ಕ್ರಿಕೆಟ್ಚೆನ್ನೈ ಕಿಂಗ್ಸ್ ವಿರುದ್ಧ ಜಯ; ಫೈನಲ್ ಪ್ರವೇಶಿಸಿದ ಕರ್ನಾಟಕ ಬುಲ್ಡೋಜರ್ಸ್ –...

ಚೆನ್ನೈ ಕಿಂಗ್ಸ್ ವಿರುದ್ಧ ಜಯ; ಫೈನಲ್ ಪ್ರವೇಶಿಸಿದ ಕರ್ನಾಟಕ ಬುಲ್ಡೋಜರ್ಸ್ – ಕಪ್‌ ಮೇಲೆ ಕಣ್ಣು

-

- Advertisment -spot_img

 

ಚೆನ್ನೈ ಕಿಂಗ್ಸ್ ವಿರುದ್ಧ ಜಯ; ಫೈನಲ್ ಪ್ರವೇಶಿಸಿದ ಕರ್ನಾಟಕ ಬುಲ್ಡೋಜರ್ಸ್ – ಕಪ್‌ ಮೇಲೆ ಕಣ್ಣು

ಕನ್ನಡ ಚಿತ್ರರಂಗದ ಕ್ರಿಕೆಟ್ ತಂಡವಾದ ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ಕಿಂಗ್ಸ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸಿಸಿಎಲ್–2026 ಫೈನಲ್‌ಗೆ ಪ್ರವೇಶಿಸಿದೆ. ಕಿಚ್ಚ ಸುದೀಪ್ ಅವರ ನಾಯಕತ್ವದ ತಂಡವು ಈ ಬಾರಿ ಯಾವುದೇ ಪಂದ್ಯದಲ್ಲೂ ಸೋಲಿಲ್ಲದೇ ಫೈನಲ್ ತಲುಪಿರುವುದು ವಿಶೇಷವಾಗಿದೆ.

 ಕರ್ನಾಟಕ ಬುಲ್ಡೋಜರ್ಸ್, ಈ ಬಾರಿ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ನೇರವಾಗಿ ಸೆಮಿಫೈನಲ್ ಪ್ರವೇಶಿಸಿತ್ತು. ಚೆನ್ನೈನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಎದುರಾಳಿ ತಂಡವನ್ನು ಮಣಿಸುವ ಮೂಲಕ ಪ್ರಶಸ್ತಿಗೆ ಇನ್ನೊಂದು ಹೆಜ್ಜೆ ಮುನ್ನಡೆಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಚೆನ್ನೈ ಕಿಂಗ್ಸ್ ತಂಡವು 20 ಓವರ್‌ಗಳಲ್ಲಿ 160 ರನ್ ಗಳಿಸಿತು. ಬಳಿಕ ಬ್ಯಾಟಿಂಗ್‌ಗೆ ಇಳಿದ ಕರ್ನಾಟಕ ಬುಲ್ಡೋಜರ್ಸ್ ತಂಡವು 161 ರನ್ ಗಳಿಸಿ ಗೆಲುವು ಸಾಧಿಸಿತು. 

ಲಕ್ಷ್ಯವನ್ನು ಬೆನ್ನತ್ತಿದ ಕರ್ನಾಟಕ ತಂಡವು ಕೇವಲ 19.5 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ  ಜಯ ಸಾಧಿಸಿತು. ಈ ಸಾಧನೆಯೊಂದಿಗೆ ತಂಡವು ದಾಖಲೆಗೂ ಸಹಿ ಹಾಕಿದೆ.

ಸೆಮಿಫೈನಲ್ ಜಯವನ್ನು ಕಿಚ್ಚ ಸುದೀಪ್ ಅವರಿಗಾಗಿ ವಿಶೇಷ ಉಡುಗೊರೆಯಾಗಿ ನೀಡಬೇಕೆಂಬ ಆಟಗಾರರ ಆಶಯ ಇದೀಗ ನನಸಾಗಿದೆ. ಇದೀಗ ಫೈನಲ್ ಪಂದ್ಯದಲ್ಲಿ ಕಪ್ ಗೆಲ್ಲುವ ಉತ್ಸಾಹ ಮತ್ತು ಆತ್ಮವಿಶ್ವಾಸದೊಂದಿಗೆ ಕರ್ನಾಟಕ ಬುಲ್ಡೋಜರ್ಸ್ ತಂಡ ಕಣಕ್ಕಿಳಿಯಲಿದೆ.

LEAVE A REPLY

Please enter your comment!
Please enter your name here

two + 7 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you