Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕುಂದಾಪುರ-ಶಾಹಿದ್ ಭರ್ಜರಿ ಬ್ಯಾಟಿಂಗ್-ಚಕ್ರವರ್ತಿ

ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಕುಂದಾಪುರ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಚಕ್ರವರ್ತಿ ಕುಂದಾಪುರದ ಶಾಹಿದ್ ಜವಾಬ್ದಾರಿಯುತ ಆಟದ ಫಲವಾಗಿ ಚಕ್ರವರ್ತಿ ಕ್ವಾರ್ಟರ್ ಫೈನಲ್ ತಲುಪಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಚಾಲುಕ್ಯ ಹೆಮ್ಮಾಡಿ ಅನಿಲ್ 32 ರನ್ ಮತ್ತು ರಾಘವೇಂದ್ರ 23 ರನ್ ನೆರವಿನಿಂದ 9.1 ಓವರ್ ಗಳಲ್ಲಿ 73 ರನ್ ಗೆ ಆಲೌಟ್ ಆಗಿತ್ತು.ಸವಾಲಿನ‌ ಗುರಿಯನ್ನು ಬೆನ್ನತ್ತಿದ ಚಕ್ರವರ್ತಿ ಕುಂದಾಪುರ,ಆರಂಭಿಕ ಆಟಗಾರ ಶಾಹಿದ್ 3 ಭರ್ಜರಿ ಸಿಕ್ಸರ್ ಗಳ ಸಹಿತ 26 ಎಸೆತಗಳಲ್ಲಿ 31 ರನ್ ಸಿಡಿಸಿ ಹಾಗೂ 2 ಓವರ್ ಗಳಲ್ಲಿ 11 ರನ್ ನೀಡಿ 2 ವಿಕೆಟ್ ಉರುಳಿಸಿ, ಗೆಲುವಿನ ರೂವಾರಿ ಎನಿಸಿಕೊಂಡರು.
ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ರಂಜಿತ್ ಶೆಟ್ಟಿ 15 ರನ್ ಸಿಡಿಸಿ ಶಾಹಿದ್ ಜೊತೆಗೆ ಗೆಲುವಿನ ಇನ್ನಿಂಗ್ಸ್ ಕಟ್ಟಿದರು.
ನಾಳೆ ಬೆಳಿಗ್ಗೆ 8.30 ಗೆ ಸರಿಯಾಗಿ ಕ್ವಾರ್ಟರ್ ಫೈನಲ್ ಹಂತದ ಹೋರಾಟ ಪ್ರಾರಂಭವಾಗಲಿದೆ.
ಮಹಾದೇವಿ ಮಲ್ಯಾಡಿ-ಚಾಲೆಂಜ್ ಕುಂದಾಪುರ ತಂಡವನ್ನು,ಜೆ.ಸಿ.ಸಿ ಜಾಲಾಡಿ ಚಕ್ರವರ್ತಿ ಕುಂದಾಪುರ ತಂಡವನ್ನು,ಜಾನ್ಸನ್ ಕುಂದಾಪುರ ಟೊರ್ಪೆಡೋಸ್ ತಂಡವನ್ನು ಹಾಗೂ ಅಂಶು ಕೋಟೇಶ್ವರ ಮಯೂರ ಕುಂದಾಪುರ ತಂಡವನ್ನು ಎದುರಿಸಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

14 + nine =