Categories
ಕ್ರಿಕೆಟ್

ಕುಂದಾಪುರ-ಅರಳಿಕಟ್ಟೆ ಟ್ರೋಫಿ-2021 ಫೆಬ್ರವರಿ 27 ಮತ್ತು 28 ರಂದು

ಅರಳಿಕಟ್ಟೆ ಫ್ರೆಂಡ್ಸ್ (ಮೀನು ಮಾರ್ಕೆಟ್ ರಸ್ತೆ)ಕುಂದಾಪುರ ಇದರ 13ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ  ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾಕೂಟ “ಅರಳಿಕಟ್ಟೆ ಟ್ರೋಫಿ-2021” ಆಯೋಜಿಸಲಾಗಿದೆ.
ಫೆಬ್ರವರಿ 27 ಮತ್ತು 28 ರಂದು
ಕುಂದಾಪುರ ಮೀನು ಮಾರ್ಕೆಟ್ ರಸ್ತೆ ನಾಗಬೊಬ್ಬರ್ಯ ದೇವಸ್ಥಾನದ ಸಮೀಪ ಈ ಪಂದ್ಯಾಕೂಟ ನಡೆಯಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 22,222 ನಗದು ಹಾಗೂ ದ್ವಿತೀಯ ಸ್ಥಾನಿ ,14,444 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ ಹಾಗೂ ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ  ವಿಶೇಷ ಬಹುಮಾನ‌ ನೀಡಲಾಗುತ್ತಿದೆ.
ತಂಡಗಳು ತಮ್ಮ ಹೆಸರನ್ನು ನೊಂದಾಯಿಸಲು ಫೆಬ್ರವರಿ 21 ಕೊನೆಯ ದಿನಾಂಕವಾಗಿದ್ದು,
ಹೆಚ್ಚಿನ ಮಾಹಿತಿಗಾಗಿ 9686743706,7760903685,
9148742862 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

thirteen + 4 =