Action Replayಕುಂದಾಪುರ : ಫ್ರೆಂಡ್ಸ್ ಬೆಂಗಳೂರು ಹಿರಿಯರ ಸಾಹಸಕ್ಕೆ ಒಲಿದ ಸ್ಪೋರ್ಟ್ಸ್ ಕನ್ನಡ...

ಕುಂದಾಪುರ : ಫ್ರೆಂಡ್ಸ್ ಬೆಂಗಳೂರು ಹಿರಿಯರ ಸಾಹಸಕ್ಕೆ ಒಲಿದ ಸ್ಪೋರ್ಟ್ಸ್ ಕನ್ನಡ ಟ್ರೋಫಿ

-

- Advertisment -spot_img

ಕುಂದಾಪುರ : ಹಲವು ದಶಕಗಳ ಬಳಿಕ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಪಂದ್ಯಾಕೂಟವೊಂದು ದಾಖಲಾಯಿತು. ಸ್ಪೋರ್ಟ್ಸ್ ಕನ್ನಡ ಲೋಕಾರ್ಪಣಾ ಕಾರ್ಯಕ್ರಮದ ಪ್ರಯುಕ್ತ ಟೆನ್ನಿಸ್ ಕ್ರಿಕೆಟನ್ನು ಇನ್ನಿಲ್ಲದಂತೆ ಆಳಿ ಮೆರೆದ ದಂತಕಥೆಗಳ ನಡುವೆ ಹಣಾಹಣಿ ಕ್ರಿಕೆಟ್ ಕಾಶಿ ಕುಂದಾಪುರದ ಗಾಂಧಿಮೈದಾನದಲ್ಲಿ ಏರ್ಪಡಿಸಲಾಗಿತ್ತು.

ಬೆಂಗಳೂರಿನ ಹಿರಿಯ ತಂಡಗಳಾದ ಮನೋಹರ್ ನೇತೃತ್ವದ ಜೈ ಕರ್ನಾಟಕ,ರೇಣು ಗೌಡ ನೇತೃತ್ವದ ಫ್ರೆಂಡ್ಸ್ ಬೆಂಗಳೂರು,ಶ್ರೀಪಾದ ಉಪಾಧ್ಯ ಸಾರಥ್ಯದ ಚಕ್ರವರ್ತಿ ಕುಂದಾಪುರ ಹಾಗೂ ಸಫ್ದರ್ ಆಲಿ ನೇತೃತ್ವದ ಉಡುಪಿ ಕ್ರಿಕೆಟರ್ಸ್ ನಡುವೆ ನಡೆದ ರೋಚಕ ಹಣಾಹಣಿಯಲ್ಲಿ ಫ್ರೆಂಡ್ಸ್ ತಂಡ ಚಕ್ರವರ್ತಿ ತಂಡವನ್ನು, ಉಡುಪಿ ಕ್ರಿಕೆಟರ್ಸ್ ಜೈ ಕರ್ನಾಟಕ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು.

ಫೈನಲ್ ಪಂದ್ಯಾಟದಲ್ಲಿ ಟಾಸ್ ಜಯಿಸಿ ಫೀಲ್ಡಿಂಗ್ ಆಯ್ದುಕೊಂಡ ಫ್ರೆಂಡ್ಸ್ ತಂಡ ಎದುರಾಳಿ ಉಡುಪಿ ತಂಡವನ್ನು 8 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 61 ರನ್ ಗಳಿಗೆ ನಿಯಂತ್ರಿಸಿತು‌.

ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಫ್ರೆಂಡ್ಸ್ ನ ಆರಂಭಿಕ ಹಿರಿಯ ಆಟಗಾರ ಶ್ರೀಕಾಂತ್ ಅಮೂಲ್ಯ 15 ರನ್ ಹಾಗೂ ಗಂಗಾ, ನಿತಿನ್ ಮೂಲ್ಕಿ ಎಸೆತದಲ್ಲಿ ಸಿಡಿದ ಭರ್ಜರಿ 3 ಸಿಕ್ಸರ್ ಸಹಿತ 7 ಎಸೆತಗಳಲ್ಲಿ 21 ರನ್ ಸಿಡಿಸಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದರು.

“ಸ್ಪೋರ್ಟ್ಸ್ ಕನ್ನಡ” ವೆಬ್ಸೈಟ್ ನ ವರ್ಣರಂಜಿತ ಉದ್ಘಾಟನಾ ಸಮಾರಂಭದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಯಿತು.

ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗಂಗಾ,ಬೆಸ್ಟ್ ಬೌಲರ್ ನಿತಿನ್ ಮೂಲ್ಕಿ,ಬೆಸ್ಟ್ ಕೀಪರ್ ಕೆ.ಪಿ.ಸತೀಶ್ ,ಬೆಸ್ಟ್ ಕ್ಯಾಚ್ ಪ್ರೇಮೇಂದ್ರ ಶೆಟ್ಟಿ ,ಬೆಸ್ಟ್ ಬ್ಯಾಟ್ಸ್‌ಮನ್‌ ಫ್ರೆಂಡ್ಸ್ ನ ಶ್ರೀಕಾಂತ್ ಪಡೆದುಕೊಂಡರು.ಹಿರಿಯ ಕ್ರಿಕೆಟಿಗರನ್ನು ಹುರಿದುಂಬಿಸಲು ರಾಜ್ಯದ ಯುವ ಕ್ರಿಕೆಟಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.ಹಿರಿಯ ಕ್ರಿಕೆಟಿಗರನ್ನು ಅತಿಥಿಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಬೆಳಗ್ಗಿನ ಪಂದ್ಯಾಕೂಟಕ್ಕಾಗಿ ಕರ್ನಾಟಕ ರಾಜ್ಯದ ಹಿರಿಯ ತಂಡಗಳಾದ ಬೆಂಗಳೂರಿನ ಜೈ ಕರ್ನಾಟಕದ ದಂತಕಥೆಗಳಾದ ಮನೋಹರ್, ಮ್ಯಾಜಿಕಲ್ ಸ್ಪಿನ್ನರ್ ಮೆರ್ವಿನ್,ನಂಬುಗೆಯ ದಾಂಡಿಗ ಕೀಪರ್ ನಾಗಿ,ಬಾಬು,ನಾಗೇಶ್ ಸಿಂಗ್,ಭಗವಾನ್ ಸಿಂಗ್,ಜಾನ್ಸನ್ ಶ್ರೀಧರ್,ಸಾಂಬಾಜಿ ಪ್ರತಿನಿಧಿಸಿದರೆ,
ಫ್ರೆಂಡ್ಸ್ ನ ರೇಣು ಗೌಡ, ಶ್ರೀಕಾಂತ್, ಸುನಿಲ್ ಬಿರಾದರ್,ಚಂದಿ,ಸೀನ,ಗಂಗಾ ಆಡಿದ್ದರೆ, ಉಡುಪಿ ಕ್ರಿಕೆಟರ್ಸ್ ನಿಂದ ನಾಯಕ ಸಪ್ಧರ್ ಆಲಿ,ನಿತಿನ್ ಮೂಲ್ಕಿ,ವಿನ್ಸೆಂಟ್, ಪ್ರವೀಣ್ ಪಿತ್ರೋಡಿ, ವಿಲ್ಫ್ರೆಡ್,ವಿಶ್ವನಾಥ್ ಹಾಗೂ ಚಕ್ರವರ್ತಿ ಕುಂದಾಪುರ ತಂಡ ನಾಯಕ ಶ್ರೀಪಾದ ಉಪಾಧ್ಯಾಯ ರ ಅನುಪಸ್ಥಿತಿಯಲ್ಲಿ ಸತೀಶ್ ಕೋಟ್ಯಾನ್ ರ ನಾಯಕತ್ವದಲ್ಲಿ ಮನೋಜ್ ನಾಯರ್,ಪ್ರದೀಪ್ ವಾಜ್,ಕೆ.ಪಿ.ಸತೀಶ್, ರಂಜಿತ್ ಶೆಟ್ಟಿ, ರಾಜಾ ಇನ್ನಿತರ ಹಿರಿಯ ದಂತಕಥೆಗಳು ದಶಕಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದರು.

ಬೆಳಗ್ಗಿನ ಪಂದ್ಯಾಕೂಟ ಹಾಗೂ ಸಂಜೆಯ ವೆಬ್ಸೈಟ್ ಲೋಕಾರ್ಪಣಾ ಕಾರ್ಯಕ್ರಮದ ನೇರ ಪ್ರಸಾರವನ್ನು ಸಚಿನ್ ಮಹಾದೇವ್ ನೇತೃತ್ವದ M.SPORTS ವಿಶ್ವದಾದ್ಯಂತ ಪ್ರಸಾರ ಮಾಡಿದ್ದು,ಸಹಸ್ರಾರು ಮಂದಿ ವೀಕ್ಷಕರು ಅಪರೂಪದ ಸಮ್ಮಿಲನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

                                                                                                                                         – ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten + thirteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you