15.6 C
London
Sunday, May 19, 2024
Homeಕ್ರಿಕೆಟ್ಬೆಂಗಳೂರು-ಟೆನ್ನಿಸ್ಬಾಲ್ ಕ್ರಿಕೆಟ್ ಯುಗ ಪ್ರವರ್ತಕ ಸ್ಮರಣಾರ್ಥ ರಂಗ ಇಲೆವೆನ್ ಕಪ್-2021

ಬೆಂಗಳೂರು-ಟೆನ್ನಿಸ್ಬಾಲ್ ಕ್ರಿಕೆಟ್ ಯುಗ ಪ್ರವರ್ತಕ ಸ್ಮರಣಾರ್ಥ ರಂಗ ಇಲೆವೆನ್ ಕಪ್-2021

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
90 ರ ದಶಕದಲ್ಲಿ ರಂಗ ಇಲೆವೆನ್ ತಂಡವನ್ನು ಕಟ್ಟಿ ಬೆಳೆಸಿ,1999-2003-2007-2016 ರಲ್ಲಿ ಬೆಂಗಳೂರಿನ ಚೊಕ್ಕಸಂದ್ರದಲ್ಲಿ ಖಾಸಗಿಯಾಗಿಯೇ ಅತ್ಯಂತ ವೈಭವೋಪೇತ ಪಂದ್ಯಾವಳಿಗಳನ್ನು ಸಂಘಟಿಸಿ,ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಗಳಿಗೆ ಅಂತರಾಷ್ಟ್ರೀಯ ಮಟ್ಟದ ಮೆರುಗನ್ನು ನೀಡಿದವರು ರಂಗಣ್ಣ.
ಆ ದಿನಮಾನಗಳಲ್ಲಿ ರಂಗ ಇಲೆವೆನ್ ಪಂದ್ಯಾವಳಿಗೆ ಅಂತರಾಷ್ಟ್ರೀಯ ಆಟಗಾರರು,ರಣಜಿ ಆಟಗಾರರು,ಸಿನಿಮಾ ನಟರು,ರಾಜಕೀಯ ಧುರೀಣರನ್ನು ಆಹ್ವಾನಿಸಿ,ಅತ್ಯಂತ ಗರಿಷ್ಠ ಬಹುಮಾನಗಳ ಜೊತೆಗೆ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ದ್ವಿಚಕ್ರ ವಾಹನ,ಚತುಶ್ಚಕ್ರ ವಾಹನ(ಕಾರ್)ಗಳನ್ನು ಬಹುಮಾನ ರೂಪದಲ್ಲಿ ನೀಡಿದ್ದರು.2020 ರ ಡಿಸೆಂಬರ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಕೂಟ ನಡೆಸುವ ಬಗ್ಗೆ ಆಲೋಚನೆ ಹೊಂದಿದ್ದರು ಹಾಗೂ ಅದನ್ನು ಕಾರ್ಯರೂಪಕ್ಕೆ ತರುವ ಬಗ್ಗೆ 3,4 ಮೀಟಿಂಗ್ ಗಳನ್ನು ನಡೆಸಿದ್ದರು.ಹಲವಾರು ಯುವ ಪ್ರತಿಭೆಗಳಿಗೆ ಸಮರ್ಪಕ ವೇದಿಕೆ ಕಲ್ಪಿಸಿ,ಬಡ,ಅಶಕ್ತರಿಗೆ ಸಹಾಯ ಹಸ್ತ ನೀಡಿ,ಸರಳ ಸಜ್ಜನಿಕೆ ವ್ಯಕ್ತತ್ವದಿಂದ ಜನಾನುರಾಗಿಯಾಗಿ ಗುರುತಿಸಿಕೊಂಡು,ರಾಜಕೀಯ ರಂಗದಲ್ಲೂ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವದ್ಧಿಗಾಗಿ ಹಲವಾರು ಕನಸುಗಳನ್ನು ಕಂಡು,ಮಹತ್ತರ ಯೋಜನೆಗಳ ಅನುಷ್ಠಾನಕ್ಕೆ ಸರ್ವಸಿದ್ಧತೆಯಲ್ಲಿದ್ದ ರಂಗಣ್ಣದುರದೃಷ್ಟವಶಾತ್ 2019 ರ ಏಪ್ರಿಲ್ 21 ರಂದು ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ರಂಗಣ್ಣ ವಿಧಿವಶರಾಗಿದ್ದರು.
ಟೆನ್ನಿಸ್ಬಾಲ್ ಕ್ರಿಕೆಟ್ ರಂಗೇರಿಸಿ ಮರೆಯಾದ ಮಾಣಿಕ್ಯ ಸ್ಮರಣಾರ್ಥ,ಮನೋಜ್ ಯಾದವ್ ಸಾರಥ್ಯದಲ್ಲಿ
ಚೊಕ್ಕಸಂದ್ರ ಯುವಕರ ಸಂಘ(ರಿ)
ಚೊಕ್ಕಸಂದ್ರದ ಮಹಿಮಪ್ಪ ಶಾಲಾ ಆವರಣದಲ್ಲಿ ಏಪ್ರಿಲ್ 23,24 ಮತ್ತು 25 ರಂದು ಹೊನಲು ಬೆಳಕಿನ ಅದ್ಧೂರಿಯ ಶಾರ್ಟ್ ಪಿಚ್ ಕ್ರಿಕೆಟ್ ಪಂದ್ಯಾವಳಿ ರಂಗ ಇಲೆವೆನ್ ಕಪ್-2021 ಆಯೋಜಿಸಿದ್ದಾರೆ.
ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 2,22,222 ನಗದು ಹಾಗೂ ದ್ವಿತೀಯ ಸ್ಥಾನಿ 1,11,111 ನಗದು ಹಾಗೂ ಸೆಮಿಫೈನಲ್ಸ್ ನ ಪರಾಜಿತ ತಂಡಗಳಿಗೆ 22,222 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ‌.ಇದಲ್ಲದೇ ಪ್ರತಿ ಪಂದ್ಯದ ಪಂದ್ಯಶ್ರೇಷ್ಟ ಆಟಗಾರ ಸ್ಮಾರ್ಟ್ ವಾಚ್,ಬೆಸ್ಟ್ ಬ್ಯಾಟ್ಸ್‌ಮನ್‌ ಹಾಗೂ ಬೆಸ್ಟ್ ಬೌಲರ್ ‌32 ಇಂಚ್ ಎಲ್.ಇ.ಡಿ ಟಿ.ವಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆವ ಆಟಗಾರನಿಗೆ
ಟಿ.ವಿ‌.ಎಸ್ ಎನ್ಟಾರ್ಕ್-125 ದ್ವಿಚಕ್ರ ವಾಹನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ.
Y ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಹೆಚ್ಚಿನ ಮಾಹಿತಿಗಳಿಗೆ ಪಂದ್ಯಾವಳಿಯ ಆಯೋಜಕರಾದ
ಹರ್ಷ-9113553575,ಹರೀಶ್-9880649650,ದರ್ಶನ್-7829292336,ವಾಸುದೇವ್-9844499905,ಜಗದೀಶ್-9353779667 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 − thirteen =