ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಟಿ.ಸಿ.ಎ-ಇಲೆವೆನ್ ಅಪ್ ಕೋಟ ಮತ್ತು ಪಾರಂಪಳ್ಳಿ ಕ್ರಿಕೆಟರ್ಸ್ ಫೈನಲ್ ಪ್ರವೇಶ

ಕುಂದಾಪುರ-ಟಿ.ಸಿ.ಎ-ಇಲೆವೆನ್ ಅಪ್ ಕೋಟ ಮತ್ತು ಪಾರಂಪಳ್ಳಿ ಕ್ರಿಕೆಟರ್ಸ್ ಫೈನಲ್ ಪ್ರವೇಶ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಸಾರಥ್ಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಟಿ‌‌.ಸಿ.ಎ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಇಲೆವೆನ್ ಅಪ್ ಕೋಟ ಮತ್ತು ಪಾರಂಪಳ್ಳಿ ಕ್ರಿಕೆಟರ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ.
ಬ್ರಹ್ಮಾವರ ತಾಲೂಕಿನ 6 ತಂಡಗಳು ಸ್ಪರ್ಧಿಸಿದ್ದವು‌.ಉಪಾಂತ್ಯ ಪಂದ್ಯದಲ್ಲಿ ಇಲೆವೆನ್ ಅಪ್ ಕೋಟ ವರ್ಲ್ಡ್ ಇಲೆವೆನ್ ಹಂದಾಡಿ ತಂಡವನ್ನು ಹಾಗೂ ಪಾರಂಪಳ್ಳಿ ಕ್ರಿಕೆಟರ್ಸ್ ಎಮ್.ಸಿ.ಸಿ ಮಣೂರು ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದು,3 ರವಿವಾರ ಸಂಜೆ ಫೈನಲ್ ಸಮರ ನಡೆಯಲಿದೆ.
ಗುರುವಾರ ಬೆಳಿಗ್ಗೆ ಬ್ರಹ್ಮಾವರ ತಾಲೂಕು ಮಟ್ಟದ ಪಂದ್ಯಾಟವನ್ನು ಸಹಾಯಕ ಕಮೀಷನರ್ ರಾಜು.ಕೆ.ಎಸ್ ಉದ್ಘಾಟಿಸಿ ಮಾತನಾಡಿ”ಕಳೆದೆರಡು ವರ್ಷಗಳಿಂದ ಕ್ರೀಡಾ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದ್ದು,ಟಿ.ಸಿ.ಎ ಪಂದ್ಯಾಟದ ಮೂಲಕ ಎಲ್ಲರೂ ಒಟ್ಟಾಗುತ್ತಿರುವುದು ಆರೋಗ್ಯ,ಆಟ,ಸಾಮಾಜಿಕ ಹಾಗೂ ಸಾಮರಸ್ಯದ ದೃಷ್ಟಿಯಿಂದ ಶ್ಲಾಘನೀಯ ಎಂದರು.”
ಟಿ.ಸಿ.ಅಧ್ಯಕ್ಷರಾದ ಗೌತಮ್ ಶೆಟ್ಟಿಯರು ಮಾತ‌ನಾಡಿ “ತಾಲೂಕು ಮಟ್ಟದ ಪಂದ್ಯಗಳ ನಂತರ ಜಿಲ್ಲಾ ಹಾಗೂ ರಾಜ್ಯಮಟ್ಟದ ಪಂದ್ಯಗಳು ನಡೆಯಲಿದ್ದು,ಪ್ರತಿಭಾನ್ವಿತ ಆಟಗಾರರಿಗೆ ಟಿ.ಸಿ.ಎ ಕೋಚಿಂಗ್ ಇನ್ನಿತರ ಸೌಲಭ್ಯವನ್ನು ಕಲ್ಪಿಸುತ್ತದೆ” ಎಂದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕುಂದಾಪುರ
ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್,ಮಾಜಿ ಜಿಲ್ಲಾ ರೋಟರಿ ಗವರ್ನರ್ ಅಭಿನಂದನ್ ಶೆಟ್ಟಿ,ಟಿ‌.ಸಿ.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಟಿ.ಸಿ.ಎ ನಿರ್ದೇಶಕರಾದ ಸುಧೀರ್ ಶೆಟ್ಟಿ  ಮಾರ್ಕೋಡು,ಟಿ.ಸಿ.ಎ ಗೌರವಾಧ್ಯಕ್ಷರಾದ ಗಿರೀಶ್ ಬೈಂದೂರು,ಶ್ರೀಧರ್ ಶೆಟ್ಟಿ ಬನ್ನಂಜೆ,ಟಿ.ಸಿ.ಎ ಕಾರ್ಯದರ್ಶಿ ಡಾ.ವಿನೋದ್ ನಾಯಕ್,ಯಾದವ್ ನಾಯಕ್ ಕೆಮ್ಮಣ್ಣು,
ಟಿ‌.ಸಿ‌.ಎ ನಿರ್ದೇಶಕರಾದ ಸತೀಶ್ ಕೋಟ್ಯಾನ್ ಉಪಸ್ಥಿತರಿದ್ದರು.ಶಿವನಾರಾಯಣ್ ಐತಾಳ್ ಕೋಟ ಕಾರ್ಯಕ್ರಮ ನಿರೂಪಣೆಗೈದರು.
ಶುಕ್ರವಾರ ಬೆಳಿಗ್ಗೆ ಕುಂದಾಪುರ ತಾಲ್ಲೂಕು ಮಟ್ಟದ ಪಂದ್ಯಾಟ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ
 ಕುಂದಾಪುರ ಡಿ.ವೈ.ಎಸ್.ಪಿ ಶ್ರೀಕಾಂತ್,ಬಿ.ಸಿ.ಸಿ‌ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ್ ಶೆಟ್ಟಿ,ಯುವಜನ ಕ್ರೀಡಾ ಇಲಾಖೆ ಕುಂದಾಪುರದ ಕುಸುಮಾಕರ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ,ಕುಂದಾಪುರ ನಾರಾಯಣಗುರು ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ,ಟಿ‌.ಸಿ‌.ಎ ಉಪಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಅಮರ್ ನಾಥ್ ಭಟ್,ಟಿ‌.ಸಿ.ಎ ಕ್ರೀಡಾಸಂಯೋಜಕರಾದ
 ರಮೇಶ್ ಕುಂದರ್ ಕೋಟ,ಗಿರೀಶ್ ಬೈಂದೂರು ಮತ್ತು ಮನೋಜ್ ನಾಯರ್ ಭಾಗವಹಿಸಲಿದ್ದಾರೆ.
ಪಂದ್ಯಾಟದ ನೇರ ಪ್ರಸಾರ M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳುತ್ತಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 − sixteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you