ಕ್ರಿಕೆಟ್ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್...

ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ

-

- Advertisment -spot_img

ಕೋಲಾರ : ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ 29,30,31 ಹಾಗೂ 1 ಹೀಗೆ 4 ದಿನಗಳ ಕಾಲ ಹಗಲಿನಲ್ಲಿ ಕೆ.ಜಿ.ಎಫ್ ಮುಖ್ಯ ರಸ್ತೆಯ ಜ್ಯೂನಿಯರ್ ಕಾಲೇಜ್ ಅಂಗಣದಲ್ಲಿ ನಡೆಯಲಿದೆ.

ಪ್ರಾರಂಭದ 2 ದಿನಗಳ ಪಂದ್ಯಗಳು ಕೋಲಾರ ಜಿಲ್ಲೆಯ 12 ತಂಡಗಳಿಗೆ ಸೀಮಿತವಾದರೆ, ಕೊನೆಯ 2 ದಿನಗಳು ರಾಜ್ಯದ ಪ್ರತಿಷ್ಟಿತ 12 ತಂಡಗಳು ಪ್ರತಿಷ್ಟಿತ ಪಂದ್ಯಾಕೂಟದ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿವೆ.

ಈ ಪಂದ್ಯಾಕೂಟದ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ,ತೃತೀಯ ಸ್ಥಾನಿ 25,000 ಹಾಗೂ ಚತುರ್ಥ ಸ್ಥಾನಿ ತಂಡ 20,000 ನಗದಿನ ಜೊತೆಗೆ ವೈಯಕ್ತಿಕ ಪ್ರಶಸ್ತಿಯಾಗಿ ಆಕರ್ಷಕ ಬಹುಮಾನಗಳನ್ನು ನಗದು ಸಹಿತ ಪಡೆಯಲಿದ್ದಾರೆ.

ಬಂಗಾರಪೇಟೆ ಇತಿಹಾಸದಲ್ಲೇ ಸಂಚಲನ ಮೂಡಿಸಲಿರುವ ಈ ಪಂದ್ಯಾಕೂಟ ಗೋವಿಂದರಾಜ್, ನಾಗರಾಜ್, ನಂದೀಶ್ ಹಾಗೂ ಅಕ್ರಮ್ ಖಾನ್ ರ ದಕ್ಷ ಪ್ರಾಯೋಜಕತ್ವದಲ್ಲಿ ಜರುಗಲಿದ್ದು. ವೀಕ್ಷಕ ವಿವರಣೆಯ ನೇತೃತ್ವವನ್ನು ರಾಜ್ಯದ ಶ್ರೇಷ್ಠ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ನಿರ್ವಹಿಸಿದರೆ. ತೀರ್ಪುಗಾರರಾಗಿ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಸಂಗಡಿಗರಿದ್ದರೆ,ಪಂದ್ಯಾಕೂಟದ ನೇರ ಪ್ರಸಾರವನ್ನು ಸಚಿನ್ ಮಹಾದೇವ್ ನೇತೃತ್ವದ M.Sports ರಾಷ್ಟ್ರದಾದ್ಯಂತ ಬಿತ್ತರಿಸಲಿದ್ದು.

ಮೀಡಿಯಾ ಪಾರ್ಟ್ನರ್ ರೂಪದಲ್ಲಿ “ಸ್ಪೋರ್ಟ್ಸ್ ಕನ್ನಡ” ಪಂದ್ಯಾಕೂಟದ ಸಂಪೂರ್ಣ ವರದಿ ಪ್ರಕಟಿಸಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × one =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you