Action Replayಕೇರಳ ಮರ್ಚೆಂಟ್ ಚೇಂಬರ್ಸ್ ಕಪ್-2019ನ್ನು ಕಣ್ಣೂರಿನ ಕೆ.ಪಿ.ಎ-123 ತಂಡ ಜಯಿಸಿದೆ

ಕೇರಳ ಮರ್ಚೆಂಟ್ ಚೇಂಬರ್ಸ್ ಕಪ್-2019ನ್ನು ಕಣ್ಣೂರಿನ ಕೆ.ಪಿ.ಎ-123 ತಂಡ ಜಯಿಸಿದೆ

-

- Advertisment -spot_img

ಕಳೆದ ರವಿವಾರ ಕೇರಳದಲ್ಲಿ ನಡೆದ 19 ನೇ ಆಲ್ ಇಂಡಿಯಾ ಹಗಲು ರಾತ್ರಿಯ ಒಳಾಂಗಣ ಪಂದ್ಯಾಕೂಟ ಆಯೋಜಿಸಲಾಗಿತ್ತು.ಈ ಪಂದ್ಯಾಕೂಟದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಒಟ್ಟು 46 ತಂಡಗಳು ಭಾಗವಹಿಸಿದ್ದವು.

ಮುಂಬಯಿ ರಣಜಿ ಆಟಗಾರರಾದ ಅಂಕುರ್ ಸಿಂಗ್,ಟೆನ್ನಿಸ್ ಬಾಲ್ ನ ಪ್ರಸಿದ್ಧ ಆಟಗಾರ ಕೃಷ್ಣ ಸಾತ್ಪುತೆ,ವಿಜಯ್ ಪಾವ್ಲೆ ಇನ್ನಿತರ ಆಟಗಾರರು, ಕರ್ನಾಟಕ ರಾಜ್ಯದ ಪ್ರಸಿಧ್ಧ ತಂಡಗಳಿಂದ ಶ್ರೇಷ್ಠ ಆಲ್ ರೌಂಡರ್ ಗಳಾದ ನ್ಯಾಶ್ ಪುರುಷಿ,ಪ್ರಖ್ಯಾತ್,ಮೈಟಿಯ ಈಲು,ಸ್ಯಾಂಡಿ,ಜೈ ಕರ್ನಾಟಕದ ಮಾರ್ಕ್ ಮಹೇಶ್ ಹಾಗೂ ಎಸ್.ಝಡ್.ಸಿ.ಸಿ ಯಿಂದ ಅರುಣ್ ಆರ್ಯನ್ ಪ್ರಸಿದ್ಧ ತಂಡಗಳನ್ನು ಪ್ರತಿನಿಧಿಸಿದ್ದರು.

ಫೈನಲ್ ನಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಅಟ್ಲಾಸ್ ಯು.ಟಿ.ಸಿ ತಂಡ 7 ಓವರ್ ಗಳಲ್ಲಿ 78 ರನ್ ನ ಬೃಹತ್ ಮೊತ್ತವನ್ನು ಪೇರಿಸಿತ್ತು.ಪ್ರತಿಯಾಗಿ ಬಲಿಷ್ಠ ಬ್ಯಾಟಿಂಗ್ ಪಡೆಯ ಕೆ.ಪಿ.ಎ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು 4 ಓವರ್ ಗಳಲ್ಲಿ ಗುರಿ ತಲುಪಿತ್ತು.

ವಿಜಯಿ ತಂಡ 4 ಲಕ್ಷ ನಗದು ಹಾಗೂ ಆಕರ್ಷಕ‌ ಟ್ರೋಫಿ ಹಾಗೂ ರನ್ನರ್ಸ್ ತಂಡ 2 ಲಕ್ಷ ಹಾಗೂ ಆಕರ್ಷಕ ಟ್ರೋಫಿ ಪಡೆಯಿತು.

ಫೈನಲ್ ಪಂದ್ಯದಲ್ಲಿ ಎದುರಾಳಿಗಳ 5 ವಿಕೆಟ್ ಉರುಳಿಸಿದ ಕೆ.ಪಿ.ಎ ತಂಡದ ಜಿತಿನ್ ಗೆ ಪಂದ್ಯಶ್ರೇಷ್ಟ ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿ ಒಲಿದರೆ,ಬೆಸ್ಟ್ ಬ್ಯಾಟ್ಸ್‌ಮನ್ ಕೃಷ್ಣ ಪಾಲಾದರೆ,ಸರಣಿ ಶ್ರೇಷ್ಠ ಪ್ರಶಸ್ತಿಗೆ ಅರ್ಹವಾಗಿ ಕೆ.ಪಿ.ಎ ತಂಡದ ಮೊಹಮ್ಮದ್ ಆಯ್ಕೆಯಾದರು.

ಇಂಡೋರ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ನ್ಯಾಶ್ ಪುರುಷಿ 6 ಬಾರಿ ಭಾಗವಹಿಸಿದ್ದು,ಅದೇ ತಂಡದ ಪ್ರಖ್ಯಾತ್ 4 ನೇ ಬಾರಿ ಭಾಗವಹಿಸಿದ್ದು ಸತತ ಗಮನಾರ್ಹ ನಿರ್ವಹಣೆ ನೀಡಿರುತ್ತಾರೆ.

– ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten + 16 =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...
- Advertisement -spot_imgspot_img

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

Must read

- Advertisement -spot_imgspot_img

You might also likeRELATED
Recommended to you