9 C
London
Wednesday, April 17, 2024
Homeಟೆನಿಸ್ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಕುಂದಾಪುರದ ಶ್ರೇಷ್ಠ ತಂಡ ಟಾರ್ಪಡೋಸ್ ಕ್ರಿಕೆಟ್ ಕ್ಲಬ್

ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಕುಂದಾಪುರದ ಶ್ರೇಷ್ಠ ತಂಡ ಟಾರ್ಪಡೋಸ್ ಕ್ರಿಕೆಟ್ ಕ್ಲಬ್

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಕುಂದಾಪುರ : ಶ್ರೀಯುತ ಗೌತಮ್ ಶೆಟ್ಟಿಯವರ ನೇತೃತ್ವದಲ್ಲಿ ಕ್ರಿಕೆಟ್ ಜೊತೆ ಇನ್ನಿತರ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿರುವ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇವರ ವತಿಯಿಂದ ಅಂತರ್ ಶಾಲಾ ಟೇಬಲ್ ಟೆನ್ನಿಸ್ ಸ್ಪರ್ಧೆಯು ಶನಿವಾರದಂದು ನಡೆಯಿತು.

ಈ ಪಂದ್ಯಾಕೂಟವನ್ನು ಶಾರದಾ ವಿದ್ಯಾನಿಕೇತನ ತಲಪಾಡಿಯ ಮುಖ್ಯ ದೈಹಿಕ ಶಿಕ್ಷಕರಾದ ಶ್ರೀಯುತ ವಿನೋದ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಆಗ್ನೆಸ್ ನ ದೈಹಿಕ ಶಿಕ್ಷಕಿ ದೇವಿಕಾ, ಮಂಗಳೂರಿನ ಮೌಂಟ್ ಕಾರ್ಮೆಲ್ ಶಾಲೆಯ ದೈಹಿಕ ಶಿಕ್ಷಕಿ ಕ್ಲಾರಾ,ಎಸ್.ಎಮ್.ಎಸ್ ಕಾಲೇಜಿನ ಭಾಸ್ಕರ್, ಉಡುಪಿ ಶಾರದಾ ರೆಸಿಡೆನ್ಷಿಯಲ್ ಶಾಲೆಯ ದೈಹಿಕ ಶಿಕ್ಷಕ ಸುಕೇಶ್, ಕಾರ್ಯಕ್ರಮದ ಮುಖ್ಯ ರೂವಾರಿ ಹಾಗೂ ಟಾರ್ಪಡೋಸ್ ಟೇಬಲ್ ಟೆನ್ನಿಸ್ ನ ತರಬೇತುದಾರರಾಗಿರುವ ಅಶ್ವಿನ್ ಪಡುಕೋಣೆ, ಬ್ಯಾಡ್ಮಿಂಟನ್ ತರಬೇತುದಾರ ಸಂತೋಷ್ ಖಾರ್ವಿ, ಪ್ರತಾಪ್ ಶೆಟ್ಟಿ, ಕೆ.ಪಿ.ಸತೀಶ್,ಭಾಗ್ಯರಾಜ್,ದೀಪಕ್ ಕೋಟ್ಯಾನ್, ನವನೀತ್,ಕಾರ್ತಿಕ್ ಇವರು ಉಪಸ್ಥಿತರಿದ್ದರು.

ಈ ಪಂದ್ಯಾಕೂಟಕ್ಕಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ 45 ಶಾಲೆಯ ತಂಡಗಳು ಆಗಮಿಸಿದ್ದು,295 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

– ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × five =