ಕ್ರಿಕೆಟ್ಕೆ.ಎಲ್ ರಾಹುಲ್‌ಗೆ ಕ್ರಿಕೆಟ್ ಪಾಠವನ್ನಷ್ಟೇ ಅಲ್ಲ, ಬದುಕಿನ ಮೌಲ್ಯವನ್ನು ಕಲಿಸಿದ ಗುರು...

ಕೆ.ಎಲ್ ರಾಹುಲ್‌ಗೆ ಕ್ರಿಕೆಟ್ ಪಾಠವನ್ನಷ್ಟೇ ಅಲ್ಲ, ಬದುಕಿನ ಮೌಲ್ಯವನ್ನು ಕಲಿಸಿದ ಗುರು ಜಯರಾಜ್!

-

- Advertisment -spot_img

ಇವತ್ತು ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸುವ ದಿನ, ಶಿಕ್ಷಕರ ದಿನಾಚರಣೆ. ಪ್ರತಿಯೊಬ್ಬರ ಬದುಕಲ್ಲೂ ಒಬ್ಬೊಬ್ಬ ಗುರು ಇದ್ದೇ ಇರುತ್ತಾನೆ.

ಕ್ರಿಕೆಟಿಗ ಕೆ.ಎಲ್ ರಾಹುಲ್ ಅವರಿಗೆ ಕ್ರಿಕೆಟ್ ಪಾಠಗಳನ್ನು ಹೇಳಿ ಕೊಟ್ಟ ಗುರು ಮಂಗಳೂರಿನ ಖ್ಯಾತ ಕ್ರಿಕೆಟ್ ಕೋಚ್ ಸ್ಯಾಮುಯೆಲ್ ಜಯರಾಜ್.

ಮಂಗಳೂರಿನಲ್ಲಿ ಹುಟ್ಟಿದ ಕೆ.ಎಲ್ ರಾಹುಲ್ ಭಾರತದ ಸ್ಟಾರ್ ಕ್ರಿಕೆಟಿಗನಾಗಿ ಬೆಳೆದು ನಿಂತಿದ್ದಾರೆ ಎಂದರೆ ಅದಕ್ಕೆ ಕಾರಣ ಗುರು ಸ್ಯಾಮುಯೆಲ್ ಜಯರಾಜ್ ಅವರು ಹೇಳಿಕೊಟ್ಟ ಪಾಠ.

ಕೆ.ಎಲ್ ರಾಹುಲ್ ಒಳ್ಳೆಯ ಕ್ರಿಕೆಟಿನಷ್ಟೇ ಅಲ್ಲ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಹೌದು. ರಾಹುಲ್ ಸಭ್ಯ ಹಾಗೂ ಸಂಭಾವಿತ ಕ್ರಿಕೆಟಿಗ.

ಜಯರಾಜ್ ಅವರು ರಾಹುಲ್’ಗೆ ಕ್ರಿಕೆಟ್ ಪಾಠಗಳನ್ನಷ್ಟೇ ಹೇಳಿ ಕೊಟ್ಟಿಲ್ಲ. ಕ್ರಿಕೆಟ್ ಜೊತೆಗೆ ಜೀವನದ ಪಾಠ, ಜೀವನದ ಮೌಲ್ಯಗಳನ್ನೂ ಹೇಳಿ ಕೊಟ್ಟಿದ್ದಾರೆ.

ಮಂಗಳೂರಿನಲ್ಲಿ ಕ್ರಿಕೆಟ್ ಕೋಚಿಂಗ್ ನೀಡುತ್ತಿದ್ದ ಸ್ಯಾಮುಯೆಲ್ ಜಯರಾಜ್ ಅವರ ಬಳಿ ಕೆ.ಎಲ್ ರಾಹುಲ್ ಮೊದಲ ಬಾರಿ ಬಂದಾಗ ರಾಹುಲ್ ವಯಸ್ಸು ಕೇವಲ 10. ಅಲ್ಲಿಂದ ರಾಹುಲ್’ಗೆ ಕ್ರಿಕೆಟ್ ಪಾಠಗಳನ್ನು ಜಯರಾಜ್ ಹೇಳಿ ಕೊಟ್ಟರು.

