ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸ್ಟಾರ್ ಕಾಮೆಂಟೇಟರ್ಸ್ ವತಿಯಿಂದ ವೀಕ್ಷಕ ವಿವರಣೆಗಾರರಿಗಾಗಿ KTCPL ಟ್ರೋಫಿ- 2024...

ಸ್ಟಾರ್ ಕಾಮೆಂಟೇಟರ್ಸ್ ವತಿಯಿಂದ ವೀಕ್ಷಕ ವಿವರಣೆಗಾರರಿಗಾಗಿ KTCPL ಟ್ರೋಫಿ- 2024 ಸೀಸನ್ 2

-

- Advertisment -spot_img

ಉಡುಪಿಯ ಯುವ ವೀಕ್ಷಕ ವಿವರಣೆಗಾರರಾದ ಬಾನು ಪ್ರಕಾಶ್ ಪೆರಂಪಳ್ಳಿ ಮತ್ತು ಹುಸೈನ್ ಮಣಿಪುರ ಇವರು ಕಳೆದು ವರ್ಷ ರಾಜ್ಯದ ಎಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ವೀಕ್ಷಕ ವಿವರಣೆಗಾರರನ್ನು ಒಗ್ಗೂಡಿಸಿ ‘ ಸ್ಟಾರ್ ಕಾಮೆಂಟೇಟರ್ಸ್ ‘ ಎಂಬ ಗ್ರೂಪನ್ನು ರಚಿಸಿ ವೀಕ್ಷಕ ವಿವರಣೆಗಾರರಿಗೋಸ್ಕರ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದರು.

ಇದೀಗ ಸ್ಟಾರ್ ಕಾಮೆಂಟೇಟರ್ಸ್ ಗ್ರೂಪ್ KTCPL ಎರಡನೇ ಆವೃತ್ತಿಗೆ ವೇದಿಕೆಯಾಗಲಿದೆ.
ಅದ್ದೂರಿಯ ‘KTCPL ಟ್ರೋಫಿ- 2024 ಸೀಸನ್ 2 ‘ ಎನ್ನುವ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಆಯೋಜಿಸಲು ಇವರು ಸನ್ನದ್ದರಾಗಿದ್ದಾರೆ. ಅಕ್ಟೋಬರ್ 1 ಮತ್ತು 2 ತಾರೀಖಿನಂದು ಉಡುಪಿಯ ದೊಡ್ಡಣ್ಣ ಗುಡ್ಡೆ ನಗರಸಭಾ ಮೈದಾನದಲ್ಲಿ ಈ ಟೂರ್ನಮೆಂಟ್ ನಡೆಯಲಿದೆ.

ಇದು ಕರ್ನಾಟಕ ರಾಜ್ಯದ ಕ್ರಿಕೆಟ್ ವೀಕ್ಷಕ ವಿವರಣೆ ಗಾರರಿಗೋಸ್ಕರ, ವೀಕ್ಷಕ ವಿವರಣೆಗಾರರಿಂದಲೇ ಆಯೋಜಿಸಿರುವ ಪಂದ್ಯಾವಳಿ. ರಾಜ್ಯದ ವಿವಿಧ ಭಾಗಗಳಿಂದ ಹಲವು ಕಾಮೆಂಟೇಟರ್ ಗಳು ಈಗಾಗಲೇ ಈ ಪಂದ್ಯಾವಳಿಯ ಬಿಡ್ಡಿಂಗ್ ಪ್ರಕ್ರಿಯೆಗಾಗಿ ನೊಂದಾಯಿಸಿಕೊಂಡಿದ್ದಾರೆ. ಹತ್ತು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದು ಪ್ರತಿಯೊಂದು ತಂಡಕ್ಕೂ ಮಾಲೀಕರು, ಸಹಮಾಲೀಕರು ಮತ್ತು ಐಕಾನ್ ಆಟಗಾರರು ಇರುತ್ತಾರೆ. ಪ್ರತಿ ತಂಡಕ್ಕೂ ಆಟಗಾರರನ್ನು ಹರಾಜು ಮೂಲಕ ಆಯ್ಕೆ ಮಾಡಲಾಗಿದೆ. ವಿಜೇತರಾದವರಿಗೆ ಟ್ರೋಫಿಗಳು ಮತ್ತು ನಗದು ಬಹುಮಾನ ನಿಗದಿಗೊಳಿಸಲಾಗಿದೆ.

ಇದುವರೆಗೆ ಕೈಯಲ್ಲಿ ಮೈಕ್ ಹಿಡಿದು ವ್ಯಾಖ್ಯಾನ ನೀಡುತ್ತಿದ್ದ ಪ್ರತಿಭಾವಂತ ಕಾಮೆಂಟೇಟರ್ ಗಳು ಬ್ಯಾಟ್ ಮತ್ತು ಬಾಲ್ ಹಿಡಿದು ಈ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಬ್ಯಾಟಿಂಗ್ ಮತ್ತು ಬೌಲಿಂಗ್ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ. ಉಡುಪಿ, ಕುಂದಾಪುರ, ಮಂಗಳೂರು, ಮೈಸೂರ್, ಬೆಂಗಳೂರು, ಚಿಕ್ಕಮಗಳೂರು ಹೀಗೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ವೀಕ್ಷಕ ವಿವರಣೆಗಾರರು ಆಗಮಿಸಿ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ. ಆಯೋಜಕರ ಪ್ರಕಾರ, ಈ ಪಂದ್ಯಾವಳಿಯ ಉದ್ದೇಶವು ಎಲ್ಲಾ ಹಿರಿಯ ಮತ್ತು ಕಿರಿಯ ವೀಕ್ಷಕ ವಿವರಣೆಗಾರರನ್ನು ಒಗ್ಗೂಡಿಸುವುದು. ಕಳೆದ ಬಾರಿಯು ಕೂಡ ಇದೇ ತರಹದ ಕ್ರಿಕೆಟ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿ ಸಂಘಟಕರಾದ ಬಾನು ಪ್ರಕಾಶ್ ಪೆರಂಪಳ್ಳಿ ಮತ್ತು ಹುಸೈನ್ ಮಣಿಪುರ ಇವರಿಗೆ ಸಲ್ಲುತ್ತದೆ.

ಟೆನಿಸ್ ಬಾಲ್ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಬೇಕಾಗಿ ಸ್ಟಾರ್ ಕಾಮೆಂಟೇಟರ್ಸ್ ಗ್ರೂಪ್ ನ ಸರ್ವ ಸದಸ್ಯರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

3 × 1 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you