ಕ್ರಿಕೆಟ್ಕರ್ನಾಟಕದ ಹಿರಿಯ ಕ್ರಿಕೆಟಿಗರ ಸಮಾಗಮ-ದಿ‌.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ-ಐತಿಹಾಸಿಕ ಲೆಜೆಂಡ್ಸ್ ಕಪ್-2021

ಕರ್ನಾಟಕದ ಹಿರಿಯ ಕ್ರಿಕೆಟಿಗರ ಸಮಾಗಮ-ದಿ‌.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ-ಐತಿಹಾಸಿಕ ಲೆಜೆಂಡ್ಸ್ ಕಪ್-2021

-

- Advertisment -spot_img
ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಕಳೆದ 2 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪ್ರಸ್ತುತ ಪಡಿಸುವ,ಕರ್ನಾಟಕ ರಾಜ್ಯ ಹಿರಿಯ ಕ್ರಿಕೆಟಿಗರ ಸಮಾಗಮ,40 ರ ಮೇಲ್ಪಟ್ಟ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ ಕುಂದಾಪುರ ಪರಿಸರದ ಪ್ರಸಿದ್ಧ ತಂಡ ಚಕ್ರವರ್ತಿ ಕುಂದಾಪುರದ ಸ್ಥಾಪಕ ಸದಸ್ಯರು,ಸಹಸ್ರಾರು ಅಭಿಮಾನಿ ಬಳಗವನ್ನು ಸಂಪಾದಿಸಿ,
ಕ್ರೀಡಾಲೋಕದಲ್ಲಿ ಮಿಂಚಿ ಮರೆಯಾದ ನಕ್ಷತ್ರ ದಿ.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ “ಲೆಜೆಂಡ್ಸ್ ಕಪ್-2021” ಪಂದ್ಯಾಕೂಟ ನಡೆಯಲಿದೆ.
ಟೆನ್ನಿಸ್ಬಾಲ್ ಕ್ರಿಕೆಟ್ ಅಧ್ಯಾಯದ ಪುಟಗಳಲ್ಲೇ ಅಚ್ಚಳಿಯದ ಇತಿಹಾಸ ಬರೆಯಲಿರುವ ಈ ಪಂದ್ಯಾಕೂಟ ಏಪ್ರಿಲ್ 2,3 ಹಾಗೂ 4 ರಂದು ಟೆನ್ನಿಸ್ಬಾಲ್ ಕ್ರಿಕೆಟ್ ಕಾಶಿ ಗಾಂಧಿ ಮೈದಾನದಲ್ಲಿ ನಡೆಯಲಿದೆ.ಈಗಾಗಲೇ ಕರ್ನಾಟಕದ 32 ಹಿರಿಯ ತಂಡಗಳು ತಮ್ಮ ತಂಡಗಳ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಲೆಜೆಂಡ್ಸ್ ಕಪ್ ವಿಜೇತ ತಂಡ 1 ಲಕ್ಷ ನಗದು,ದ್ವಿತೀಯ ಸ್ಥಾನಿ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಬಹುಮಾನ ರೂಪದಲ್ಲಿ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ.
ಪಂದ್ಯಾವಳಿಯ ನೇರ ಪ್ರಸಾರವನ್ನು
M.Sports ಬಿತ್ತರಿಸಲಿದೆ.
ಕಳೆದ 2.5 ವರ್ಷಗಳಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ,ಹಿರಿಯ ಆಟಗಾರರನ್ನು ಅವರಿದ್ದಲ್ಲೇ ಹೋಗಿ ಭೇಟಿ ಮಾಡಿ,ಇದರ ಫಲಶ್ರುತಿ ಎಂಬಂತೆ ಅಷ್ಟೂ ಮಂದಿ ಹಿರಿಯ ಆಟಗಾರರು ತಮ್ಮ ತಂಡವನ್ನು ಕಟ್ಟಿಕೊಂಡು 25 ವರ್ಷಗಳ ಬಳಿಕ ಕ್ರಿಕೆಟ್ ಕಾಶಿ ಕುಂದಾಪುರಕ್ಕೆ ಮರಳಲಿದ್ದಾರೆ.80,90,2000 ರ ದಶಕದ ಆಟಗಾರರು,ಸ್ನೇಹಿತರನ್ನು ಮತ್ತೆ ಭೇಟಿ ಆಗುವ ಉತ್ಸುಕತೆಯಲ್ಲಿ ಸರ್ವ ಸಿದ್ಧತೆ ನಡೆಸುತ್ತಿದ್ದಾರೆ.
ಉದ್ಯೋಗ ನಿಮಿತ್ತ ವಿದೇಶದಲ್ಲಿ ನೆಲೆಸಿರುವ ಹಿರಿಯ ಆಟಗಾರರು ಈ ಪಂದ್ಯಾಟವನ್ನಾಡಲು ಮತ್ತೆ ಸ್ವದೇಶಕ್ಕೆ ಮರಳಲಿದ್ದಾರೆ.ಪಂದ್ಯಾಕೂಟಕ್ಕೆ ರಣಜಿ,ಅಂತರಾಷ್ಟ್ರೀಯ ಆಟಗಾರರು,ಸಿನಿಮಾ ತಾರೆಯರು ಆಗಮಿಸಲಿದ್ದು ಟೂರ್ನಮೆಂಟ್ ಮೆರುಗನ್ನು ಹೆಚ್ಚಿಸಲಿದೆ.
*ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಸ್ತಿತ್ವಕ್ಕೆ !*
ಐತಿಹಾಸಿಕ ಲೆಜೆಂಡ್ಸ್ ಕಪ್ ಪಂದ್ಯಾವಳಿಯ ಸಂದರ್ಭ ರಾಜ್ಯದ ಎಲ್ಲಾ ಹಿರಿಯ ಆಟಗಾರರು ಹಾಗೂ ಕಿರಿಯ ಆಟಗಾರರು,ತಂಡಗಳ ಮಾಲೀಕರು, ಕಪ್ತಾನರೆಲ್ಲರ ಉಪಸ್ಥಿತಿಯಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ (K.S.T.C.A)ಚಿಂತನೆ ನಡೆಸಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 + fifteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you