ಮಂಗಳೂರಿನ ಹೊರವಲಯದ ಸುರತ್ಕಲ್’ನಿಂದ ನೆಹರೂ ಮೈದಾನಕ್ಕೆ ಪ್ರತೀ ದಿನ ಬಸ್’ನಲ್ಲಿ ಬರುತ್ತಿದ್ದ ರಾಹುಲ್, ಜಯರಾಜ್ ಅವರ ಬಳಿ ಕ್ರಿಕೆಟ್ ಪಟ್ಟುಗಳನ್ನು ಕಲಿತರು. ಕೇವಲ 12ನೇ ವಯಸ್ಸಿನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡು ದ್ವಿಶತಕಗಳನ್ನು ಬಾರಿಸಿದ್ದ ರಾಹುಲ್, ಒಂದೊಂದೇ ಹೆಜ್ಜೆಗಳನ್ನಿಡುತ್ತಾ ಬಂದರು. ಕರ್ನಾಟಕ ಅಂಡರ್-13 ತಂಡಕ್ಕೆ ಆಯ್ಕೆಯಾದ ರಾಹುಲ್ ನಂತರ ಅಂಡರ್-16, ಅಂಡರ್-19 ತಂಡಗಳಿಗೆ ಆಯ್ಕೆಯಾಗಿದ್ದಷ್ಟೇ ಅಲ್ಲ, ರಾಜ್ಯ ಕಿರಿಯರ ತಂಡಗಳ ನಾಯಕತ್ವವನ್ನೂ ವಹಿಸಿಕೊಂಡಿದ್ದರು.

2010ರಲ್ಲಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ ಭಾರತ ತಂಡದ ಪರ ಮಯಾಂಕ್ ಅಗರ್ವಾಲ್ ಜೊತೆ ರಾಹುಲ್ ಇನ್ನಿಂಗ್ಸ್ ಆರಂಭಿಸಿದ್ದರು. ಅದೇ ವರ್ಷ ರಣಜಿ ಟ್ರೋಫಿಗೂ ಪದಾರ್ಪಣೆ ಮಾಡಿದ ರಾಹುಲ್, 2013-14ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಸಾವಿರ ರನ್’ಗಳ ಸರದಾರನಾಗಿ ಕರ್ನಾಟಕ ತಂಡ 14 ವರ್ಷಗಳ ನಂತರ ರಣಜಿ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 2014ರ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ವಲಯ ಪರ ಒಂದೇ ಪಂದ್ಯದಲ್ಲಿ ಎರಡು ಶತಕಗಳನ್ನು ಸಿಡಿಸಿದ ರಾಹುಲ್, ಅದೇ ವರ್ಷ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾದರು. 2014ರ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಅಂತರಾಷ್ಟ್ರೀಯ ಶತಕ ಬಾರಿಸಿದರು.

ಅಲ್ಲಿಂದ ಇಲ್ಲಿಯವರೆಗೆ ಕೆ.ಎಲ್ ರಾಹುಲ್ 50 ಟೆಸ್ಟ್, 77 ಏಕದಿನ ಹಾಗೂ 72 ಟಿ20 ಪಂದ್ಯಗಳು ಸೇರಿದಂತೆ ಭಾರತ ಪರ ಒಟ್ಟು 199 ಪಂದ್ಯಗಳನ್ನಾಡಿದ್ದಾರೆ. ಆ 199 ಪಂದ್ಯಗಳಿಂದ ರಾಹುಲ್ ಗಳಿಸಿರುವ ಒಟ್ಟು ರನ್ 8,565. ಈ ವೇಳೆ ರಾಹುಲ್ 17 ಶತಕಗಳು ಹಾಗೂ 54 ಅರ್ಧಶತಕಗಳನ್ನು ಬಾರಿಸಿದ್ದಾರೆ. ಐಪಿಎಲ್’ನಲ್ಲಿ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ.

ರಾಹುಲ್ ಇವತ್ತು ಏನೇ ಆಗಿದ್ದರೂ ಅದಕ್ಕೆ ಕಾರಣ ಅವರ ಪಾಲಿನ ದ್ರೋಣಾಚಾರ್ಯ ಸ್ಯಾಮುಯೆಲ್ ಜಯರಾಜ್.

LEAVE A REPLY

Please enter your comment!
Please enter your name here

thirteen + 12 =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you