ಕ್ರಿಕೆಟ್ಕೌಶಿಕ್ ಬೆಂಕಿ ಬೌಲಿಂಗ್‌ಗೆ ಉದುರಿ ಹೋದ ಉತ್ತರ ಪ್ರದೇಶ!

ಕೌಶಿಕ್ ಬೆಂಕಿ ಬೌಲಿಂಗ್‌ಗೆ ಉದುರಿ ಹೋದ ಉತ್ತರ ಪ್ರದೇಶ!

-

- Advertisment -spot_img

ಕೌಶಿಕ್ ಬೆಂಕಿ ಬೌಲಿಂಗ್‌ಗೆ ಉದುರಿ ಹೋದ ಉತ್ತರ ಪ್ರದೇಶ!

ಉತ್ತರ ಪ್ರದೇಶ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಆರಂಭಗೊಂಡ ರಣಜಿ ಟ್ರೋಫಿ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಮೊದಲ ದಿನವೇ ಮೇಲುಗೈ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಉತ್ತರ ಪ್ರದೇಶ, ಕರ್ನಾಟಕ ಅನುಭವಿ ಬಲಗೈ ವೇಗದ ಬೌಲರ್ ವಾಸುಕಿ ಕೌಶಿಕ್ ದಾಳಿಗೆ ತತ್ತರಿಸಿತು. ಆತಿಥೇಯರ ಮೇಲೆ ಮಾರಕವಾಗಿ ಎರಗಿದ ಕೌಶಿಕ್ 16 ಓವರ್’ಗಳಲ್ಲಿ ಕೇವಲ 20 ರನ್ನಿತ್ತು 5 ವಿಕೆಟ್ ಕಬಳಿಸಿದರು. ಬಂಗಾಳ ವಿರುದ್ಧ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಪ್ರಥಮ ಇನ್ನಿಂಗ್ಸ್’ನಲ್ಲೂ ಕೌಶಿಕ್ ಐದು ವಿಕೆಟ್ ಪಡೆದಿದ್ದರು.

ವಿ.ಕೌಶಿಕ್ ಅವರ ಮಾರಕ ದಾಳಿಗೆ ತತ್ತರಿಸಿದ ಉತ್ತರ ಪ್ರದೇಶ ತಂಡ, ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ ಕೇವಲ 89 ರನ್ನಿಗೆ ಆಲೌಟಾಯಿತು. ಕರ್ನಾಟಕ ಪರ ಕೌಶಿಕ್’ಗೆ ಉತ್ತಮವಾಗಿ ಸಾಥ್ ಕೊಟ್ಟ ಯುವ ಬಲಗೈ ವೇಗದ ಬೌಲರ್ ವಿದ್ಯಾಧರ ಪಾಟೀಲ್ 22 ರನ್ನಿಗೆ 2 ವಿಕೆಟ್ ಪಡೆದರೆ, ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ ಯುವ ಆಲ್ರೌಂಡರ್ ಯಶೋವರ್ಧನ್ ಪರಂತಪ್ 1 ವಿಕೆಟ್ ಹಾಗೂ ಯುವ ಆಫ್’ಸ್ಪಿನ್ನರ್ ಮೊಹ್ಸಿನ್ ಖಾನ್ ಒಂದು ವಿಕೆಟ್ ಕಬಳಿಸಿದರು.

ನಂತರ ತನ್ನ ಪ್ರಥಮ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಪ್ರಥಮ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿ, 38 ರನ್’ಗಳ ಮುನ್ನಡೆ ಸಾಧಿಸಿದೆ. ಕರ್ನಾಟಕ ಪರ ಆರಂಭಿಕ ಆಟಗಾರ ನಿಕಿನ್ ಜೋಸ್ ಮತ್ತು ಸ್ಮರಣ್ ಆರ್. ಶೂನ್ಯಕ್ಕೆ ಔಟಾದರೆ, ನಾಯಕ ಮಯಾಂಕ್ ಅಗರ್ವಾಲ್ 30, ಮಾಜಿ ನಾಯಕ ಮನೀಶ್ ಪಾಂಡೆ 6 ಹಾಗೂ ಅಭಿನವ್ ಮನೋಹರ್ 6 ರನ್ನಿಗೆ ವಿಕೆಟ್ ಒಪ್ಪಿಸಿದ್ದಾರೆ. ಆರಂಭಿಕ ಆಘಾತ ಎದುರಿಸಿದ ಕರ್ನಾಟಕ ತಂಡಕ್ಕೆ ಪದಾರ್ಪಣೆಯ ರಣಜಿ ಪಂದ್ಯದಲ್ಲಿ ಮಿಂಚಿದ ವಿಕೆಟ್ ಕೀಪರ್ ಕೃಷ್ಣನ್ ಶ್ರೀಜಿತ್ ಅಜೇಯ ಅರ್ಧಶತಕದೊಂದಿಗೆ ಆಸರೆಯಾದರು. ಶ್ರೀಜಿತ್ ಅಜೇಯ 68 ಹಾಗೂ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಅಜೇಯ 14 ರನ್’ಗಳೊಂದಿಗೆ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

15 − 8 =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you