ್ ಮೈದಾನದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಗತವೈಭವ-ಮೊದಲ ಟೂರ್ನಿಯಲ್ಲಿ ಯಶಸ್ಸು ಸಾಧಿಸಿದ T.C.A ಉಡುಪಿ

ಕಾರ್ಕಳ-ಸ್ವರಾಜ್ ಮೈದಾನದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಗತವೈಭವ-ಮೊದಲ ಟೂರ್ನಿಯಲ್ಲಿ ಯಶಸ್ಸು ಸಾಧಿಸಿದ T.C.A ಉಡುಪಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕೋಟ ರಾಮಕೃಷ್ಣ ಆಚಾರ್ಯ-ಸ್ಪೋರ್ಟ್ಸ್ ಕನ್ನಡ ವರದಿ
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕಾರ್ಕಳದಲ್ಲಿ ನಡೆದ ಮೊದಲ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಆರ್.ಕೆ‌.ಕಾರ್ಕಳ ಗೆಲುವನ್ನು ಸಾಧಿಸಿದೆ.
ಟಿ-10 ಮಾದರಿಯಲ್ಲಿ ಎರಡು ದಿನಗಳ ಕಾಲ ಹಗಲಿನಲ್ಲಿ ನಡೆದ ಪಂದ್ಯಾಕೂಟದಲ್ಲಿ ಲೀಗ್ ಹಂತದ ರೋಚಕ ಕದನಗಳ ಬಳಿಕ ಫೈನಲ್ ನಲ್ಲಿ ಆರ್.ಕೆ.ಕಾರ್ಕಳ,ಗ್ರೌಂಡ್ ಫ್ರೆಂಡ್ಸ್ ಬೆಳ್ಮಣ್ ತಂಡವನ್ನು ಸೋಲಿಸಿತ್ತು.
ಟೂರ್ನಿಯುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ಪ್ರದರ್ಶನ ನೀಡಿದ ರಕ್ಷಿತ್ ನಂದಳಿಕೆ ಅರ್ಹವಾಗಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರೆ,ಬೆಸ್ಟ್ ಬ್ಯಾಟ್ಸ್‌ಮನ್‌ ನಿತಿನ್ ಹೆಗ್ಡೆ,ಬೆಸ್ಟ್ ಬೌಲರ್ ರವಿ ಬೈಲೂರು,ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ರಕ್ಷಿತ್ ನಂದಳಿಕೆ ಪಾಲಾಯಿತು.
ಸಮಾರೋಪ ಸಮಾರಂಭದಲ್ಲಿ ಮಾತ‌ನಾಡಿದ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ “ಶೂನ್ಯ ವಿವಾದಗಳೊಂದಿಗೆ ನಿರಾತಂಕವಾಗಿ ಶಿಸ್ತಿನಿಂದ ಪಂದ್ಯಾಟ ಮುಕ್ತಾಯ ಕಂಡಿದೆ,ಇದೇ T.C.A ಮೊದಲ ಪ್ರಯತ್ನದ ಯಶಸ್ಸಿನ ಶುಭ ಮುನ್ಸೂಚನೆ” ಎಂದು ಹರ್ಷ ವ್ಯಕ್ತಪಡಿಸಿದರು.
ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ ಟೂರ್ನಮೆಂಟ್ ನಲ್ಲಿ ಶ್ರಮಿಸಿದ ಸರ್ವ ಸದಸ್ಯರಿಗೂ ಧನ್ಯವಾದ ತಿಳಿಸಿದರು ಹಾಗೂ ಹಿರಿಯ ಆಟಗಾರರಾದ ಪ್ರವೀಣ್ ಕುಮಾರ್ ಬೈಲೂರು ಕಾರ್ಕಳ ತಾಲೂಕಿನ ಯಶಸ್ಸಿನಂತೆ ಮುಂದೆಯೂ ಕೂಡ ಎಲ್ಲಾ ತಾಲೂಕಿನಲ್ಲಿ ಮುಂದುವರಿಯಬೇಕು ಅದಕ್ಕೂ ಸರ್ವಸದಸ್ಯರ ಸಹಕಾರ ಅಗತ್ಯವೆಂದು ತಿಳಿಸಿದರು.
ಈ ಸಂದರ್ಭ ಹಿರಿಯ ಆಟಗಾರರಾದ ಯಾದವ್ ನಾಯಕ್,ಭಾಸ್ಕರ್ ಆಚಾರ್ಯ, ಚೇತನ್ ದೇವಾಡಿಗ,
ಪ್ರವೀಣ್ ಪಿತ್ರೋಡಿ,ವಿಷ್ಣುಮೂರ್ತಿ ಉರಾಳ,
M9 ಸ್ಪೋರ್ಟ್ಸ್ ನ  ಸೌಜನ್ ಮತ್ತು ಅಪ್ಪು ಪಡುಬಿದ್ರಿ ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

13 + twelve =