ಕ್ರಿಕೆಟ್ಕರ್ನಾಟಕದ ಹಿರಿಯ ಕ್ರಿಕೆಟಿಗರ ಸಮಾಗಮ-ದಿ‌.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ-ಐತಿಹಾಸಿಕ ಲೆಜೆಂಡ್ಸ್ ಕಪ್-2021

ಕರ್ನಾಟಕದ ಹಿರಿಯ ಕ್ರಿಕೆಟಿಗರ ಸಮಾಗಮ-ದಿ‌.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ-ಐತಿಹಾಸಿಕ ಲೆಜೆಂಡ್ಸ್ ಕಪ್-2021

-

- Advertisment -spot_img
ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಕಳೆದ 2 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪ್ರಸ್ತುತ ಪಡಿಸುವ,ಕರ್ನಾಟಕ ರಾಜ್ಯ ಹಿರಿಯ ಕ್ರಿಕೆಟಿಗರ ಸಮಾಗಮ,40 ರ ಮೇಲ್ಪಟ್ಟ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ ಕುಂದಾಪುರ ಪರಿಸರದ ಪ್ರಸಿದ್ಧ ತಂಡ ಚಕ್ರವರ್ತಿ ಕುಂದಾಪುರದ ಸ್ಥಾಪಕ ಸದಸ್ಯರು,ಸಹಸ್ರಾರು ಅಭಿಮಾನಿ ಬಳಗವನ್ನು ಸಂಪಾದಿಸಿ,
ಕ್ರೀಡಾಲೋಕದಲ್ಲಿ ಮಿಂಚಿ ಮರೆಯಾದ ನಕ್ಷತ್ರ ದಿ.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ “ಲೆಜೆಂಡ್ಸ್ ಕಪ್-2021” ಪಂದ್ಯಾಕೂಟ ನಡೆಯಲಿದೆ.
ಟೆನ್ನಿಸ್ಬಾಲ್ ಕ್ರಿಕೆಟ್ ಅಧ್ಯಾಯದ ಪುಟಗಳಲ್ಲೇ ಅಚ್ಚಳಿಯದ ಇತಿಹಾಸ ಬರೆಯಲಿರುವ ಈ ಪಂದ್ಯಾಕೂಟ ಏಪ್ರಿಲ್ 2,3 ಹಾಗೂ 4 ರಂದು ಟೆನ್ನಿಸ್ಬಾಲ್ ಕ್ರಿಕೆಟ್ ಕಾಶಿ ಗಾಂಧಿ ಮೈದಾನದಲ್ಲಿ ನಡೆಯಲಿದೆ.ಈಗಾಗಲೇ ಕರ್ನಾಟಕದ 32 ಹಿರಿಯ ತಂಡಗಳು ತಮ್ಮ ತಂಡಗಳ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಲೆಜೆಂಡ್ಸ್ ಕಪ್ ವಿಜೇತ ತಂಡ 1 ಲಕ್ಷ ನಗದು,ದ್ವಿತೀಯ ಸ್ಥಾನಿ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಬಹುಮಾನ ರೂಪದಲ್ಲಿ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ.
ಪಂದ್ಯಾವಳಿಯ ನೇರ ಪ್ರಸಾರವನ್ನು
M.Sports ಬಿತ್ತರಿಸಲಿದೆ.
ಕಳೆದ 2.5 ವರ್ಷಗಳಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ,ಹಿರಿಯ ಆಟಗಾರರನ್ನು ಅವರಿದ್ದಲ್ಲೇ ಹೋಗಿ ಭೇಟಿ ಮಾಡಿ,ಇದರ ಫಲಶ್ರುತಿ ಎಂಬಂತೆ ಅಷ್ಟೂ ಮಂದಿ ಹಿರಿಯ ಆಟಗಾರರು ತಮ್ಮ ತಂಡವನ್ನು ಕಟ್ಟಿಕೊಂಡು 25 ವರ್ಷಗಳ ಬಳಿಕ ಕ್ರಿಕೆಟ್ ಕಾಶಿ ಕುಂದಾಪುರಕ್ಕೆ ಮರಳಲಿದ್ದಾರೆ.80,90,2000 ರ ದಶಕದ ಆಟಗಾರರು,ಸ್ನೇಹಿತರನ್ನು ಮತ್ತೆ ಭೇಟಿ ಆಗುವ ಉತ್ಸುಕತೆಯಲ್ಲಿ ಸರ್ವ ಸಿದ್ಧತೆ ನಡೆಸುತ್ತಿದ್ದಾರೆ.
ಉದ್ಯೋಗ ನಿಮಿತ್ತ ವಿದೇಶದಲ್ಲಿ ನೆಲೆಸಿರುವ ಹಿರಿಯ ಆಟಗಾರರು ಈ ಪಂದ್ಯಾಟವನ್ನಾಡಲು ಮತ್ತೆ ಸ್ವದೇಶಕ್ಕೆ ಮರಳಲಿದ್ದಾರೆ.ಪಂದ್ಯಾಕೂಟಕ್ಕೆ ರಣಜಿ,ಅಂತರಾಷ್ಟ್ರೀಯ ಆಟಗಾರರು,ಸಿನಿಮಾ ತಾರೆಯರು ಆಗಮಿಸಲಿದ್ದು ಟೂರ್ನಮೆಂಟ್ ಮೆರುಗನ್ನು ಹೆಚ್ಚಿಸಲಿದೆ.
*ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಸ್ತಿತ್ವಕ್ಕೆ !*
ಐತಿಹಾಸಿಕ ಲೆಜೆಂಡ್ಸ್ ಕಪ್ ಪಂದ್ಯಾವಳಿಯ ಸಂದರ್ಭ ರಾಜ್ಯದ ಎಲ್ಲಾ ಹಿರಿಯ ಆಟಗಾರರು ಹಾಗೂ ಕಿರಿಯ ಆಟಗಾರರು,ತಂಡಗಳ ಮಾಲೀಕರು, ಕಪ್ತಾನರೆಲ್ಲರ ಉಪಸ್ಥಿತಿಯಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ (K.S.T.C.A)ಚಿಂತನೆ ನಡೆಸಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seventeen + 10 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you