ಕ್ರಿಕೆಟ್ಟೀಕಾಕಾರರಿಗೆ ಆಟದಿಂದಲೇ ಉತ್ತರ ಕೊಟ್ಟ ರಾಹುಲ್!

ಟೀಕಾಕಾರರಿಗೆ ಆಟದಿಂದಲೇ ಉತ್ತರ ಕೊಟ್ಟ ರಾಹುಲ್!

-

- Advertisment -spot_img

“ಆತ ಭಾರತ ಪರ ಆಡಲು ಲಾಯಕ್ಕಿಲ್ಲ, ಆತ ಅನ್ ಫಿಟ್.. ಆತನಿಗೆ ಆಟವೇ ಗೊತ್ತಿಲ್ಲ..”. ಕೆ.ಎಲ್ ರಾಹುಲ್ ವಿರುದ್ಧ ಕೇಳಿ ಬಂದ ಟೀಕೆಗಳು ಒಂದಾ, ಎರಡಾ..? ಹೊರಗಿನವರು ಬೇಡ, ನಮ್ಮವರೇ ನಮಗೆ ಶತ್ರುಗಳು ಎಂಬಂತೆ, ನಮ್ಮವರಲ್ಲೇ ಕೆಲವರು ನಮ್ಮ ಹುಡುಗನ ಬಗ್ಗೆ ಕೊಂಕು ಮಾತಾಡಿದ್ದರು.

ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ರಾಹುಲ್ ಆಟದಿಂದಲೇ ಉತ್ತರಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಕೇವಲ 43 ಎಸೆತಗಳಲ್ಲಿ ಸಿಡಿಲಬ್ಬರದ 68 ರನ್ ಬಾರಿಸಿ ಅಬ್ಬರಿಸಿದ್ದಾರೆ. ಈ ಸ್ಫೋಟಕ ಇನ್ನಿಂಗ್ಸ್’ನಲ್ಲಿ 7 ಬೌಂಡರಿಗಳು ಹಾಗೂ 2 ಸಿಕ್ಸರ್’ಗಳು ಇದ್ದವು.

ಚೆನ್ನೈನಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್’ನಲ್ಲಿ ರಾಹುಲ್ ಕೇವಲ 16 ರನ್ ಗಳಿಸಿ ಔಟಾಗಿದ್ದರು. ದ್ವಿತೀಯ ಇನ್ನಿಂಗ್ಸ್’ನಲ್ಲಿ 22 ರನ್ ಗಳಿಸಿ ಆಡುತ್ತಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಲಾಗಿತ್ತು. ಇದರ ಬೆನ್ನಲ್ಲೇ ರಾಹುಲ್ ವಿರುದ್ಧ ಟೀಕಾಸ್ತ್ರಗಳು ನುಗ್ಗಿ ಬಂದಿದ್ದವು. ರಾಹುಲ್ ಬದಲು ಮುಂಬೈನ ಸರ್ಫರಾಜ್ ಖಾನ್ ಅವರನ್ನು ಪ್ಲೇಯಿಂಗ್ ಇಲೆವೆನ್’ನಲ್ಲಿ ಆಡಿಸಬೇಕೆಂಬ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದವು.

ಆದರೆ ಎಲ್ಲದಕ್ಕೂ ರಾಹುಲ್ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಉತ್ತರ ಕೊಟ್ಟಿದ್ದಾರೆ. ಅಬ್ಬರದ ಆಟವಾಡುವ ಮೂಲಕ ತನ್ನ ಆಟವಿನ್ನೂ ಮುಗಿದಿಲ್ಲ ಎಂಬುದನ್ನು ರಾಹುಲ್ ತೋರಿಸಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ತಮ್ಮ ವಿರುದ್ಧ ಟೀಕೆ ಮಾಡಿದವರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಪ್ರಥಮ ಇನ್ನಿಂಗ್ಸ್’ನಲ್ಲಿ 233 ರನ್’ಗಳಿಗೆ ಆಲೌಟಾದರೆ, ಭಾರತ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ ಕೇವಲ 34.4 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 285 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. 2ನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ 4ನೇ ದಿನದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 26 ರನ್ ಗಳಿಸಿದೆ.

LEAVE A REPLY

Please enter your comment!
Please enter your name here

seventeen + two =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you