ಕ್ರಿಕೆಟ್Someone from RCB ಎಂದಿದ್ದವನಿಗೆ ಎಂಥಾ ಗತಿ ಬಂತು ನೋಡಿ!

Someone from RCB ಎಂದಿದ್ದವನಿಗೆ ಎಂಥಾ ಗತಿ ಬಂತು ನೋಡಿ!

-

- Advertisment -spot_img

Someone from RCB ಎಂದಿದ್ದವನಿಗೆ ಎಂಥಾ ಗತಿ ಬಂತು ನೋಡಿ!

ಐದು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್-2025 ಟೂರ್ನಿಯಲ್ಲಿ ಸತತ 4ನೇ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿದ್ದ ಚೆನ್ನೈ, ನಂತರದ ನಾಲ್ಕೂ ಪಂದ್ಯಗಳನ್ನು ಸೋತಿದೆ. ಮಂಗಳವಾರ ಚಂಡೀಗಢದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿತ್ತು. ಇದು ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಎದುರಿಸಿದ ಸತತ ನಾಲ್ಕನೇ ಸೋಲು. ಈ ಪಂದ್ಯದಲ್ಲಿ ಚೆನ್ನೈ ನಾಯಕ ರುತುರಾಜ್ ಕೇವಲ ಒಂದು ರನ್ ಗಳಿಸಿ ಪಂಜಾಬ್ ಪರ ಆಡುತ್ತಿರುವ ನ್ಯೂಜಿಲೆಂಡ್ ವೇಗಿ ಲ್ಯೂಕಿ ಫರ್ಗ್ಯುಸನ್’ಗೆ ವಿಕೆಟ್ ಒಪ್ಪಿಸಿದ್ದರು. ರುತುರಾಜ್ ಫರ್ಗ್ಯುಸನ್ ಬೌಲಿಂಗ್’ನಲ್ಲಿ ಔಟಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲೊಂದು ವೀಡಿಯೊ ವೈರಲ್ ಆಗಿದೆ.

ಐಪಿಎಲ್ ಆರಂಭಕ್ಕೂ ಮುನ್ನ ಬೆಂಗಳೂರಿಗೆ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಗಾಯಕ್ವಾಡ್ ಆಡಿದ್ದ ಮಾತೊಂದು ಈಗ ಭಾರೀ ಸದ್ದು ಮಾಡುತ್ತಿದೆ. ಖಾಸಗಿ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿದ್ದ ರುತುರಾಜ್ ಮೈಕ್ ಹಿಡಿದು ಮಾತಾಡಲು ಶುರು ಮಾಡಿದಾಗ ಮೈಕ್ ಕೈ ಕೊಟ್ಟಿತ್ತು. ಆಗ ‘ಇದು ಆರ್.ಸಿ.ಬಿಯವರದ್ದೇ ಕಿತಾಪತಿ’ ಇರಬೇಕು, someone from RCB ಎಂದು ರುತುರಾಜ್ ಹೇಳಿದ್ದ.

ಈ ಉಡಾಫೆ ಮತ್ತು ವ್ಯಂಗ್ಯದ ಮಾತು ಆರ್.ಸಿ.ಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಮಂಗಳವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರುತುರಾಜ್’ನನ್ನು ಔಟ್ ಮಾಡಿದ ಲ್ಯೂಕಿ ಫರ್ಗ್ಯುಸನ್ ಈ ಹಿಂದೆ ಆರ್.ಸಿ.ಬಿ ಪರ ಆಡಿದವರು. ಇದನ್ನೇ ಬಳಸಿಕೊಂಡಿರುವ ಆರ್.ಸಿ.ಬಿ ಅಭಿಮಾನಿಗಳು ನಿನ್ನನ್ನು ಈ ಬಾರಿ ಔಟ್ ಮಾಡಿದ್ದು someone from RCB ಎಂದು ರುತುರಾಜ್ ಗಾಯಕ್ವಾಡ್’ನನ್ನು ಕಿಚಾಯಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

7 + 19 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you