15.6 C
London
Tuesday, May 14, 2024
HomeAction Replayಕುಂದಾಪುರ : ಟಾರ್ಪಡೋಸ್ ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಪ್ರಶಸ್ತಿ ವಿಜೇತರ ಪಟ್ಟಿ

ಕುಂದಾಪುರ : ಟಾರ್ಪಡೋಸ್ ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಪ್ರಶಸ್ತಿ ವಿಜೇತರ ಪಟ್ಟಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಕುಂದಾಪುರ : ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಶ್ರೇಷ್ಠ ತಂಡ ಟಾರ್ಪಡೋಸ್ ಕುಂದಾಪುರದ ನಾಯಕ ಗೌತಮ್ ಶೆಟ್ಟಿ ಸಾರಥ್ಯದಲ್ಲಿ, ಕ್ರಿಕೆಟ್ ಜೊತೆಗೆ ವಿವಿಧ ಕ್ರೀಡಾಸಾಧಕರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವ ಉದ್ದೇಶದಿಂದ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿರುವ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಜರುಗಿದ ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಪ್ರಶಸ್ತಿ ವಿಜೇತರ ಪಟ್ಟಿ.

13 ರ ವಯೋಮಿತಿ ಬಾಲಕಿಯರ ವಿಭಾಗ : ಪ್ರಥಮ- ಮಾಧವ ಕೃಪಾ ಸ್ಕೂಲ್ ಮಣಿಪಾಲ,ದ್ವಿತೀಯ-ಸೈಂಟ್ ಅ್ಯಾಗ್ನೆಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಂಗಳೂರು,ತೃತೀಯ-ಎಸ್.ಎಂ.ಎಸ್ ಇಂಗ್ಲೀಷ್ ಮೀಡಿಯಂ‌ ಸ್ಕೂಲ್

13 ರ ವಯೋಮಿತಿ ಬಾಲಕರ ವಿಭಾಗ : ಪ್ರಥಮ-ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಮಂಗಳೂರು, ದ್ವಿತೀಯ-ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ, ತೃತೀಯ-ಡೆಲ್ಲಿ ಪಬ್ಲಿಕ್ ಸ್ಕೂಲ್ ಮಂಗಳೂರು ಹಾಗೂ ಮಾಧವ ಕೃಪಾ ಸ್ಕೂಲ್ ಮಣಿಪಾಲ

16 ರ ವಯೋಮಿತಿ ಬಾಲಕರ ವಿಭಾಗ : ಪ್ರಥಮ-ಡೆಲ್ಲಿ ಪಬ್ಲಿಕ್ ಸ್ಕೂಲ್ ಮಂಗಳೂರು, ದ್ವಿತೀಯ-ಶ್ರೀ ಚೈತನ್ಯಾ ಟೆಕ್ನೋ ಸ್ಕೂಲ್ ಮಂಗಳೂರು, ತೃತೀಯ-ಮಾಧವ ಕೃಪಾ ಸ್ಕೂಲ್ ಮಂಗಳೂರು ಹಾಗೂ ನಾರಾಯಣ ಗುರು ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಲ್ಪೆ

16 ರ ವಯೋಮಿತಿ ಬಾಲಕಿಯರು : ಪ್ರಥಮ-ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಮಂಗಳೂರು, ದ್ವಿತೀಯ-ಡೆಲ್ಲಿ ಪಬ್ಲಿಕ್ ಸ್ಕೂಲ್ ಮಂಗಳೂರು, ತೃತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ ಹಾಗೂ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು.

ಈ ಎಲ್ಲಾ ಪ್ರಶಸ್ತಿ ವಿಜೇತರನ್ನು ಪಂದ್ಯಾಕೂಟದ ಮುಖ್ಯ ರೂವಾರಿ ಟಾರ್ಪಡೋಸ್ ಟೇಬಲ್ ಟೆನ್ನಿಸ್ ಕೋಚ್ ಅಶ್ವಿನ್ ಪಡುಕೋಣೆ(ITTF Level 3) ಅಭಿನಂದಿಸಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರಿನ ಸುರತ್ಕಲ್ ಪರಿಸರದ ಟೆನ್ನಿಸ್ ಕ್ರಿಕೆಟ್ ನ ಪ್ರಸಿದ್ಧ ತಂಡ ಮಾರುತಿ ಮುಕ್ಕ ತಂಡದ ಶ್ರೇಷ್ಠ ಗೂಟರಕ್ಷಕ ಹಾಗೂ ಆಲ್ ರೌಂಡರ್ ಶ್ರೀಯುತ ಶೈಲೇಶ್ ಸುವರ್ಣ ಹಾಗೂ ಇತ್ತೀಚೆಗಷ್ಟೇ ಗೋವಾದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಕ್ರೀಡಾಕೂಟದ 100 ಮೀ ಓಟ ಹಾಗೂ ಹೈಜಂಪ್ ನಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಂಸ್ಥೆಯ ಸೀನಿಯರ್ ಮೆನೇಜರ್ ಬಬಿತಾ ಶೆಟ್ಟಿ ಮಂಗಳೂರು ಇವರು ವಿಜೇತರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen + 18 =