ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಮಾನವೀಯ ಮೌಲ್ಯಗಳಿಗೆ ಸಾಕ್ಷಿ-ವೈದ್ಯಕೀಯ ನೆರವಿಗೆ ಮೀಸಲಿಟ್ಟ ಪ್ರಶಸ್ತಿಯ ಮೊತ್ತ

ಕುಂದಾಪುರ-ಮಾನವೀಯ ಮೌಲ್ಯಗಳಿಗೆ ಸಾಕ್ಷಿ-ವೈದ್ಯಕೀಯ ನೆರವಿಗೆ ಮೀಸಲಿಟ್ಟ ಪ್ರಶಸ್ತಿಯ ಮೊತ್ತ

-

- Advertisment -spot_img
KTCBKಚಿನ್ನ-ಬೆಳ್ಳಿ ಕೆಲಸಗಾರರ ಸಂಘ(ರಿ)ಕುಂದಾಪುರ
ಇದರ ಸದಸ್ಯರಿಗಾಗಿ ಕುಂದಾಪುರದ ಗಾಂಧಿ  ಮೈದಾನದಲ್ಲಿ ಒಂದು ದಿನದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು.
ಒಟ್ಟು 6 ತಂಡಗಳು ಭಾಗವಹಿಸಿದ್ದು, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಸಾಗಿದ್ದು ಅಂತಿಮವಾಗಿ ನವೀನ್ ಆಚಾರ್ಯ ನೇತೃತ್ವದ ತಿರುಮಲ ಗೋಲ್ಡ್ ತಂಡ,ಗಣೇಶ್ ಆಚಾರ್ಯ ನೇತೃತ್ವದ ಅಪ್ಪು ಕ್ರಿಕೆಟರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ತಂಡವಾಗಿ ಮೂಡಿಬಂದಿತು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿ,ತಿರುಮಲ ಗೋಲ್ಡ್ ತಂಡದ ನವೀನ್ ನಗದು ಬಹುಮಾನದಲ್ಲಿ 8,000 ಮತ್ತು ದ್ವಿತೀಯ ಸ್ಥಾನಿ ಅಪ್ಪು ಕ್ರಿಕೆಟರ್ಸ್ ನ ಗಣೇಶ್ ಆಚಾರ್ಯ ನಗದು ಬಹುಮಾನ ಅಷ್ಟನ್ನೂ 7,777 ರೂ ಇತ್ತೀಚೆಗಷ್ಟೇ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ
ಪ್ರಕಾಶ್ ಆಚಾರ್ಯರಿಗೆ ನೀಡುವಂತೆ ಆಯೋಜಕರಿಗೆ ಹಸ್ತಾಂತರಿಸಿದರು.
ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ
ಜ್ಯುವೆಲ್ಲರಿ ಅಸೋಸಿಯೇಷನ್ ಕುಂದಾಪುರದ ಅಧ್ಯಕ್ಷರಾದ ಸತೀಶ್ ಆಚಾರ್ಯ,ಅಜಯ್ ಶೇಟ್ ಉದಯ್ ಜ್ಯುವೆಲ್ಲರ್ಸ್,ಉದಯ್ ಭೋಸ್ಲೆ ಕುಂದಾಪುರ,ಭೂಷಣ್ ಶೇಟ್ ಕುಂದಾಪುರ,ಕೋಟ ರಾಮಕೃಷ್ಣ ಆಚಾರ್ ಪ್ರವರ್ತಕರು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಕುಂದಾಪುರ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರಾಜೇಶ್ ಆಚಾರ್ಯ ಮರವಂತೆ,ಕುಶ ಆಚಾರ್ ಬನ್ನಾಡಿ ಮತ್ತು ಗಣೇಶ್ ಆಚಾರ್ ಮುಳ್ಳಿಕಟ್ಟೆ,
ಸಂಘದ ಪಧಾದಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ಟೆನ್ನಿಸ್ ಬಾಲ್ ಕ್ರಿಕೆಟ್ ಬೆಳವಣಿಗೆಯ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ ಚಲನಚಿತ್ರ ಗೀತ ರಚನೆಕಾರ ಪ್ರಮೋದ್ ಮರವಂತೆ,ಹಿರಿಯ
ಆಟಗಾರರಾದ ಮನೋಜ್ ನಾಯರ್ ಚಕ್ರವರ್ತಿ,ಈಶ್ವರ್ ಶೇಟ್,ಸಂಜಯ್ ಪಾಟೀಲ್,ಶ್ರೀಧರ್ ಆಚಾರ್,ಸಂಘದ ಅಧ್ಯಕ್ಷ ರಾಜೇಶ್ ಆಚಾರ್ ಮರವಂತೆ,ಗಣೇಶ್ ಆಚಾರ್ ಮುಳ್ಳಿಕಟ್ಟೆ ಮತ್ತು ಕುಶ ಆಚಾರ್ ಬನ್ನಾಡಿ ಉಪಸ್ಥಿತರಿದ್ದರು.ಕುಶ ಬನ್ನಾಡಿ ಕಾರ್ಯಕ್ರಮ ನಿರೂಪಣೆ ಮಾಡಿ ಸುನಿಲ್ ಶೇಟ್ ಸ್ವಾಗತಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − 7 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you