12.6 C
London
Saturday, May 18, 2024
Homeಕ್ರಿಕೆಟ್ವೈ.ಎಸ್‌.ಸಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಯನ್ನು ಭರ್ಜರಿಯಾಗಿ ಜಯಿಸಿದ ಕೋಲಾರ ಅಟ್ಯಾಕರ್ಸ್

ವೈ.ಎಸ್‌.ಸಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಯನ್ನು ಭರ್ಜರಿಯಾಗಿ ಜಯಿಸಿದ ಕೋಲಾರ ಅಟ್ಯಾಕರ್ಸ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ಜರುಗಿದ್ದ ವೈ.ಎಸ್.ಸಿ ಚಾಂಪಿಯನ್ಸ್ ಲೀಗ್ ಸೀಸನ್ 2
ಫೈನಲ್ ನಲ್ಲಿ ಕೋಲಾರ ಅಟ್ಯಾಕರ್ಸ್ ತಂಡ,ಎಸ್‌.ಕೆ.ಎಸ್ ಕಿಸಾನ್ ಇಲೆವೆನ್ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ.
ಕೋಲಾರ ಜಿಲ್ಲೆಯ 12 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ರೋಚಕ ಕದನಗಳ ಬಳಿಕ ಅಂತಿಮವಾಗಿ ಬಲಿಷ್ಠ ಕೋಲಾರ ಅಟ್ಯಾಕರ್ಸ್, ಎಮ್.ಎಸ್.ಎ ತಂಡವನ್ನು ಹಾಗೂ ಕಿಸಾನ್ ಇಲೆವೆನ್,ಸೈ ಬಾಯ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿತ್ತು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಅಟ್ಯಾಕರ್ಸ್ ತಂಡ ಮುರಳಿ,ಕಿರಣ್,ಶಿವು,ಭರತ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿತ್ತು.ಕಠಿಣ ಗುರಿಯನ್ನು ಬೆಂಬತ್ತಿದ ಎಸ್.ಕೆ.ಎಸ್ ಕಿಸಾನ್ ಇಲೆವೆನ್ ತಂಡ ಕೊನೆಯ ಹಂತದ
ತೀವ್ರ ಹೋರಾಟದ ಬಳಿಕವೂ 4 ವಿಕೆಟ್ ನಷ್ಟಕ್ಕೆ 59 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಜಯೀ ಅಟ್ಯಾಕರ್ಸ್ ತಂಡ ಪ್ರಥಮ ಪ್ರಶಸ್ತಿ ರೂಪದಲ್ಲಿ 1.5 ಲಕ್ಷ ನಗದು,ರನ್ನರ್ ಅಪ್ ಕಿಸಾನ್ ಇಲೆವೆನ್ 75 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಕಿರಣ್,ಬೆಸ್ಟ್ ಬೌಲರ್ ಪ್ರಶಸ್ತಿ ಪಿ‌.ಆರ್.ಡಬ್ಲ್ಯೂ ತಂಡದ ರಾಮ್ ಪಾಲಾದರೆ,ಟೂರ್ನಿಯುದ್ದಕ್ಕೂ ಬ್ಯಾಟಿಂಗ್,ಬೌಲಿಂಗ್ ವಿಭಾಗದಲ್ಲಿ ಮೇಲುಗೈ ಸಾಧಿಸಿ ಪ್ರೇಕ್ಷಕರನ್ನು ರಂಜಿಸಿದ ಮುರಳಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ
ತಜ್ಜು ಭಾಯ್,ಮುಜ್ಜು ಭಾಯ್,
ಎಸ್.ಕೆ.ಎಸ್ ನ ಸೈಯ್ಯದ್ವುಲ್ಲಾ ಖಾನ್,ಎಸ್.ಡಿ.ಪಿ.ಐ ಕೋಲಾರ ಜಿಲ್ಲಾಧ್ಯಕ್ಷ ಶಾಮೀರ್ ಪಾಷಾ,ಬ್ರೈಟ್ ಸ್ಟಾರ್ ಇಂಟರ್ನ್ಯಾಷನಲ್ ಸ್ಕೂಲ್ ನ ಸಿ.ಇ.ಒ ಆಸೀಫುದ್ದೀನ್ ಖಾನ್,ಕೆ.ಜಿ.ಎನ್ ಟಿಂಬರ್ಸ್ ನ ಖಾಜಾ ಭಾಯ್,ಸಿ.ಎಮ್‌.ಸಿ ಸದಸ್ಯ ಸೈಯದ್ ಸಮೀವುಲ್ಲಾ,ಎ.ಎಸ್.ಎಮ್ ವೆಜಿಟೇಬಲ್ಸ್ ನ ಅಸ್ಲಾಮ್,ಟೂರ್ನಮೆಂಟ್ ನ ಆಯೋಜಕರಾದ ನಿಜಾಮ್,ನಿರಂಜನ್ ಹಾಗು ವೈ.ಎಸ್‌.ಸಿ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.ಅಟ್ಯಾಕರ್ಸ್ ತಂಡದ ನಾಯಕ ಎಲ್.ನಿರಂಜನ್ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟಂತಹ ವೈ.ಎಸ್.ಸಿ ತಂಡದ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು.
ಪಂದ್ಯಾವಳಿಯ ನೇರ ಪ್ರಸಾರವನ್ನು ಯಾಸೀನ್ ನೇತೃತ್ವದ Y.Sports ಯೂ ಟ್ಯೂಬ್ ಚಾನೆಲ್ ಬಿತ್ತರಿಸಿತ್ತು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × 4 =