ಕ್ರಿಕೆಟ್ಒಂದೂವರೆ ದಶಕಗಳ ಕಾಲ ಕ್ರಿಕೆಟ್ ನಲ್ಲಿ ಕಿಂಗ್ ಕೊಹ್ಲಿಯ ಪ್ರಾಬಲ್ಯ...!

ಒಂದೂವರೆ ದಶಕಗಳ ಕಾಲ ಕ್ರಿಕೆಟ್ ನಲ್ಲಿ ಕಿಂಗ್ ಕೊಹ್ಲಿಯ ಪ್ರಾಬಲ್ಯ…!

-

- Advertisment -spot_img
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 15 ವರ್ಷಗಳ ಹಿಂದೆ ಇದೇ ದಿನ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
ಶ್ರೀಲಂಕಾ ವಿರುದ್ಧ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಬ್ಲೂ ಜೆರ್ಸಿ ಧರಿಸಿ ಭಾರತ ಪರ ಏಕದಿನ ಪಂದ್ಯ ಆಡಿದ್ದರು. ಕಳೆದ 15 ದಶಕಗಳಲ್ಲಿ ವಿರಾಟ್ ಕೊಹ್ಲಿ ಭಾರತ ಪರ ಹಲವು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು.
ವಿರಾಟ್ ಕೊಹ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ  ಭಾರತ 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ತಲುಪಿತು. ಇದಾದ ಬಳಿಕ 2019ರ ತಂಡ ಸೆಮಿಫೈನಲ್‌ವರೆಗೆ ಪ್ರಯಾಣಿಸಿತ್ತು. ಇವರ  ನಾಯಕತ್ವದಲ್ಲಿ ಭಾರತ ತಂಡ ಸುದೀರ್ಘ ಕಾಲ ತನ್ನ ಪ್ರಾಬಲ್ಯವನ್ನು ಹೊಂದಿದೆ.
2008 ರಲ್ಲಿ ಈ ದಿನದಂದು ತಮ್ಮ ಅಂತರಾಷ್ಟ್ರೀಯ ಚೊಚ್ಚಲ ಪ್ರವೇಶ ಮಾಡಿದ ಕೊಹ್ಲಿ 2008  ಆಗಸ್ಟ್ 18 ರಿಂದ,ಟೆಸ್ಟ್, ಏಕದಿನ ಮತ್ತು ಟಿ20 ಸೇರಿದಂತೆ  ಇದುವರೆಗೆ ಒಟ್ಟು 501 ಪಂದ್ಯಗಳನ್ನು ಭಾರತಕ್ಕಾಗಿ ಆಡಿ ಅವರ ಬ್ಯಾಟ್‌ನಿಂದ 76 ಶತಕಗಳು ಕೂಡ ಬಂದಿವೆ. ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ದಾಖಲೆಯಿಂದ ಅವರು ಕೇವಲ 24 ಶತಕಗಳ ದೂರದಲ್ಲಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಕೊಹ್ಲಿ ಬ್ಯಾಟ್ ಮೌನವಾಗಿದೆ. ಇದೇ  ಸೆಪ್ಟೆಂಬರ್‌ನಲ್ಲಿ ನಡೆಯುವ ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿಯವರ ಬ್ಯಾಟ್‌ನಿಂದ ರನ್‌ಗಳ ನಿರೀಕ್ಷೆ ಇದೆ.
ಅಂತರಾಷ್ಟ್ರೀಯ ಕ್ರಿಕೆಟ್ ಯಾನಕ್ಕೆ ಒಂದೂವರೆ ದಶಕ ಅರ್ಥಪೂರ್ಣವಾಗಿ ಪೂರೈಸಿದ ರನ್ ಮಷೀನ್ ವಿರಾಟ್‌ಗೆ ಅಭಿನಂದನೆಗಳು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

six + six =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you