ಕ್ರಿಕೆಟ್LCL ಹಿರಿಯರ ಕ್ರಿಕೆಟ್ ಹಬ್ಬ- ಗೆಲುವಿನ ನಗೆ ಬೀರಿದ ರೆಡ್...

LCL ಹಿರಿಯರ ಕ್ರಿಕೆಟ್ ಹಬ್ಬ- ಗೆಲುವಿನ ನಗೆ ಬೀರಿದ ರೆಡ್ ಹಾಕ್ಸ್ ಉಳ್ಳಾಲ

-

- Advertisment -spot_img
ಹಿರಿಯ ಕ್ರಿಕೆಟ್ ಆಟಗಾರರಿಗೆ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವ ನಿಟ್ಟಿನಲ್ಲಿ ಮತ್ತು ಪರಸ್ಪರ ಭಾಂಧವ್ಯ, ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸುರತ್ಕಲ್ಲಿನಲ್ಲಿ 2 ದಿನಗಳ  ಕಾಲ ನಡೆದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 2  ಭರ್ಜರಿ ಯಶಸ್ಸು ಕಂಡಿದೆ.
12 ತಂಡಗಳು ಭಾಗವಹಿಸಿದ ಈ ಟೂರ್ನಮೆಂಟ್ ನಲ್ಲಿ ರೆಡ್ ಹಾಕ್ಸ್ ಉಳ್ಳಾಲ ತಂಡವು ಮಹಾಲಕ್ಷ್ಮಿ ವಾರಿಯರ್ಸ್ ಸೂರಿಂಜೆ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದಿತು. ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್( ರಿ ) ಸುರತ್ಕಲ್ ಈ ಕ್ರಿಕೆಟ್ ಪಂದ್ಯಾವಳಿಯನ್ನು ಸತತ ಎರಡನೇಯ ಬಾರಿಗೆ 40 ವರ್ಷ ಮೇಲ್ಪಟ್ಟ ಹಿರಿಯ ಆಟಗಾರರಿಗಾಗಿ  ಆಯೋಜಿಸಿತ್ತು. ವಿಜೇತ ತಂಡಕ್ಕೆ 1.01,000 ರೂ. + LCL ಕಪ್ ಮತ್ತು ರನ್ನರ್ ಅಪ್ ತಂಡಕ್ಕೆ 51,005 ರೂ.+ LCL ಕಪ್ ಗಳನ್ನು ನೀಡಿ ಗೌರವಿಸಲಾಯಿತು.
ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್( ರಿ ) ಸುರತ್ಕಲ್ ಇವರ ಆಶ್ರಯದಲ್ಲಿ “ಎಲ್ ಸಿ ಎಲ್ ಟ್ರೋಫಿ -2023” ಮೇ 27, 28 ರಂದು ಸುರತ್ಕಲ್ ನ  ಗೋವಿಂದದಾಸ್ ಕಾಲೇಜು ಕ್ರಿಕೆಟ್  ಮೈದಾನದಲ್ಲಿ ನಡೆಯಿತು.ಉತ್ತಮ ರೀತಿಯಲ್ಲಿ ಸಂಘಟಿಸಲ್ಪಟ್ಟ ಈ ಪಂದ್ಯಾಕೂಟವು  ದಕ್ಷಿಣ ಕನ್ನಡದಲ್ಲಿ ನೆಲೆಸಿರುವ ಹಿರಿಯ ಕ್ರಿಕೆಟ್ ಪ್ರೇಮಿಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ಯಶಸ್ವಿಯಾಯಿತು.
ಪಂದ್ಯಾವಳಿಯನ್ನು ಸಂಯೋಜಕರಾದ ಮಹಾಬಲ ಪೂಜಾರಿ ಕಡಂಬೋಡಿ , ಸಂಸ್ಥೆಯ ಮಹಾಪೋಷಕರು,  ಟೂರ್ನಮೆಂಟ್ ನ ಮಾರ್ಗದರ್ಶಕರಾದ ಸಹಾಯಕ ಪೊಲೀಸ್ ಆಯುಕ್ತರು ಮಹೇಶ್ ಎಸ ಕುಮಾರ್,  ಕೋರ್ ಕಮಿಟಿ ಸದಸ್ಯರುಗಳಾದ ಸಂದೀಪ್  ಕಡಂಬೋಡಿ, ಅನಂತ್ ರಾಜ್ ಶೆಟ್ಟಿಗಾರ್, ಪದ್ಮನಾಭ್ ಕರ್ಕೇರ, ದಿನೇಶ ಆಚಾರ್ಯ ಕುಳಾಯಿ, ಸುಧಾಕರ ತಡಂಬೈಲ್, ಮುರಳಿ BASF,  ಕೇಶವ, ಅಶ್ವಥ್, ದಯಾನಂದ, ವರುಣ್ ಶೆಟ್ಟಿಗಾರ್, ಹರೀಶ್ ಶೆಟ್ಟಿಗಾರ್, ಕಿರಣ್ ಆಚಾರ್ಯ, ನಾಗರಾಜ ಕಡಂಬೋಡಿ, ಗಿರೀಶ್ ಟಿ ಕಡಂಬೋಡಿ ಹಾಗೂ ಕ್ಲಬ್ ನ ಇನ್ನಿತರ ಸದಸ್ಯರುಗಳು ಸೇರಿ ಯಶಸ್ವಿಯಾಗಿ ಆಯೋಜಿಸಿದರು. ಪಂದ್ಯಾವಳಿಯ ಉತ್ತಮ ಆಯೋಜನೆ, ಸಮಯಪಾಲನೆ ಕುರಿತು ಎಲ್ಲಾ ತಂಡದ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರುಷ ರಾಜ್ಯ ಮಟ್ಟದ ಹಿರಿಯರ  ಕ್ರಿಕೆಟ್ ಟೂರ್ನಮೆಂಟ್ ನಡೆಸುವ ಇರಾದೆಯೂ ಕೂಡಾ ಇದೆ ಎಂದು ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
 ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್( ರಿ ) ಸುರತ್ಕಲ್ ನ  ಉಸ್ತುವಾರಿಕೆಯಲ್ಲಿ ಅದ್ಭುತವಾಗಿ ಮೂಡಿ ಬಂದ ಟೂರ್ನಮೆಂಟ್ ನ ಉತ್ಸಾಹ ಭರಿತ ಕ್ಷಣಗಳನ್ನು ಬೆದ್ರಾ ಮೀಡಿಯಾ  ಸೆರೆ ಹಿಡಿದು ನೇರ ಪ್ರಸಾರ ಗೊಳಿಸಿತು. ಶಿವನಾರಾಯಣ ಐತಾಳ್ ಕೋಟ, ಸೈಯದ್ ಗುರುಕಂಬಳ, ಸುರೇಶ್ ಭಟ್ ಮೂಲ್ಕಿ ಮತ್ತು ಪ್ರವೀಣ್ ಪಾವಂಜೆ ಇವರುಗಳು ಕಾಮೆಂಟ್ರಿಯನ್ನು ನಡೆಸಿಕೊಟ್ಟರು.
ಮಾಜಿ ಕ್ರಿಕೆಟಿಗರಿಗೆ 2 ದಿನಗಳ ಪಂದ್ಯಾವಳಿಯಲ್ಲಿ  ಹಲವು ವರ್ಷದ ಹಿಂದೆ ತಾವೆಲ್ಲರೂ ಒಟ್ಟಿಗೆ ಅನುಭವಿಸಿದ ಕೆಲವು ಮಾಂತ್ರಿಕ ಕ್ಷಣಗಳನ್ನು ಮೆಲುಕು ಹಾಕಲು ಅವಕಾಶ ಸಿಕ್ಕಿತು. ಪ್ರೇಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಬಂದು ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 2 ನ್ನು ಸಂತಸದಿಂದ ವೀಕ್ಷಿಸಿದರು.ಬಂದಂತಹ ಎಲ್ಲಾ ಪ್ರೇಕ್ಷಕರಿಗೂ ತಂಪು ಪಾನೀಯ, ಐಸ್ ಕ್ರೀಮ್, ತಂಪಾದ ಮಜ್ಜಿಗೆ, ಕಲ್ಲಂಗಡಿ ಹಣ್ಣು ಮತ್ತು  ಊಟವನ್ನು ಉಚಿತವಾಗಿ ವಿತರಿಸಲಾಯಿತು.
ಸ್ಪೋರ್ಟ್ಸ್ ಕನ್ನಡದ ಪ್ರವರ್ತಕ ಕೆ ಆರ್ ಕೆ ಆಚಾರ್ಯ ಅವರು ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದ್ದಾರೆ.
ಸುರೇಶ್ ಭಟ್ ಮೂಲ್ಕಿ
ಸ್ಪೋರ್ಟ್ಸ್ ಕನ್ನಡ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 12 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you