ಕ್ರಿಕೆಟ್ಬೆಂಗಳೂರು-ಟೆನ್ನಿಸ್ಬಾಲ್ ಕ್ರಿಕೆಟ್ ಯುಗ ಪ್ರವರ್ತಕ ಸ್ಮರಣಾರ್ಥ ರಂಗ ಇಲೆವೆನ್ ಕಪ್-2021

ಬೆಂಗಳೂರು-ಟೆನ್ನಿಸ್ಬಾಲ್ ಕ್ರಿಕೆಟ್ ಯುಗ ಪ್ರವರ್ತಕ ಸ್ಮರಣಾರ್ಥ ರಂಗ ಇಲೆವೆನ್ ಕಪ್-2021

-

- Advertisment -spot_img
90 ರ ದಶಕದಲ್ಲಿ ರಂಗ ಇಲೆವೆನ್ ತಂಡವನ್ನು ಕಟ್ಟಿ ಬೆಳೆಸಿ,1999-2003-2007-2016 ರಲ್ಲಿ ಬೆಂಗಳೂರಿನ ಚೊಕ್ಕಸಂದ್ರದಲ್ಲಿ ಖಾಸಗಿಯಾಗಿಯೇ ಅತ್ಯಂತ ವೈಭವೋಪೇತ ಪಂದ್ಯಾವಳಿಗಳನ್ನು ಸಂಘಟಿಸಿ,ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಗಳಿಗೆ ಅಂತರಾಷ್ಟ್ರೀಯ ಮಟ್ಟದ ಮೆರುಗನ್ನು ನೀಡಿದವರು ರಂಗಣ್ಣ.
ಆ ದಿನಮಾನಗಳಲ್ಲಿ ರಂಗ ಇಲೆವೆನ್ ಪಂದ್ಯಾವಳಿಗೆ ಅಂತರಾಷ್ಟ್ರೀಯ ಆಟಗಾರರು,ರಣಜಿ ಆಟಗಾರರು,ಸಿನಿಮಾ ನಟರು,ರಾಜಕೀಯ ಧುರೀಣರನ್ನು ಆಹ್ವಾನಿಸಿ,ಅತ್ಯಂತ ಗರಿಷ್ಠ ಬಹುಮಾನಗಳ ಜೊತೆಗೆ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ದ್ವಿಚಕ್ರ ವಾಹನ,ಚತುಶ್ಚಕ್ರ ವಾಹನ(ಕಾರ್)ಗಳನ್ನು ಬಹುಮಾನ ರೂಪದಲ್ಲಿ ನೀಡಿದ್ದರು.2020 ರ ಡಿಸೆಂಬರ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಕೂಟ ನಡೆಸುವ ಬಗ್ಗೆ ಆಲೋಚನೆ ಹೊಂದಿದ್ದರು ಹಾಗೂ ಅದನ್ನು ಕಾರ್ಯರೂಪಕ್ಕೆ ತರುವ ಬಗ್ಗೆ 3,4 ಮೀಟಿಂಗ್ ಗಳನ್ನು ನಡೆಸಿದ್ದರು.ಹಲವಾರು ಯುವ ಪ್ರತಿಭೆಗಳಿಗೆ ಸಮರ್ಪಕ ವೇದಿಕೆ ಕಲ್ಪಿಸಿ,ಬಡ,ಅಶಕ್ತರಿಗೆ ಸಹಾಯ ಹಸ್ತ ನೀಡಿ,ಸರಳ ಸಜ್ಜನಿಕೆ ವ್ಯಕ್ತತ್ವದಿಂದ ಜನಾನುರಾಗಿಯಾಗಿ ಗುರುತಿಸಿಕೊಂಡು,ರಾಜಕೀಯ ರಂಗದಲ್ಲೂ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವದ್ಧಿಗಾಗಿ ಹಲವಾರು ಕನಸುಗಳನ್ನು ಕಂಡು,ಮಹತ್ತರ ಯೋಜನೆಗಳ ಅನುಷ್ಠಾನಕ್ಕೆ ಸರ್ವಸಿದ್ಧತೆಯಲ್ಲಿದ್ದ ರಂಗಣ್ಣದುರದೃಷ್ಟವಶಾತ್ 2019 ರ ಏಪ್ರಿಲ್ 21 ರಂದು ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ರಂಗಣ್ಣ ವಿಧಿವಶರಾಗಿದ್ದರು.
ಟೆನ್ನಿಸ್ಬಾಲ್ ಕ್ರಿಕೆಟ್ ರಂಗೇರಿಸಿ ಮರೆಯಾದ ಮಾಣಿಕ್ಯ ಸ್ಮರಣಾರ್ಥ,ಮನೋಜ್ ಯಾದವ್ ಸಾರಥ್ಯದಲ್ಲಿ
ಚೊಕ್ಕಸಂದ್ರ ಯುವಕರ ಸಂಘ(ರಿ)
ಚೊಕ್ಕಸಂದ್ರದ ಮಹಿಮಪ್ಪ ಶಾಲಾ ಆವರಣದಲ್ಲಿ ಏಪ್ರಿಲ್ 23,24 ಮತ್ತು 25 ರಂದು ಹೊನಲು ಬೆಳಕಿನ ಅದ್ಧೂರಿಯ ಶಾರ್ಟ್ ಪಿಚ್ ಕ್ರಿಕೆಟ್ ಪಂದ್ಯಾವಳಿ ರಂಗ ಇಲೆವೆನ್ ಕಪ್-2021 ಆಯೋಜಿಸಿದ್ದಾರೆ.
ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 2,22,222 ನಗದು ಹಾಗೂ ದ್ವಿತೀಯ ಸ್ಥಾನಿ 1,11,111 ನಗದು ಹಾಗೂ ಸೆಮಿಫೈನಲ್ಸ್ ನ ಪರಾಜಿತ ತಂಡಗಳಿಗೆ 22,222 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ‌.ಇದಲ್ಲದೇ ಪ್ರತಿ ಪಂದ್ಯದ ಪಂದ್ಯಶ್ರೇಷ್ಟ ಆಟಗಾರ ಸ್ಮಾರ್ಟ್ ವಾಚ್,ಬೆಸ್ಟ್ ಬ್ಯಾಟ್ಸ್‌ಮನ್‌ ಹಾಗೂ ಬೆಸ್ಟ್ ಬೌಲರ್ ‌32 ಇಂಚ್ ಎಲ್.ಇ.ಡಿ ಟಿ.ವಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆವ ಆಟಗಾರನಿಗೆ
ಟಿ.ವಿ‌.ಎಸ್ ಎನ್ಟಾರ್ಕ್-125 ದ್ವಿಚಕ್ರ ವಾಹನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ.
Y ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಹೆಚ್ಚಿನ ಮಾಹಿತಿಗಳಿಗೆ ಪಂದ್ಯಾವಳಿಯ ಆಯೋಜಕರಾದ
ಹರ್ಷ-9113553575,ಹರೀಶ್-9880649650,ದರ್ಶನ್-7829292336,ವಾಸುದೇವ್-9844499905,ಜಗದೀಶ್-9353779667 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × four =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you