ಕ್ರಿಕೆಟ್ವೈ.ಎಸ್‌.ಸಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಯನ್ನು ಭರ್ಜರಿಯಾಗಿ ಜಯಿಸಿದ ಕೋಲಾರ ಅಟ್ಯಾಕರ್ಸ್

ವೈ.ಎಸ್‌.ಸಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಯನ್ನು ಭರ್ಜರಿಯಾಗಿ ಜಯಿಸಿದ ಕೋಲಾರ ಅಟ್ಯಾಕರ್ಸ್

-

- Advertisment -spot_img
ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ಜರುಗಿದ್ದ ವೈ.ಎಸ್.ಸಿ ಚಾಂಪಿಯನ್ಸ್ ಲೀಗ್ ಸೀಸನ್ 2
ಫೈನಲ್ ನಲ್ಲಿ ಕೋಲಾರ ಅಟ್ಯಾಕರ್ಸ್ ತಂಡ,ಎಸ್‌.ಕೆ.ಎಸ್ ಕಿಸಾನ್ ಇಲೆವೆನ್ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ.
ಕೋಲಾರ ಜಿಲ್ಲೆಯ 12 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ರೋಚಕ ಕದನಗಳ ಬಳಿಕ ಅಂತಿಮವಾಗಿ ಬಲಿಷ್ಠ ಕೋಲಾರ ಅಟ್ಯಾಕರ್ಸ್, ಎಮ್.ಎಸ್.ಎ ತಂಡವನ್ನು ಹಾಗೂ ಕಿಸಾನ್ ಇಲೆವೆನ್,ಸೈ ಬಾಯ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿತ್ತು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಅಟ್ಯಾಕರ್ಸ್ ತಂಡ ಮುರಳಿ,ಕಿರಣ್,ಶಿವು,ಭರತ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿತ್ತು.ಕಠಿಣ ಗುರಿಯನ್ನು ಬೆಂಬತ್ತಿದ ಎಸ್.ಕೆ.ಎಸ್ ಕಿಸಾನ್ ಇಲೆವೆನ್ ತಂಡ ಕೊನೆಯ ಹಂತದ
ತೀವ್ರ ಹೋರಾಟದ ಬಳಿಕವೂ 4 ವಿಕೆಟ್ ನಷ್ಟಕ್ಕೆ 59 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಜಯೀ ಅಟ್ಯಾಕರ್ಸ್ ತಂಡ ಪ್ರಥಮ ಪ್ರಶಸ್ತಿ ರೂಪದಲ್ಲಿ 1.5 ಲಕ್ಷ ನಗದು,ರನ್ನರ್ ಅಪ್ ಕಿಸಾನ್ ಇಲೆವೆನ್ 75 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಕಿರಣ್,ಬೆಸ್ಟ್ ಬೌಲರ್ ಪ್ರಶಸ್ತಿ ಪಿ‌.ಆರ್.ಡಬ್ಲ್ಯೂ ತಂಡದ ರಾಮ್ ಪಾಲಾದರೆ,ಟೂರ್ನಿಯುದ್ದಕ್ಕೂ ಬ್ಯಾಟಿಂಗ್,ಬೌಲಿಂಗ್ ವಿಭಾಗದಲ್ಲಿ ಮೇಲುಗೈ ಸಾಧಿಸಿ ಪ್ರೇಕ್ಷಕರನ್ನು ರಂಜಿಸಿದ ಮುರಳಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ
ತಜ್ಜು ಭಾಯ್,ಮುಜ್ಜು ಭಾಯ್,
ಎಸ್.ಕೆ.ಎಸ್ ನ ಸೈಯ್ಯದ್ವುಲ್ಲಾ ಖಾನ್,ಎಸ್.ಡಿ.ಪಿ.ಐ ಕೋಲಾರ ಜಿಲ್ಲಾಧ್ಯಕ್ಷ ಶಾಮೀರ್ ಪಾಷಾ,ಬ್ರೈಟ್ ಸ್ಟಾರ್ ಇಂಟರ್ನ್ಯಾಷನಲ್ ಸ್ಕೂಲ್ ನ ಸಿ.ಇ.ಒ ಆಸೀಫುದ್ದೀನ್ ಖಾನ್,ಕೆ.ಜಿ.ಎನ್ ಟಿಂಬರ್ಸ್ ನ ಖಾಜಾ ಭಾಯ್,ಸಿ.ಎಮ್‌.ಸಿ ಸದಸ್ಯ ಸೈಯದ್ ಸಮೀವುಲ್ಲಾ,ಎ.ಎಸ್.ಎಮ್ ವೆಜಿಟೇಬಲ್ಸ್ ನ ಅಸ್ಲಾಮ್,ಟೂರ್ನಮೆಂಟ್ ನ ಆಯೋಜಕರಾದ ನಿಜಾಮ್,ನಿರಂಜನ್ ಹಾಗು ವೈ.ಎಸ್‌.ಸಿ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.ಅಟ್ಯಾಕರ್ಸ್ ತಂಡದ ನಾಯಕ ಎಲ್.ನಿರಂಜನ್ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟಂತಹ ವೈ.ಎಸ್.ಸಿ ತಂಡದ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು.
ಪಂದ್ಯಾವಳಿಯ ನೇರ ಪ್ರಸಾರವನ್ನು ಯಾಸೀನ್ ನೇತೃತ್ವದ Y.Sports ಯೂ ಟ್ಯೂಬ್ ಚಾನೆಲ್ ಬಿತ್ತರಿಸಿತ್ತು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − eleven =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you